Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಫ್ಯಾಕ್ಟ್ ಚೆಕ್: ಕೇರಳದಲ್ಲಿ ಹಿಂದೂ ದೇವಾಲಯ ನಿಯಂತ್ರಿಸುವ ಅಧಿಕಾರ ಅನ್ಯಧರ್ಮಿಯರಿಗೆ ಎಂಬುದು ಸುಳ್ಳು..

ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು ಎಂಬ ಬರಹವಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -
- Advertisement -

ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರೈಸ್ತರು ಕೂಡ ನಿಯಂತ್ರಿಸಬಹುದಾದ ಹೊಸ ಕಾನೂನನ್ನು ಕೇರಳ ಸರ್ಕಾರ ತಂದಿದೆ ಎಂಬ ಹೇಳಿಕೆಯೊಂದಿಗಿರುವ ಚಿತ್ರವೊಂದು ವೈರಲ್‌ ಆಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೇರಳ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ ಇದನ್ನು ಅಲ್ಲಗೆಳೆದು, ದೇವಾಲಯದ ನಿರ್ವಹಣೆ ಸೇರಿದಂತೆ ಎಲ್ಲಾ ನೌಕರರು ಹಿಂದೂ ಧರ್ಮಕ್ಕೆ ಸೇರಿದವರಾಗಿರಬೇಕು ಎಂಬ ಕಾನೂನು ಇದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

“ಕೇರಳ ಸರ್ಕಾರವು ಹೊಸ ಕಾನೂನನ್ನು ತಂದಿದ್ದು, ಅದರಂತೆ ಹಿಂದೂ ದೇವಾಲಯಗಳನ್ನು ಮುಸ್ಲಿಮರು ಹಾಗೂ ಕ್ರಿಸ್ಚಿಯನ್ನರು ನಿಯಂತ್ರಿಸಬಹುದು, ಮಂದಿರದ ಮುಖ್ಯಸ್ಥರಾಗಿ ಮುಸ್ಲಿಮರು ಅಥವಾ ಕ್ರಿಸ್ಚಿಯನ್ನರು ಕೂಡಾ ಇರಬಹುದು” ಎಂಬ ಬರಹವಿರುವ ಚಿತ್ರಗಳು ಹರಿದಾಡುತ್ತಿದೆ.

ಫ್ಯಾಕ್ಟ್ ಚೆಕ್:

ಮೊದಲನೆಯದಾಗಿ ವೈರಲ್ ಸಂದೇಶದಲ್ಲಿ ಹರಿದಾಡುತ್ತಿರುವಂತೆ ಕೇರಳ ಸರ್ಕಾರ ಇತ್ತೀಚೆಗೆ ದೇವಾಲಯ ನಿರ್ವಹಣೆಗೆ ಸಂಬಂಧಿಸಿದ ಯಾವುದೇ ಆದೇಶಗಳನ್ನು ಮಾಡಿಲ್ಲ.

ವೈರಲ್‌ ಪೋಸ್ಟ್‌ ಬಗ್ಗೆ ಪ್ರತಿಕ್ರಿಸಿರುವ ದೇವಸ್ವಂ ನೇಮಕಾತಿ ಮಂಡಳಿಯ ಅಧ್ಯಕ್ಷ ರಾಜಗೋಪಾಲನ್ ನಾಯರ್ “ಕೇರಳದ ದೇವಾಲಯಗಳನ್ನು ನಿಯಂತ್ರಿಸುವ ಮೂರು ಕಾನೂನುಗಳಿವೆ. ಈ ಎಲ್ಲಾ ಕೆಲಸ/ಕಾರ್ಯಗಳಲ್ಲಿ ನೌಕರರು ಮತ್ತು ನಿರ್ವಹಣಾಕಾರರು ಹಿಂದೂ ಧರ್ಮದವರೇ ಇರಬೇಕು ಎಂಬ ನಿರ್ದಿಷ್ಟ ನಿಬಂಧನೆ ಇದೆ.” ತಿಳಿಸಿದ್ದಾರೆ.

ಕೇರಳ ರಾಜ್ಯದ ದೇವಾಲಯಗಳನ್ನು ಯಾರು ನಿಯಂತ್ರಿಸುತ್ತಾರೆ ