Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು ಎಂಬ ಬರಹವಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರೈಸ್ತರು ಕೂಡ ನಿಯಂತ್ರಿಸಬಹುದಾದ ಹೊಸ ಕಾನೂನನ್ನು ಕೇರಳ ಸರ್ಕಾರ ತಂದಿದೆ ಎಂಬ ಹೇಳಿಕೆಯೊಂದಿಗಿರುವ ಚಿತ್ರವೊಂದು ವೈರಲ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೇರಳ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ ಇದನ್ನು ಅಲ್ಲಗೆಳೆದು, ದೇವಾಲಯದ ನಿರ್ವಹಣೆ ಸೇರಿದಂತೆ ಎಲ್ಲಾ ನೌಕರರು ಹಿಂದೂ ಧರ್ಮಕ್ಕೆ ಸೇರಿದವರಾಗಿರಬೇಕು ಎಂಬ ಕಾನೂನು ಇದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

“ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು” ಎಂಬ ಬರಹವಿರುವ ಚಿತ್ರಗಳು ಹರಿದಾಡುತ್ತಿದೆ.

ಫ್ಯಾಕ್ಟ್ ಚೆಕ್:

ಮೊದಲನೆಯದಾಗಿ ವೈರಲ್ ಸಂದೇಶದಲ್ಲಿ ಹರಿದಾಡುತ್ತಿರುವಂತೆ ಕೇರಳ ಸರ್ಕಾರ ಇತ್ತೀಚೆಗೆ ದೇವಾಲಯ ನಿರ್ವಹಣೆಗೆ ಸಂಬಂಧಿಸಿದ ಯಾವುದೇ ಆದೇಶಗಳನ್ನು ಮಾಡಿಲ್ಲ.

ವೈರಲ್‌ ಪೋಸ್ಟ್‌ ಬಗ್ಗೆ ಪ್ರತಿಕ್ರಿಸಿರುವ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ “ಕೇರಳದ ದೇವಾಲಯಗಳನ್ನು ನಿಯಂತ್ರಿಸುವ ಮೂರು ಕಾನೂನುಗಳಿವೆ. ಈ ಎಲ್ಲಾ ಕೆಲಸ/ಕಾರ್ಯಗಳಲ್ಲಿ ನೌಕರರು ಮತ್ತು ನಿರ್ವಹಣಾಕಾರರು ಹಿಂದೂ ಧರ್ಮದವರೇ ಇರಬೇಕು ಎಂಬ ನಿರ್ದಿಷ್ಟ ನಿಬಂಧನೆ ಇದೆ.” ತಿಳಿಸಿದ್ದಾರೆ.

ಕೇರಳ ರಾಜ್ಯದ ದೇವಾಲಯಗಳನ್ನು ಯಾರು ನಿಯಂತ್ರಿಸುತ್ತಾರೆ ಎಂಬುದಕ್ಕೆ ನಿರ್ದಿಷ್ಟ ನಿಬಂಧನೆಗಳಿದ್ದು, ಅದು ಹೀಗಿದೆ:

‘ಕೇರಳದ ದೇವಸ್ವಂ ಮಂಡಳಿಗಳು ಮತ್ತು ದೇವಾಲಯಗಳ ಆಡಳಿತ’ ಎಂಬ ಶೀರ್ಷಿಕೆಯ ಶೋಧಗಂಗದಲ್ಲಿ ಪ್ರಕಟವಾದ ಅಧ್ಯಾಯದ ಪ್ರಕಾರ, ಎಲ್ಲಾ ದೇವಾಲಯಗಳನ್ನು ಸಾಮಾಜಿಕ-ಧಾರ್ಮಿಕ ಟ್ರಸ್ಟ್‌ಗಳಾದ ಸರ್ಕಾರಿ ನಿಯಂತ್ರಿತ ದೇವಸ್ವಂಗಳು ಅಥವಾ ಖಾಸಗಿ ಸಂಸ್ಥೆಗಳು / ಕುಟುಂಬಗಳು ನಿರ್ವಹಿಸುತ್ತವೆ. ಅವುಗಳ ಸದಸ್ಯರು ಹಿಂದೂಗಳೇ ಆಗಿರುತ್ತಾರೆ. ಕೇರಳದಲ್ಲಿ ಐದು ವಿಭಿನ್ನ ದೇವಸ್ವಂ ಮಂಡಳಿಗಳಿವೆ. ಎಲ್ಲಾ ಐದು ದೇವಸ್ವಂ ಮಂಡಳಿಗಳು ಹಿಂದೂ ಸದಸ್ಯರನ್ನು ಹೊಂದಿವೆ.

