Homeಫ್ಯಾಕ್ಟ್‌ಚೆಕ್Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಮಾಜಿ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ರಾಜ್ಯಸಭೆಯಲ್ಲಿ ಪರಸ್ಪರ ಮಾತನಾಡಿರುವ ವಿಡಿಯೋವೊಂದು ಭಾರೀ ವೈರಲ್‌ ಆಗಿದ್ದು, “ಹಮೀದ್ ಅನ್ಸಾರಿ ಅವರು ನಮಾಝ್‌ಗೆ ತೆರಳುವ ಸಲುವಾಗಿ ರಾಜ್ಯಸಭೆ ಕಲಾಪವನ್ನು ಮುಂದೂಡುತ್ತಿದ್ದರು. ಈ ಕುರಿತು ಮಾಯಾವತಿ ರಾಜ್ಯಸಭೆಯಲ್ಲಿ ಪ್ರಶ್ನೆ ಎತ್ತಿದ್ದರು” ಎಂದು ಶೀರ್ಷಿಕೆ ಕೊಟ್ಟು ಹಂಚಿಕೊಳ್ಳಲಾಗ್ತಿದೆ.

ಫೆ.10, 2024ರಂದು ಆಂಧ್ರ ಪ್ರದೇಶ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, “ಹಮೀದ್ ಅನ್ಸಾರಿ ಅವರನ್ನು ಉಪ ರಾಷ್ಟ್ರಪತಿಯಾಗಿ ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಅವರು ಪ್ರಾರ್ಥನೆ ಸಲ್ಲಿಸಲು ಕಲಾಪದ ವೇಳೆ ಪ್ರತಿದಿನ 12:00 ಗಂಟೆಗೆ ರಾಜ್ಯಸಭೆಯಿಂದ ಹೊರಡುತ್ತಿದ್ದರು. ಎಲ್ಲಾ ಸದಸ್ಯರು ಸಾಂವಿಧಾನಿಕ ಕಲಾಪವನ್ನು ನಿಲ್ಲಿಸಿ, ಅವರ ವಾಪಸಾತಿಗೆ ಕಾಯುತ್ತಾ ಖಾಲಿ ಕೂರುತ್ತಿದ್ದರು. ಮಾಯಾವತಿ ಅವರು ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದರು. ಆದರೆ, ಕಾಂಗ್ರೆಸ್ ಅವರನ್ನು ಬೆಂಬಲಿಸಿರಲಿಲ್ಲ. ಈಗ ಕಾಂಗ್ರೆಸ್ ಜಾತ್ಯತೀತೆಯ ಬಗ್ಗೆ ಪಾಠ ಮಾಡುತ್ತಿದೆ” ಎಂದು ಬರೆದುಕೊಂಡಿದ್ದರು.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರು ಫೆ.7, 2024ರಂದು ಈ ವಿಡಿಯೋ ಹಂಚಿಕೊಂಡಿದ್ದು, “ಉಪರಾಷ್ಟ್ರಪತಿಯಾಗಿದ್ದ ಹಮೀದ್ ಅನ್ಸಾರಿ ಅವರು ರಾಜ್ಯಸಭೆ ಕಲಾಪವನ್ನು ಪ್ರತಿದಿನ 12:00 ಗಂಟೆಗೆ ಮುಂದೂಡಿ ನಮಾಜ್ ಮಾಡಲು ಹೋಗುತ್ತಿದ್ದರು. ಎಲ್ಲಾ ಸಂಸದರು ಸಂವಿಧಾನಾತ್ಮಕ ಕೆಲಸಗಳನ್ನು ನಿಲ್ಲಿಸಿ ಅವರಿಗಾಗಿ ಕಾಯುತ್ತಾ ಕೂರುತ್ತಿದ್ದರು. ಹಮೀದ್ ಅನ್ಸಾರಿ ಅವರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಮಾಯಾವತಿಯವರು ಈ ವಿಷಯವನ್ನು ಪ್ರಸ್ತಾಪಿಸಿದಾಗ, ಅನ್ಸಾರಿಯವರ ಉತ್ತರವನ್ನು ನೋಡಿ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಗೂಗಲ್‌ನಲ್ಲಿ ಈ ವಿಡಿಯೋ ಕುರಿತು ನಾವು ಹುಡುಕಾಟ ನಡೆಸಿದಾಗ, ಇದು 2012ರಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಗಿನ ರಾಜ್ಯಸಭೆ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಮಾಯಾವತಿ ನಡುವೆ ನಡೆದ ಚರ್ಚೆಯದ್ದು ಎಂದು ತಿಳಿದು ಬಂದಿದೆ. ವಿಡಿಯೋದಲ್ಲಿ “ಪ್ರತಿದಿನ 12 ಗಂಟೆಯ ನಂತರ ಕಲಾಪ ಸ್ಥಗಿತಗೊಳ್ಳುತ್ತಿದೆ. ನೀವು ಸದನದ ಅಧ್ಯಕ್ಷರು, ಪ್ರತಿದಿನ 12 ಗಂಟೆಗೆ ಎದ್ದು ಹೊರಡುತ್ತೀರಿ. ಹೀಗಾದರೆ ಯಾರು ಸಂಸತ್ತಿನ ಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ? ಸದನವು ಕ್ರಮ ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಿ” ಎಂದು ಹಮೀದ್ ಅನ್ಸಾರಿಗೆ ಮಾಯಾವತಿ ಹೇಳಿರುವುದನ್ನು ನೋಡಬಹುದು.

