Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು ಎಂಬ ಬರಹವಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರೈಸ್ತರು ಕೂಡ ನಿಯಂತ್ರಿಸಬಹುದಾದ ಹೊಸ ಕಾನೂನನ್ನು ಕೇರಳ ಸರ್ಕಾರ ತಂದಿದೆ ಎಂಬ ಹೇಳಿಕೆಯೊಂದಿಗಿರುವ ಚಿತ್ರವೊಂದು ವೈರಲ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೇರಳ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ ಇದನ್ನು ಅಲ್ಲಗೆಳೆದು, ದೇವಾಲಯದ ನಿರ್ವಹಣೆ ಸೇರಿದಂತೆ ಎಲ್ಲಾ ನೌಕರರು ಹಿಂದೂ ಧರ್ಮಕ್ಕೆ ಸೇರಿದವರಾಗಿರಬೇಕು ಎಂಬ ಕಾನೂನು ಇದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

“ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು” ಎಂಬ ಬರಹವಿರುವ ಚಿತ್ರಗಳು ಹರಿದಾಡುತ್ತಿದೆ.

ಫ್ಯಾಕ್ಟ್ ಚೆಕ್:

ಮೊದಲನೆಯದಾಗಿ ವೈರಲ್ ಸಂದೇಶದಲ್ಲಿ ಹರಿದಾಡುತ್ತಿರುವಂತೆ ಕೇರಳ ಸರ್ಕಾರ ಇತ್ತೀಚೆಗೆ ದೇವಾಲಯ ನಿರ್ವಹಣೆಗೆ ಸಂಬಂಧಿಸಿದ ಯಾವುದೇ ಆದೇಶಗಳನ್ನು ಮಾಡಿಲ್ಲ.

ವೈರಲ್‌ ಪೋಸ್ಟ್‌ ಬಗ್ಗೆ ಪ್ರತಿಕ್ರಿಸಿರುವ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ “ಕೇರಳದ ದೇವಾಲಯಗಳನ್ನು ನಿಯಂತ್ರಿಸುವ ಮೂರು ಕಾನೂನುಗಳಿವೆ. ಈ ಎಲ್ಲಾ ಕೆಲಸ/ಕಾರ್ಯಗಳಲ್ಲಿ ನೌಕರರು ಮತ್ತು ನಿರ್ವಹಣಾಕಾರರು ಹಿಂದೂ ಧರ್ಮದವರೇ ಇರಬೇಕು ಎಂಬ ನಿರ್ದಿಷ್ಟ ನಿಬಂಧನೆ ಇದೆ.” ತಿಳಿಸಿದ್ದಾರೆ.

ಕೇರಳ ರಾಜ್ಯದ ದೇವಾಲಯಗಳನ್ನು ಯಾರು ನಿಯಂತ್ರಿಸುತ್ತಾರೆ ಎಂಬುದಕ್ಕೆ ನಿರ್ದಿಷ್ಟ ನಿಬಂಧನೆಗಳಿದ್ದು, ಅದು ಹೀಗಿದೆ:

‘ಕೇರಳದ ದೇವಸ್ವಂ ಮಂಡಳಿಗಳು ಮತ್ತು ದೇವಾಲಯಗಳ ಆಡಳಿತ’ ಎಂಬ ಶೀರ್ಷಿಕೆಯ ಶೋಧಗಂಗದಲ್ಲಿ ಪ್ರಕಟವಾದ ಅಧ್ಯಾಯದ ಪ್ರಕಾರ, ಎಲ್ಲಾ ದೇವಾಲಯಗಳನ್ನು ಸಾಮಾಜಿಕ-ಧಾರ್ಮಿಕ ಟ್ರಸ್ಟ್‌ಗಳಾದ ಸರ್ಕಾರಿ ನಿಯಂತ್ರಿತ ದೇವಸ್ವಂಗಳು ಅಥವಾ ಖಾಸಗಿ ಸಂಸ್ಥೆಗಳು / ಕುಟುಂಬಗಳು ನಿರ್ವಹಿಸುತ್ತವೆ. ಅವುಗಳ ಸದಸ್ಯರು ಹಿಂದೂಗಳೇ ಆಗಿರುತ್ತಾರೆ. ಕೇರಳದಲ್ಲಿ ಐದು ವಿಭಿನ್ನ ದೇವಸ್ವಂ ಮಂಡಳಿಗಳಿವೆ. ಎಲ್ಲಾ ಐದು ದೇವಸ್ವಂ ಮಂಡಳಿಗಳು ಹಿಂದೂ ಸದಸ್ಯರನ್ನು ಹೊಂದಿವೆ.