ದೇವಾಲಯ ನಿರ್ವಹಣಾ ಆದೇಶಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶದ ಯಾವುದೇ ವರದಿಗಳು ದೊರೆಯದಿದ್ದರೂ, 2018ರಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿದ್ದ ಲೇಖನದಲ್ಲಿ ದೇವಸ್ವಂ ಮಂಡಳಿಯ ಮುಖ್ಯಸ್ಥರು ಹಿಂದೂಗಳೆ ಆಗಿರಬೇಕು ಎನ್ನುವುದು ಸ್ಪಷ್ಟವಾಗಿ ಹೇಳಿದೆ.

ದಿ ಹಿಂದೂ ಲೇಖನದ ಪ್ರಕಾರ, 1950 ರ ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ XV (ಟಿಸಿಆರ್ಐ) ಯಡಿಯಲ್ಲಿ ರಚಿಸಲಾದ ಸ್ವಾಯತ್ತ ಸಂಸ್ಥೆಯಾದ ತಿರುವಾಂಕೂರು ದೇವಸ್ವಂ ಮಂಡಳಿ ಮತ್ತು ಕೊಚ್ಚಿನ್ ದೇವಸ್ವಂ ಮಂಡಳಿಗಳಿಗೆ ಆಯುಕ್ತರನ್ನಾಗಿ ಹಿಂದೂಗಳನ್ನು ಮಾತ್ರ ನೇಮಕ ಮಾಡಲಿದೆ ಎಂದು ಕೇರಳ ಸರ್ಕಾರ ಕೇರಳ ಹೈಕೋರ್ಟ್‌ಗೆ ತಿಳಿಸಿದೆ.

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ಕ್ಕೆ ತಿದ್ದುಪಡಿ ಮೂಲಕ ಹಿಂದೂಯೇತರರನ್ನು ದೇವಸ್ವಂ ಆಯುಕ್ತರನ್ನಾಗಿ ನೇಮಕ ಮಾಡಲು ಕೇರಳ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಎಸ್.ಶ್ರೀಧರನ್ ಪಿಳ್ಳೈ ಎಂಬವರು 2018ರಲ್ಲಿ ಸಲ್ಲಿಸಿದ ರಿಟ್ ಅನ್ನು ನ್ಯಾಯಾಲಯವು ಆಲಿಸಿತ್ತು, ಆಗ ಕೇರಳ ಸರ್ಕಾರ ಈ ಬಗ್ಗೆ ಉತ್ತರಿಸುತ್ತಾ ಮೇಲಿನಂತೆ ಹೇಳಿದೆ.

2018ರಲ್ಲಿ ಕೇರಳ ಸರ್ಕಾರ ನೀಡಿದ ತೀರ್ಪಿನ ಪ್ರತಿ

2018 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಿಕ್ರಿಯಿಸಿದ್ದ ರಾಜಗೋಪಾಲನ್, “ತಿದ್ದುಪಡಿಯಲ್ಲಿ ಒಂದು ಗೊಂದಲವಿದೆ. ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೆಲವರು ಉದ್ದೇಶಪೂರ್ವಕವಾಗಿ ಈ ಗೊಂದಲವನ್ನು ಸೃಷ್ಟಿಸಿದ್ದರು. ಆದರೆ, ಮಂಡಳಿಗೆ ನೇಮಕವಾಗುವ ಆಯುಕ್ತರು ಸೇರಿದಂತೆ ಎಲ್ಲಾ ಉದ್ಯೋಗಿಗಳು ಹಿಂದೂಗಳಾಗಿರಬೇಕು ಎಂದು ಆಯುಕ್ತರನ್ನು ನೇಮಕ ಮಾಡಲು ಮಾಡಿದ ನಿಬಂಧನೆಗಳಲ್ಲಿ ಮಂಡಳಿಯು ನಿರ್ದಿಷ್ಟವಾಗಿ ಹೇಳಿದೆ. ಆಯುಕ್ತರಷ್ಟೇ ಅಲ್ಲದೆ ಎಲ್ಲಾ ಉದ್ಯೋಗಿಗಳೂ ಹಿಂದೂಗಳೇ ಆಗಿರಲಿದ್ದಾರೆ” ಎಂದು ಅವರು ಹೇಳಿದ್ದರು.

