Homeಫ್ಯಾಕ್ಟ್‌ಚೆಕ್Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಮಾಜಿ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ರಾಜ್ಯಸಭೆಯಲ್ಲಿ ಪರಸ್ಪರ ಮಾತನಾಡಿರುವ ವಿಡಿಯೋವೊಂದು ಭಾರೀ ವೈರಲ್‌ ಆಗಿದ್ದು, “ಹಮೀದ್ ಅನ್ಸಾರಿ ಅವರು ನಮಾಝ್‌ಗೆ ತೆರಳುವ ಸಲುವಾಗಿ ರಾಜ್ಯಸಭೆ ಕಲಾಪವನ್ನು ಮುಂದೂಡುತ್ತಿದ್ದರು. ಈ ಕುರಿತು ಮಾಯಾವತಿ ರಾಜ್ಯಸಭೆಯಲ್ಲಿ ಪ್ರಶ್ನೆ ಎತ್ತಿದ್ದರು” ಎಂದು ಶೀರ್ಷಿಕೆ ಕೊಟ್ಟು ಹಂಚಿಕೊಳ್ಳಲಾಗ್ತಿದೆ.

ಫೆ.10, 2024ರಂದು ಆಂಧ್ರ ಪ್ರದೇಶ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, “ಹಮೀದ್ ಅನ್ಸಾರಿ ಅವರನ್ನು ಉಪ ರಾಷ್ಟ್ರಪತಿಯಾಗಿ ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಅವರು ಪ್ರಾರ್ಥನೆ ಸಲ್ಲಿಸಲು ಕಲಾಪದ ವೇಳೆ ಪ್ರತಿದಿನ 12:00 ಗಂಟೆಗೆ ರಾಜ್ಯಸಭೆಯಿಂದ ಹೊರಡುತ್ತಿದ್ದರು. ಎಲ್ಲಾ ಸದಸ್ಯರು ಸಾಂವಿಧಾನಿಕ ಕಲಾಪವನ್ನು ನಿಲ್ಲಿಸಿ, ಅವರ ವಾಪಸಾತಿಗೆ ಕಾಯುತ್ತಾ ಖಾಲಿ ಕೂರುತ್ತಿದ್ದರು. ಮಾಯಾವತಿ ಅವರು ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದರು. ಆದರೆ, ಕಾಂಗ್ರೆಸ್ ಅವರನ್ನು ಬೆಂಬಲಿಸಿರಲಿಲ್ಲ. ಈಗ ಕಾಂಗ್ರೆಸ್ ಜಾತ್ಯತೀತೆಯ ಬಗ್ಗೆ ಪಾಠ ಮಾಡುತ್ತಿದೆ” ಎಂದು ಬರೆದುಕೊಂಡಿದ್ದರು.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರು ಫೆ.7, 2024ರಂದು ಈ ವಿಡಿಯೋ ಹಂಚಿಕೊಂಡಿದ್ದು, “ಉಪರಾಷ್ಟ್ರಪತಿಯಾಗಿದ್ದ ಹಮೀದ್ ಅನ್ಸಾರಿ ಅವರು ರಾಜ್ಯಸಭೆ ಕಲಾಪವನ್ನು ಪ್ರತಿದಿನ 12:00 ಗಂಟೆಗೆ ಮುಂದೂಡಿ ನಮಾಜ್ ಮಾಡಲು ಹೋಗುತ್ತಿದ್ದರು. ಎಲ್ಲಾ ಸಂಸದರು ಸಂವಿಧಾನಾತ್ಮಕ ಕೆಲಸಗಳನ್ನು ನಿಲ್ಲಿಸಿ ಅವರಿಗಾಗಿ ಕಾಯುತ್ತಾ ಕೂರುತ್ತಿದ್ದರು. ಹಮೀದ್ ಅನ್ಸಾರಿ ಅವರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಮಾಯಾವತಿಯವರು ಈ ವಿಷಯವನ್ನು ಪ್ರಸ್ತಾಪಿಸಿದಾಗ, ಅನ್ಸಾರಿಯವರ ಉತ್ತರವನ್ನು ನೋಡಿ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಗೂಗಲ್‌ನಲ್ಲಿ ಈ ವಿಡಿಯೋ ಕುರಿತು ನಾವು ಹುಡುಕಾಟ ನಡೆಸಿದಾಗ, ಇದು 2012ರಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಗಿನ ರಾಜ್ಯಸಭೆ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಮಾಯಾವತಿ ನಡುವೆ ನಡೆದ ಚರ್ಚೆಯದ್ದು ಎಂದು ತಿಳಿದು ಬಂದಿದೆ. ವಿಡಿಯೋದಲ್ಲಿ “ಪ್ರತಿದಿನ 12 ಗಂಟೆಯ ನಂತರ ಕಲಾಪ ಸ್ಥಗಿತಗೊಳ್ಳುತ್ತಿದೆ. ನೀವು ಸದನದ ಅಧ್ಯಕ್ಷರು, ಪ್ರತಿದಿನ 12 ಗಂಟೆಗೆ ಎದ್ದು ಹೊರಡುತ್ತೀರಿ. ಹೀಗಾದರೆ ಯಾರು ಸಂಸತ್ತಿನ ಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ? ಸದನವು ಕ್ರಮ ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಿ” ಎಂದು ಹಮೀದ್ ಅನ್ಸಾರಿಗೆ ಮಾಯಾವತಿ ಹೇಳಿರುವುದನ್ನು ನೋಡಬಹುದು.

