Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು ಎಂಬ ಬರಹವಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರೈಸ್ತರು ಕೂಡ ನಿಯಂತ್ರಿಸಬಹುದಾದ ಹೊಸ ಕಾನೂನನ್ನು ಕೇರಳ ಸರ್ಕಾರ ತಂದಿದೆ ಎಂಬ ಹೇಳಿಕೆಯೊಂದಿಗಿರುವ ಚಿತ್ರವೊಂದು ವೈರಲ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೇರಳ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ ಇದನ್ನು ಅಲ್ಲಗೆಳೆದು, ದೇವಾಲಯದ ನಿರ್ವಹಣೆ ಸೇರಿದಂತೆ ಎಲ್ಲಾ ನೌಕರರು ಹಿಂದೂ ಧರ್ಮಕ್ಕೆ ಸೇರಿದವರಾಗಿರಬೇಕು ಎಂಬ ಕಾನೂನು ಇದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

“ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು” ಎಂಬ ಬರಹವಿರುವ ಚಿತ್ರಗಳು ಹರಿದಾಡುತ್ತಿದೆ.

ಫ್ಯಾಕ್ಟ್ ಚೆಕ್:

ಮೊದಲನೆಯದಾಗಿ ವೈರಲ್ ಸಂದೇಶದಲ್ಲಿ ಹರಿದಾಡುತ್ತಿರುವಂತೆ ಕೇರಳ ಸರ್ಕಾರ ಇತ್ತೀಚೆಗೆ ದೇವಾಲಯ ನಿರ್ವಹಣೆಗೆ ಸಂಬಂಧಿಸಿದ ಯಾವುದೇ ಆದೇಶಗಳನ್ನು ಮಾಡಿಲ್ಲ.

ವೈರಲ್‌ ಪೋಸ್ಟ್‌ ಬಗ್ಗೆ ಪ್ರತಿಕ್ರಿಸಿರುವ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ “ಕೇರಳದ ದೇವಾಲಯಗಳನ್ನು ನಿಯಂತ್ರಿಸುವ ಮೂರು ಕಾನೂನುಗಳಿವೆ. ಈ ಎಲ್ಲಾ ಕೆಲಸ/ಕಾರ್ಯಗಳಲ್ಲಿ ನೌಕರರು ಮತ್ತು ನಿರ್ವಹಣಾಕಾರರು ಹಿಂದೂ ಧರ್ಮದವರೇ ಇರಬೇಕು ಎಂಬ ನಿರ್ದಿಷ್ಟ ನಿಬಂಧನೆ ಇದೆ.” ತಿಳಿಸಿದ್ದಾರೆ.

ಕೇರಳ ರಾಜ್ಯದ ದೇವಾಲಯಗಳನ್ನು ಯಾರು ನಿಯಂತ್ರಿಸುತ್ತಾರೆ ಎಂಬುದಕ್ಕೆ ನಿರ್ದಿಷ್ಟ ನಿಬಂಧನೆಗಳಿದ್ದು, ಅದು ಹೀಗಿದೆ:

‘ಕೇರಳದ ದೇವಸ್ವಂ ಮಂಡಳಿಗಳು ಮತ್ತು ದೇವಾಲಯಗಳ ಆಡಳಿತ’ ಎಂಬ ಶೀರ್ಷಿಕೆಯ ಶೋಧಗಂಗದಲ್ಲಿ ಪ್ರಕಟವಾದ ಅಧ್ಯಾಯದ ಪ್ರಕಾರ, ಎಲ್ಲಾ ದೇವಾಲಯಗಳನ್ನು ಸಾಮಾಜಿಕ-ಧಾರ್ಮಿಕ ಟ್ರಸ್ಟ್‌ಗಳಾದ ಸರ್ಕಾರಿ ನಿಯಂತ್ರಿತ ದೇವಸ್ವಂಗಳು ಅಥವಾ ಖಾಸಗಿ ಸಂಸ್ಥೆಗಳು / ಕುಟುಂಬಗಳು ನಿರ್ವಹಿಸುತ್ತವೆ. ಅವುಗಳ ಸದಸ್ಯರು ಹಿಂದೂಗಳೇ ಆಗಿರುತ್ತಾರೆ. ಕೇರಳದಲ್ಲಿ ಐದು ವಿಭಿನ್ನ ದೇವಸ್ವಂ ಮಂಡಳಿಗಳಿವೆ. ಎಲ್ಲಾ ಐದು ದೇವಸ್ವಂ ಮಂಡಳಿಗಳು ಹಿಂದೂ ಸದಸ್ಯರನ್ನು ಹೊಂದಿವೆ.