ವೈರಲ್‌ ಆಗುತ್ತಿರುವ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆ ಸುಳ್ಳಾಗಿದ್ದು, ಕೇರಳದ ಎಲ್ಲಾ ದೇವಾಲಯಗಳನ್ನು ಹಿಂದೂಗಳು ಮಾತ್ರ ನಿಯಂತ್ರಿಸುತ್ತಾರೆ. ಪ್ರಸ್ತುತ ಆಯುಕ್ತರು ಕೂಡ ಹಿಂದೂ ಎಂದು ದೇವಸ್ವಂ ಮಂಡಳಿಗೆ ಸಂಬಂಧಿಸಿದ ಮೂಲಗಳು ತಿಳಿಸಿವೆ.

ಕಾನೂನು ಏನು ಹೇಳುತ್ತದೆ?

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ರ ಸೆಕ್ಷನ್ 29 (1), ದೇವಸ್ವಂ ಇಲಾಖೆಯು ಹಿಂದೂ ಅಧಿಕಾರಿಗಳನ್ನು ಒಳಗೊಂಡಿರಬೇಕು ಎಂದು ಹೇಳಿದೆ.

“1097 ರಲ್ಲಿ ರಚಿಸಲಾದ ದೇವಸ್ವಂ ಇಲಾಖೆಯು ಮುಂದುವರಿಯುತ್ತದೆ ಮತ್ತು ಕಾಲಕಾಲಕ್ಕೆ ಮಂಡಳಿಯು ನಿರ್ಧರಿಸುವಂತಹ ಹಿಂದೂ ಅಧಿಕಾರಿಗಳು ಮತ್ತು ಇತರ ಸೇವಕರನ್ನು ಒಳಗೊಂಡಿರುತ್ತದೆ” ಎಂದು ಅದು ಹೇಳಿದೆ.

ಇದಲ್ಲದೆ, ಮಂಡಳಿಯ ನಾಮನಿರ್ದೇಶನ ಅರ್ಹತೆಗೆ ಸಂಬಂಧಿಸಿದಂತೆ “ಒಬ್ಬ ವ್ಯಕ್ತಿಯು ತಿರುವಾಂಕೂರು-ಕೊಚ್ಚಿನ್ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದೂ ಧರ್ಮವನ್ನು ಪ್ರತಿಪಾದಿಸದ ಹೊರತು ಮಂಡಳಿಯ ಸದಸ್ಯನಾಗಿ ನಾಮನಿರ್ದೇಶನ ಅಥವಾ ಚುನಾವಣೆಗೆ ಅರ್ಹನಾಗಿರುವುದಿಲ್ಲ.” ಎಂದು ಕಾಯಿದೆಯ ಸೆಕ್ಷನ್ 6 ರಲ್ಲಿ ಹೇಳಲಾಗಿದೆ.

ಹಾಗಾಗಿ ಸ್ಪಷ್ಟವಾಗಿ ಹೇಳುವುದಾದರೆ, ಕೇರಳ ಸರ್ಕಾರವು ಹಿಂದೂ ಅಲ್ಲದವರಿಗೆ ರಾಜ್ಯದ ದೇವಾಲಯಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುವ ಹೊಸ ಕಾನೂನನ್ನು ಜಾರಿಗೆ ತಂದಿದೆ ಎಂಬುವುದು ಸುಳ್ಳಾಗಿದ್ದು, ಆ ರೀತಿಯ ಯಾವುದೇ ಕಾನೂನುಗಳನ್ನು ಕೇರಳ ಸರ್ಕಾರ ರೂಪಿಸಿಲ್ಲ.


ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...