Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು ಎಂಬ ಬರಹವಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರೈಸ್ತರು ಕೂಡ ನಿಯಂತ್ರಿಸಬಹುದಾದ ಹೊಸ ಕಾನೂನನ್ನು ಕೇರಳ ಸರ್ಕಾರ ತಂದಿದೆ ಎಂಬ ಹೇಳಿಕೆಯೊಂದಿಗಿರುವ ಚಿತ್ರವೊಂದು ವೈರಲ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೇರಳ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ ಇದನ್ನು ಅಲ್ಲಗೆಳೆದು, ದೇವಾಲಯದ ನಿರ್ವಹಣೆ ಸೇರಿದಂತೆ ಎಲ್ಲಾ ನೌಕರರು ಹಿಂದೂ ಧರ್ಮಕ್ಕೆ ಸೇರಿದವರಾಗಿರಬೇಕು ಎಂಬ ಕಾನೂನು ಇದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

“ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು” ಎಂಬ ಬರಹವಿರುವ ಚಿತ್ರಗಳು ಹರಿದಾಡುತ್ತಿದೆ.

ಫ್ಯಾಕ್ಟ್ ಚೆಕ್:

ಮೊದಲನೆಯದಾಗಿ ವೈರಲ್ ಸಂದೇಶದಲ್ಲಿ ಹರಿದಾಡುತ್ತಿರುವಂತೆ ಕೇರಳ ಸರ್ಕಾರ ಇತ್ತೀಚೆಗೆ ದೇವಾಲಯ ನಿರ್ವಹಣೆಗೆ ಸಂಬಂಧಿಸಿದ ಯಾವುದೇ ಆದೇಶಗಳನ್ನು ಮಾಡಿಲ್ಲ.

ವೈರಲ್‌ ಪೋಸ್ಟ್‌ ಬಗ್ಗೆ ಪ್ರತಿಕ್ರಿಸಿರುವ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ “ಕೇರಳದ ದೇವಾಲಯಗಳನ್ನು ನಿಯಂತ್ರಿಸುವ ಮೂರು ಕಾನೂನುಗಳಿವೆ. ಈ ಎಲ್ಲಾ ಕೆಲಸ/ಕಾರ್ಯಗಳಲ್ಲಿ ನೌಕರರು ಮತ್ತು ನಿರ್ವಹಣಾಕಾರರು ಹಿಂದೂ ಧರ್ಮದವರೇ ಇರಬೇಕು ಎಂಬ ನಿರ್ದಿಷ್ಟ ನಿಬಂಧನೆ ಇದೆ.” ತಿಳಿಸಿದ್ದಾರೆ.

ಕೇರಳ ರಾಜ್ಯದ ದೇವಾಲಯಗಳನ್ನು ಯಾರು ನಿಯಂತ್ರಿಸುತ್ತಾರೆ ಎಂಬುದಕ್ಕೆ ನಿರ್ದಿಷ್ಟ ನಿಬಂಧನೆಗಳಿದ್ದು, ಅದು ಹೀಗಿದೆ:

‘ಕೇರಳದ ದೇವಸ್ವಂ ಮಂಡಳಿಗಳು ಮತ್ತು ದೇವಾಲಯಗಳ ಆಡಳಿತ’ ಎಂಬ ಶೀರ್ಷಿಕೆಯ ಶೋಧಗಂಗದಲ್ಲಿ ಪ್ರಕಟವಾದ ಅಧ್ಯಾಯದ ಪ್ರಕಾರ, ಎಲ್ಲಾ ದೇವಾಲಯಗಳನ್ನು ಸಾಮಾಜಿಕ-ಧಾರ್ಮಿಕ ಟ್ರಸ್ಟ್‌ಗಳಾದ ಸರ್ಕಾರಿ ನಿಯಂತ್ರಿತ ದೇವಸ್ವಂಗಳು ಅಥವಾ ಖಾಸಗಿ ಸಂಸ್ಥೆಗಳು / ಕುಟುಂಬಗಳು ನಿರ್ವಹಿಸುತ್ತವೆ. ಅವುಗಳ ಸದಸ್ಯರು ಹಿಂದೂಗಳೇ ಆಗಿರುತ್ತಾರೆ. ಕೇರಳದಲ್ಲಿ ಐದು ವಿಭಿನ್ನ ದೇವಸ್ವಂ ಮಂಡಳಿಗಳಿವೆ. ಎಲ್ಲಾ ಐದು ದೇವಸ್ವಂ ಮಂಡಳಿಗಳು ಹಿಂದೂ ಸದಸ್ಯರನ್ನು ಹೊಂದಿವೆ.