ಮಾಯಾವತಿ ಪ್ರಶ್ನೆ ಮಾಡುತ್ತಿದ್ದಂತೆ ಹಮೀದ್ ಅನ್ಸಾರಿ ಅವರು ಕುಳಿತುಕೊಳ್ಳುವಂತೆ ಮನವಿ ಮಾಡಿರುವುದು ವಿಡಿಯೋದಲ್ಲಿದೆ. ಇಲ್ಲಿ ಮಾಯಾವತಿ ಅವರು ಅನ್ಸಾರಿ ಅವರಿಗೆ ಪ್ರಶ್ನೆ ಕೇಳಿರುವ ವಿಡಿಯೋ ನಿಜವಾದದ್ದೆ. ಆದರೆ, ಮಾಯಾವತಿ “ನೀವು 12 ಗಂಟೆಗೆ ಎದ್ದು ಹೊರಡುತ್ತೀರಿ ಎಂದು ಹೇಳಿದ್ದಾರೆಯೇ ಹೊರತು, ಎಲ್ಲೂ ನಮಾಝ್‌ಗೆ ಎದ್ದು ಹೋಗುತ್ತೀರಿ” ಎಂದು ಹೇಳಿಲ್ಲ.

ಮಾಯಾವತಿ ಅವರು ಮಾತನಾಡಿರುವ ಸಂಪೂರ್ಣ ವಿಡಿಯೋ ಇಲ್ಲಿದೆ

ವೈರಲ್ ವಿಡಿಯೋವನ್ನು ಮೊದಲು ಫೆಬ್ರವರಿ 4,2024 ರಂದು ಬಹುಜನ ಸಮಾಜ ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಆ ಬಳಿಕ ಅದನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದು, ಅನ್ಸಾರಿ ಮತ್ತು ಕಾಂಗ್ರೆಸ್ ಮುಸ್ಲಿಂ ಪರ ಎಂದು ಆರೋಪಿಸಿದ್ದಾರೆ.

ಡಿಸೆಂಬರ್ 2012ರ ಮಾಧ್ಯಮ ವರದಿಗಳ ಪ್ರಕಾರ, ಮಾಯಾವತಿ ಅವರು ಸರ್ಕಾರಿ ಉದ್ಯೋಗ ಬಡ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯ ವಿಷಯದ ಬಗ್ಗೆ ಮಾತನಾಡಲು ಬಯಸಿದ್ದರು. ಆದರೆ, ಸಮಾಜವಾದಿ ಪಕ್ಷದ ಪ್ರತಿಭಟನೆಯಿಂದಾಗಿ ಸಂಸತ್ ಕಲಾಪ ಅಸ್ತವ್ಯಸ್ತಗೊಂಡಿತ್ತು. ಇದು ಮಾಯಾವತಿ ಅವರನ್ನು ಕೆರಳಿಸಿತ್ತು.

ವರದಿ ಲಿಂಕ್ ಇಲ್ಲಿದೆ 

ಅದೇ ದಿನ, ಮಾಯಾವತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದರು. “ಅನ್ಸಾರಿ ಅವರು ಪ್ರತಿದಿನ ಮಧ್ಯಾಹ್ನ ಸಂಸತ್ತಿನಿಂದ ಹೊರಡುತ್ತಾರೆ. ಮಧ್ಯಾಹ್ನದ ನಂತರ ಬೇರೆಯವರು ರಾಜ್ಯಸಭೆಯ ಅಧ್ಯಕ್ಷ ಪೀಠದಲ್ಲಿ ಕೂರುತ್ತಾರೆ. ಇದರಿಂದಾಗಿ ಸರ್ಕಾರಿ ಉದ್ಯೋಗ ಬಡ್ತಿಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಕೋಟಾ ಒದಗಿಸುವ ಮಸೂದೆಯನ್ನು ಚರ್ಚಿಸಲಾಗಲಿಲ್ಲ. ಸದನವನ್ನು ಕ್ರಮಬದ್ಧವಾಗಿಟ್ಟಿಲ್ಲ ಎಂದು ಅನ್ಸಾರಿ ಮತ್ತು ಸರ್ಕಾರವನ್ನು ಮಾಯಾವತಿ ದೂಷಿಸಿದ್ದರು.

ಈ ಘಟನೆಯ ಬಗ್ಗೆ ಹಮೀದ್ ಅನ್ಸಾರಿ ತಮ್ಮ ಆತ್ಮಚರಿತ್ರೆ “ಬೈ ಮೆನಿ ಎ ಹ್ಯಾಪಿ ಆಕ್ಸಿಡೆಂಟ್” ನಲ್ಲಿ ಬರೆದಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಅನ್ಸಾರಿ ಪ್ರಕಾರ, ಮಾಯಾವತಿ ಮರುದಿನ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಪುಸ್ತಕದಲ್ಲಿ ನಮಾಝ್‌ಗಾಗಿ ಎದ್ದು ಹೋಗಿದ್ದಕ್ಕೆ ಮಾಯಾವತಿ ಪ್ರಶ್ನೆ ಎತ್ತಿದ್ದರು ಎಂಬ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹಾಗಾಗಿ, ಇದು 12 ವರ್ಷಗಳ ಹಿಂದೆ ಸಂಸತ್ತಿನಲ್ಲಿ ನಡೆದ ಘಟನೆಯ ವಿಡಿಯೋವನ್ನು ಕೋಮು ಕೋನದಲ್ಲಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : Fact Check : ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಹಿಂದೂ ದೇವಾಲಯದ ಮೇಲೆ ದಾಳಿ ಮಾಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...