ದೇವಾಲಯ ನಿರ್ವಹಣಾ ಆದೇಶಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶದ ಯಾವುದೇ ವರದಿಗಳು ದೊರೆಯದಿದ್ದರೂ, 2018ರಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿದ್ದ ಲೇಖನದಲ್ಲಿ ದೇವಸ್ವಂ ಮಂಡಳಿಯ ಮುಖ್ಯಸ್ಥರು ಹಿಂದೂಗಳೆ ಆಗಿರಬೇಕು ಎನ್ನುವುದು ಸ್ಪಷ್ಟವಾಗಿ ಹೇಳಿದೆ.

ದಿ ಹಿಂದೂ ಲೇಖನದ ಪ್ರಕಾರ, 1950 ರ ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ XV (ಟಿಸಿಆರ್ಐ) ಯಡಿಯಲ್ಲಿ ರಚಿಸಲಾದ ಸ್ವಾಯತ್ತ ಸಂಸ್ಥೆಯಾದ ತಿರುವಾಂಕೂರು ದೇವಸ್ವಂ ಮಂಡಳಿ ಮತ್ತು ಕೊಚ್ಚಿನ್ ದೇವಸ್ವಂ ಮಂಡಳಿಗಳಿಗೆ ಆಯುಕ್ತರನ್ನಾಗಿ ಹಿಂದೂಗಳನ್ನು ಮಾತ್ರ ನೇಮಕ ಮಾಡಲಿದೆ ಎಂದು ಕೇರಳ ಸರ್ಕಾರ ಕೇರಳ ಹೈಕೋರ್ಟ್‌ಗೆ ತಿಳಿಸಿದೆ.

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ಕ್ಕೆ ತಿದ್ದುಪಡಿ ಮೂಲಕ ಹಿಂದೂಯೇತರರನ್ನು ದೇವಸ್ವಂ ಆಯುಕ್ತರನ್ನಾಗಿ ನೇಮಕ ಮಾಡಲು ಕೇರಳ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಎಸ್.ಶ್ರೀಧರನ್ ಪಿಳ್ಳೈ ಎಂಬವರು 2018ರಲ್ಲಿ ಸಲ್ಲಿಸಿದ ರಿಟ್ ಅನ್ನು ನ್ಯಾಯಾಲಯವು ಆಲಿಸಿತ್ತು, ಆಗ ಕೇರಳ ಸರ್ಕಾರ ಈ ಬಗ್ಗೆ ಉತ್ತರಿಸುತ್ತಾ ಮೇಲಿನಂತೆ ಹೇಳಿದೆ.

2018ರಲ್ಲಿ ಕೇರಳ ಸರ್ಕಾರ ನೀಡಿದ ತೀರ್ಪಿನ ಪ್ರತಿ

2018 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಿಕ್ರಿಯಿಸಿದ್ದ ರಾಜಗೋಪಾಲನ್, “ತಿದ್ದುಪಡಿಯಲ್ಲಿ ಒಂದು ಗೊಂದಲವಿದೆ. ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೆಲವರು ಉದ್ದೇಶಪೂರ್ವಕವಾಗಿ ಈ ಗೊಂದಲವನ್ನು ಸೃಷ್ಟಿಸಿದ್ದರು. ಆದರೆ, ಮಂಡಳಿಗೆ ನೇಮಕವಾಗುವ ಆಯುಕ್ತರು ಸೇರಿದಂತೆ ಎಲ್ಲಾ ಉದ್ಯೋಗಿಗಳು ಹಿಂದೂಗಳಾಗಿರಬೇಕು ಎಂದು ಆಯುಕ್ತರನ್ನು ನೇಮಕ ಮಾಡಲು ಮಾಡಿದ ನಿಬಂಧನೆಗಳಲ್ಲಿ ಮಂಡಳಿಯು ನಿರ್ದಿಷ್ಟವಾಗಿ ಹೇಳಿದೆ. ಆಯುಕ್ತರಷ್ಟೇ ಅಲ್ಲದೆ ಎಲ್ಲಾ ಉದ್ಯೋಗಿಗಳೂ ಹಿಂದೂಗಳೇ ಆಗಿರಲಿದ್ದಾರೆ” ಎಂದು ಅವರು ಹೇಳಿದ್ದರು.