ದೇವಾಲಯ ನಿರ್ವಹಣಾ ಆದೇಶಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶದ ಯಾವುದೇ ವರದಿಗಳು ದೊರೆಯದಿದ್ದರೂ, 2018ರಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿದ್ದ ಲೇಖನದಲ್ಲಿ ದೇವಸ್ವಂ ಮಂಡಳಿಯ ಮುಖ್ಯಸ್ಥರು ಹಿಂದೂಗಳೆ ಆಗಿರಬೇಕು ಎನ್ನುವುದು ಸ್ಪಷ್ಟವಾಗಿ ಹೇಳಿದೆ.

ದಿ ಹಿಂದೂ ಲೇಖನದ ಪ್ರಕಾರ, 1950 ರ ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ XV (ಟಿಸಿಆರ್ಐ) ಯಡಿಯಲ್ಲಿ ರಚಿಸಲಾದ ಸ್ವಾಯತ್ತ ಸಂಸ್ಥೆಯಾದ ತಿರುವಾಂಕೂರು ದೇವಸ್ವಂ ಮಂಡಳಿ ಮತ್ತು ಕೊಚ್ಚಿನ್ ದೇವಸ್ವಂ ಮಂಡಳಿಗಳಿಗೆ ಆಯುಕ್ತರನ್ನಾಗಿ ಹಿಂದೂಗಳನ್ನು ಮಾತ್ರ ನೇಮಕ ಮಾಡಲಿದೆ ಎಂದು ಕೇರಳ ಸರ್ಕಾರ ಕೇರಳ ಹೈಕೋರ್ಟ್‌ಗೆ ತಿಳಿಸಿದೆ.

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ಕ್ಕೆ ತಿದ್ದುಪಡಿ ಮೂಲಕ ಹಿಂದೂಯೇತರರನ್ನು ದೇವಸ್ವಂ ಆಯುಕ್ತರನ್ನಾಗಿ ನೇಮಕ ಮಾಡಲು ಕೇರಳ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಎಸ್.ಶ್ರೀಧರನ್ ಪಿಳ್ಳೈ ಎಂಬವರು 2018ರಲ್ಲಿ ಸಲ್ಲಿಸಿದ ರಿಟ್ ಅನ್ನು ನ್ಯಾಯಾಲಯವು ಆಲಿಸಿತ್ತು, ಆಗ ಕೇರಳ ಸರ್ಕಾರ ಈ ಬಗ್ಗೆ ಉತ್ತರಿಸುತ್ತಾ ಮೇಲಿನಂತೆ ಹೇಳಿದೆ.

2018ರಲ್ಲಿ ಕೇರಳ ಸರ್ಕಾರ ನೀಡಿದ ತೀರ್ಪಿನ ಪ್ರತಿ

2018 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಿಕ್ರಿಯಿಸಿದ್ದ ರಾಜಗೋಪಾಲನ್, “ತಿದ್ದುಪಡಿಯಲ್ಲಿ ಒಂದು ಗೊಂದಲವಿದೆ. ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೆಲವರು ಉದ್ದೇಶಪೂರ್ವಕವಾಗಿ ಈ ಗೊಂದಲವನ್ನು ಸೃಷ್ಟಿಸಿದ್ದರು. ಆದರೆ, ಮಂಡಳಿಗೆ ನೇಮಕವಾಗುವ ಆಯುಕ್ತರು ಸೇರಿದಂತೆ ಎಲ್ಲಾ ಉದ್ಯೋಗಿಗಳು ಹಿಂದೂಗಳಾಗಿರಬೇಕು ಎಂದು ಆಯುಕ್ತರನ್ನು ನೇಮಕ ಮಾಡಲು ಮಾಡಿದ ನಿಬಂಧನೆಗಳಲ್ಲಿ ಮಂಡಳಿಯು ನಿರ್ದಿಷ್ಟವಾಗಿ ಹೇಳಿದೆ. ಆಯುಕ್ತರಷ್ಟೇ ಅಲ್ಲದೆ ಎಲ್ಲಾ ಉದ್ಯೋಗಿಗಳೂ ಹಿಂದೂಗಳೇ ಆಗಿರಲಿದ್ದಾರೆ” ಎಂದು ಅವರು ಹೇಳಿದ್ದರು.