ಮಾಯಾವತಿ ಪ್ರಶ್ನೆ ಮಾಡುತ್ತಿದ್ದಂತೆ ಹಮೀದ್ ಅನ್ಸಾರಿ ಅವರು ಕುಳಿತುಕೊಳ್ಳುವಂತೆ ಮನವಿ ಮಾಡಿರುವುದು ವಿಡಿಯೋದಲ್ಲಿದೆ. ಇಲ್ಲಿ ಮಾಯಾವತಿ ಅವರು ಅನ್ಸಾರಿ ಅವರಿಗೆ ಪ್ರಶ್ನೆ ಕೇಳಿರುವ ವಿಡಿಯೋ ನಿಜವಾದದ್ದೆ. ಆದರೆ, ಮಾಯಾವತಿ “ನೀವು 12 ಗಂಟೆಗೆ ಎದ್ದು ಹೊರಡುತ್ತೀರಿ ಎಂದು ಹೇಳಿದ್ದಾರೆಯೇ ಹೊರತು, ಎಲ್ಲೂ ನಮಾಝ್‌ಗೆ ಎದ್ದು ಹೋಗುತ್ತೀರಿ” ಎಂದು ಹೇಳಿಲ್ಲ.

ಮಾಯಾವತಿ ಅವರು ಮಾತನಾಡಿರುವ ಸಂಪೂರ್ಣ ವಿಡಿಯೋ ಇಲ್ಲಿದೆ

ವೈರಲ್ ವಿಡಿಯೋವನ್ನು ಮೊದಲು ಫೆಬ್ರವರಿ 4,2024 ರಂದು ಬಹುಜನ ಸಮಾಜ ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಆ ಬಳಿಕ ಅದನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದು, ಅನ್ಸಾರಿ ಮತ್ತು ಕಾಂಗ್ರೆಸ್ ಮುಸ್ಲಿಂ ಪರ ಎಂದು ಆರೋಪಿಸಿದ್ದಾರೆ.

ಡಿಸೆಂಬರ್ 2012ರ ಮಾಧ್ಯಮ ವರದಿಗಳ ಪ್ರಕಾರ, ಮಾಯಾವತಿ ಅವರು ಸರ್ಕಾರಿ ಉದ್ಯೋಗ ಬಡ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯ ವಿಷಯದ ಬಗ್ಗೆ ಮಾತನಾಡಲು ಬಯಸಿದ್ದರು. ಆದರೆ, ಸಮಾಜವಾದಿ ಪಕ್ಷದ ಪ್ರತಿಭಟನೆಯಿಂದಾಗಿ ಸಂಸತ್ ಕಲಾಪ ಅಸ್ತವ್ಯಸ್ತಗೊಂಡಿತ್ತು. ಇದು ಮಾಯಾವತಿ ಅವರನ್ನು ಕೆರಳಿಸಿತ್ತು.

ವರದಿ ಲಿಂಕ್ ಇಲ್ಲಿದೆ 

ಅದೇ ದಿನ, ಮಾಯಾವತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದರು. “ಅನ್ಸಾರಿ ಅವರು ಪ್ರತಿದಿನ ಮಧ್ಯಾಹ್ನ ಸಂಸತ್ತಿನಿಂದ ಹೊರಡುತ್ತಾರೆ. ಮಧ್ಯಾಹ್ನದ ನಂತರ ಬೇರೆಯವರು ರಾಜ್ಯಸಭೆಯ ಅಧ್ಯಕ್ಷ ಪೀಠದಲ್ಲಿ ಕೂರುತ್ತಾರೆ. ಇದರಿಂದಾಗಿ ಸರ್ಕಾರಿ ಉದ್ಯೋಗ ಬಡ್ತಿಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಕೋಟಾ ಒದಗಿಸುವ ಮಸೂದೆಯನ್ನು ಚರ್ಚಿಸಲಾಗಲಿಲ್ಲ. ಸದನವನ್ನು ಕ್ರಮಬದ್ಧವಾಗಿಟ್ಟಿಲ್ಲ ಎಂದು ಅನ್ಸಾರಿ ಮತ್ತು ಸರ್ಕಾರವನ್ನು ಮಾಯಾವತಿ ದೂಷಿಸಿದ್ದರು.

ಈ ಘಟನೆಯ ಬಗ್ಗೆ ಹಮೀದ್ ಅನ್ಸಾರಿ ತಮ್ಮ ಆತ್ಮಚರಿತ್ರೆ “ಬೈ ಮೆನಿ ಎ ಹ್ಯಾಪಿ ಆಕ್ಸಿಡೆಂಟ್” ನಲ್ಲಿ ಬರೆದಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಅನ್ಸಾರಿ ಪ್ರಕಾರ, ಮಾಯಾವತಿ ಮರುದಿನ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಪುಸ್ತಕದಲ್ಲಿ ನಮಾಝ್‌ಗಾಗಿ ಎದ್ದು ಹೋಗಿದ್ದಕ್ಕೆ ಮಾಯಾವತಿ ಪ್ರಶ್ನೆ ಎತ್ತಿದ್ದರು ಎಂಬ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹಾಗಾಗಿ, ಇದು 12 ವರ್ಷಗಳ ಹಿಂದೆ ಸಂಸತ್ತಿನಲ್ಲಿ ನಡೆದ ಘಟನೆಯ ವಿಡಿಯೋವನ್ನು ಕೋಮು ಕೋನದಲ್ಲಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : Fact Check : ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಹಿಂದೂ ದೇವಾಲಯದ ಮೇಲೆ ದಾಳಿ ಮಾಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...