ದೇವಾಲಯ ನಿರ್ವಹಣಾ ಆದೇಶಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶದ ಯಾವುದೇ ವರದಿಗಳು ದೊರೆಯದಿದ್ದರೂ, 2018ರಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿದ್ದ ಲೇಖನದಲ್ಲಿ ದೇವಸ್ವಂ ಮಂಡಳಿಯ ಮುಖ್ಯಸ್ಥರು ಹಿಂದೂಗಳೆ ಆಗಿರಬೇಕು ಎನ್ನುವುದು ಸ್ಪಷ್ಟವಾಗಿ ಹೇಳಿದೆ.

ದಿ ಹಿಂದೂ ಲೇಖನದ ಪ್ರಕಾರ, 1950 ರ ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ XV (ಟಿಸಿಆರ್ಐ) ಯಡಿಯಲ್ಲಿ ರಚಿಸಲಾದ ಸ್ವಾಯತ್ತ ಸಂಸ್ಥೆಯಾದ ತಿರುವಾಂಕೂರು ದೇವಸ್ವಂ ಮಂಡಳಿ ಮತ್ತು ಕೊಚ್ಚಿನ್ ದೇವಸ್ವಂ ಮಂಡಳಿಗಳಿಗೆ ಆಯುಕ್ತರನ್ನಾಗಿ ಹಿಂದೂಗಳನ್ನು ಮಾತ್ರ ನೇಮಕ ಮಾಡಲಿದೆ ಎಂದು ಕೇರಳ ಸರ್ಕಾರ ಕೇರಳ ಹೈಕೋರ್ಟ್‌ಗೆ ತಿಳಿಸಿದೆ.

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ಕ್ಕೆ ತಿದ್ದುಪಡಿ ಮೂಲಕ ಹಿಂದೂಯೇತರರನ್ನು ದೇವಸ್ವಂ ಆಯುಕ್ತರನ್ನಾಗಿ ನೇಮಕ ಮಾಡಲು ಕೇರಳ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಎಸ್.ಶ್ರೀಧರನ್ ಪಿಳ್ಳೈ ಎಂಬವರು 2018ರಲ್ಲಿ ಸಲ್ಲಿಸಿದ ರಿಟ್ ಅನ್ನು ನ್ಯಾಯಾಲಯವು ಆಲಿಸಿತ್ತು, ಆಗ ಕೇರಳ ಸರ್ಕಾರ ಈ ಬಗ್ಗೆ ಉತ್ತರಿಸುತ್ತಾ ಮೇಲಿನಂತೆ ಹೇಳಿದೆ.

2018ರಲ್ಲಿ ಕೇರಳ ಸರ್ಕಾರ ನೀಡಿದ ತೀರ್ಪಿನ ಪ್ರತಿ

2018 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಿಕ್ರಿಯಿಸಿದ್ದ ರಾಜಗೋಪಾಲನ್, “ತಿದ್ದುಪಡಿಯಲ್ಲಿ ಒಂದು ಗೊಂದಲವಿದೆ. ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೆಲವರು ಉದ್ದೇಶಪೂರ್ವಕವಾಗಿ ಈ ಗೊಂದಲವನ್ನು ಸೃಷ್ಟಿಸಿದ್ದರು. ಆದರೆ, ಮಂಡಳಿಗೆ ನೇಮಕವಾಗುವ ಆಯುಕ್ತರು ಸೇರಿದಂತೆ ಎಲ್ಲಾ ಉದ್ಯೋಗಿಗಳು ಹಿಂದೂಗಳಾಗಿರಬೇಕು ಎಂದು ಆಯುಕ್ತರನ್ನು ನೇಮಕ ಮಾಡಲು ಮಾಡಿದ ನಿಬಂಧನೆಗಳಲ್ಲಿ ಮಂಡಳಿಯು ನಿರ್ದಿಷ್ಟವಾಗಿ ಹೇಳಿದೆ. ಆಯುಕ್ತರಷ್ಟೇ ಅಲ್ಲದೆ ಎಲ್ಲಾ ಉದ್ಯೋಗಿಗಳೂ ಹಿಂದೂಗಳೇ ಆಗಿರಲಿದ್ದಾರೆ” ಎಂದು ಅವರು ಹೇಳಿದ್ದರು.