ವೈರಲ್‌ ಆಗುತ್ತಿರುವ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆ ಸುಳ್ಳಾಗಿದ್ದು, ಕೇರಳದ ಎಲ್ಲಾ ದೇವಾಲಯಗಳನ್ನು ಹಿಂದೂಗಳು ಮಾತ್ರ ನಿಯಂತ್ರಿಸುತ್ತಾರೆ. ಪ್ರಸ್ತುತ ಆಯುಕ್ತರು ಕೂಡ ಹಿಂದೂ ಎಂದು ದೇವಸ್ವಂ ಮಂಡಳಿಗೆ ಸಂಬಂಧಿಸಿದ ಮೂಲಗಳು ತಿಳಿಸಿವೆ.

ಕಾನೂನು ಏನು ಹೇಳುತ್ತದೆ?

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ರ ಸೆಕ್ಷನ್ 29 (1), ದೇವಸ್ವಂ ಇಲಾಖೆಯು ಹಿಂದೂ ಅಧಿಕಾರಿಗಳನ್ನು ಒಳಗೊಂಡಿರಬೇಕು ಎಂದು ಹೇಳಿದೆ.

“1097 ರಲ್ಲಿ ರಚಿಸಲಾದ ದೇವಸ್ವಂ ಇಲಾಖೆಯು ಮುಂದುವರಿಯುತ್ತದೆ ಮತ್ತು ಕಾಲಕಾಲಕ್ಕೆ ಮಂಡಳಿಯು ನಿರ್ಧರಿಸುವಂತಹ ಹಿಂದೂ ಅಧಿಕಾರಿಗಳು ಮತ್ತು ಇತರ ಸೇವಕರನ್ನು ಒಳಗೊಂಡಿರುತ್ತದೆ” ಎಂದು ಅದು ಹೇಳಿದೆ.

ಇದಲ್ಲದೆ, ಮಂಡಳಿಯ ನಾಮನಿರ್ದೇಶನ ಅರ್ಹತೆಗೆ ಸಂಬಂಧಿಸಿದಂತೆ “ಒಬ್ಬ ವ್ಯಕ್ತಿಯು ತಿರುವಾಂಕೂರು-ಕೊಚ್ಚಿನ್ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದೂ ಧರ್ಮವನ್ನು ಪ್ರತಿಪಾದಿಸದ ಹೊರತು ಮಂಡಳಿಯ ಸದಸ್ಯನಾಗಿ ನಾಮನಿರ್ದೇಶನ ಅಥವಾ ಚುನಾವಣೆಗೆ ಅರ್ಹನಾಗಿರುವುದಿಲ್ಲ.” ಎಂದು ಕಾಯಿದೆಯ ಸೆಕ್ಷನ್ 6 ರಲ್ಲಿ ಹೇಳಲಾಗಿದೆ.

ಹಾಗಾಗಿ ಸ್ಪಷ್ಟವಾಗಿ ಹೇಳುವುದಾದರೆ, ಕೇರಳ ಸರ್ಕಾರವು ಹಿಂದೂ ಅಲ್ಲದವರಿಗೆ ರಾಜ್ಯದ ದೇವಾಲಯಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುವ ಹೊಸ ಕಾನೂನನ್ನು ಜಾರಿಗೆ ತಂದಿದೆ ಎಂಬುವುದು ಸುಳ್ಳಾಗಿದ್ದು, ಆ ರೀತಿಯ ಯಾವುದೇ ಕಾನೂನುಗಳನ್ನು ಕೇರಳ ಸರ್ಕಾರ ರೂಪಿಸಿಲ್ಲ.


ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...