ವೈರಲ್‌ ಆಗುತ್ತಿರುವ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆ ಸುಳ್ಳಾಗಿದ್ದು, ಕೇರಳದ ಎಲ್ಲಾ ದೇವಾಲಯಗಳನ್ನು ಹಿಂದೂಗಳು ಮಾತ್ರ ನಿಯಂತ್ರಿಸುತ್ತಾರೆ. ಪ್ರಸ್ತುತ ಆಯುಕ್ತರು ಕೂಡ ಹಿಂದೂ ಎಂದು ದೇವಸ್ವಂ ಮಂಡಳಿಗೆ ಸಂಬಂಧಿಸಿದ ಮೂಲಗಳು ತಿಳಿಸಿವೆ.

ಕಾನೂನು ಏನು ಹೇಳುತ್ತದೆ?

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ರ ಸೆಕ್ಷನ್ 29 (1), ದೇವಸ್ವಂ ಇಲಾಖೆಯು ಹಿಂದೂ ಅಧಿಕಾರಿಗಳನ್ನು ಒಳಗೊಂಡಿರಬೇಕು ಎಂದು ಹೇಳಿದೆ.

“1097 ರಲ್ಲಿ ರಚಿಸಲಾದ ದೇವಸ್ವಂ ಇಲಾಖೆಯು ಮುಂದುವರಿಯುತ್ತದೆ ಮತ್ತು ಕಾಲಕಾಲಕ್ಕೆ ಮಂಡಳಿಯು ನಿರ್ಧರಿಸುವಂತಹ ಹಿಂದೂ ಅಧಿಕಾರಿಗಳು ಮತ್ತು ಇತರ ಸೇವಕರನ್ನು ಒಳಗೊಂಡಿರುತ್ತದೆ” ಎಂದು ಅದು ಹೇಳಿದೆ.

ಇದಲ್ಲದೆ, ಮಂಡಳಿಯ ನಾಮನಿರ್ದೇಶನ ಅರ್ಹತೆಗೆ ಸಂಬಂಧಿಸಿದಂತೆ “ಒಬ್ಬ ವ್ಯಕ್ತಿಯು ತಿರುವಾಂಕೂರು-ಕೊಚ್ಚಿನ್ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದೂ ಧರ್ಮವನ್ನು ಪ್ರತಿಪಾದಿಸದ ಹೊರತು ಮಂಡಳಿಯ ಸದಸ್ಯನಾಗಿ ನಾಮನಿರ್ದೇಶನ ಅಥವಾ ಚುನಾವಣೆಗೆ ಅರ್ಹನಾಗಿರುವುದಿಲ್ಲ.” ಎಂದು ಕಾಯಿದೆಯ ಸೆಕ್ಷನ್ 6 ರಲ್ಲಿ ಹೇಳಲಾಗಿದೆ.

ಹಾಗಾಗಿ ಸ್ಪಷ್ಟವಾಗಿ ಹೇಳುವುದಾದರೆ, ಕೇರಳ ಸರ್ಕಾರವು ಹಿಂದೂ ಅಲ್ಲದವರಿಗೆ ರಾಜ್ಯದ ದೇವಾಲಯಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುವ ಹೊಸ ಕಾನೂನನ್ನು ಜಾರಿಗೆ ತಂದಿದೆ ಎಂಬುವುದು ಸುಳ್ಳಾಗಿದ್ದು, ಆ ರೀತಿಯ ಯಾವುದೇ ಕಾನೂನುಗಳನ್ನು ಕೇರಳ ಸರ್ಕಾರ ರೂಪಿಸಿಲ್ಲ.


ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...