ವೈರಲ್‌ ಆಗುತ್ತಿರುವ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆ ಸುಳ್ಳಾಗಿದ್ದು, ಕೇರಳದ ಎಲ್ಲಾ ದೇವಾಲಯಗಳನ್ನು ಹಿಂದೂಗಳು ಮಾತ್ರ ನಿಯಂತ್ರಿಸುತ್ತಾರೆ. ಪ್ರಸ್ತುತ ಆಯುಕ್ತರು ಕೂಡ ಹಿಂದೂ ಎಂದು ದೇವಸ್ವಂ ಮಂಡಳಿಗೆ ಸಂಬಂಧಿಸಿದ ಮೂಲಗಳು ತಿಳಿಸಿವೆ.

ಕಾನೂನು ಏನು ಹೇಳುತ್ತದೆ?

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ರ ಸೆಕ್ಷನ್ 29 (1), ದೇವಸ್ವಂ ಇಲಾಖೆಯು ಹಿಂದೂ ಅಧಿಕಾರಿಗಳನ್ನು ಒಳಗೊಂಡಿರಬೇಕು ಎಂದು ಹೇಳಿದೆ.

“1097 ರಲ್ಲಿ ರಚಿಸಲಾದ ದೇವಸ್ವಂ ಇಲಾಖೆಯು ಮುಂದುವರಿಯುತ್ತದೆ ಮತ್ತು ಕಾಲಕಾಲಕ್ಕೆ ಮಂಡಳಿಯು ನಿರ್ಧರಿಸುವಂತಹ ಹಿಂದೂ ಅಧಿಕಾರಿಗಳು ಮತ್ತು ಇತರ ಸೇವಕರನ್ನು ಒಳಗೊಂಡಿರುತ್ತದೆ” ಎಂದು ಅದು ಹೇಳಿದೆ.

ಇದಲ್ಲದೆ, ಮಂಡಳಿಯ ನಾಮನಿರ್ದೇಶನ ಅರ್ಹತೆಗೆ ಸಂಬಂಧಿಸಿದಂತೆ “ಒಬ್ಬ ವ್ಯಕ್ತಿಯು ತಿರುವಾಂಕೂರು-ಕೊಚ್ಚಿನ್ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದೂ ಧರ್ಮವನ್ನು ಪ್ರತಿಪಾದಿಸದ ಹೊರತು ಮಂಡಳಿಯ ಸದಸ್ಯನಾಗಿ ನಾಮನಿರ್ದೇಶನ ಅಥವಾ ಚುನಾವಣೆಗೆ ಅರ್ಹನಾಗಿರುವುದಿಲ್ಲ.” ಎಂದು ಕಾಯಿದೆಯ ಸೆಕ್ಷನ್ 6 ರಲ್ಲಿ ಹೇಳಲಾಗಿದೆ.

ಹಾಗಾಗಿ ಸ್ಪಷ್ಟವಾಗಿ ಹೇಳುವುದಾದರೆ, ಕೇರಳ ಸರ್ಕಾರವು ಹಿಂದೂ ಅಲ್ಲದವರಿಗೆ ರಾಜ್ಯದ ದೇವಾಲಯಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುವ ಹೊಸ ಕಾನೂನನ್ನು ಜಾರಿಗೆ ತಂದಿದೆ ಎಂಬುವುದು ಸುಳ್ಳಾಗಿದ್ದು, ಆ ರೀತಿಯ ಯಾವುದೇ ಕಾನೂನುಗಳನ್ನು ಕೇರಳ ಸರ್ಕಾರ ರೂಪಿಸಿಲ್ಲ.


ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...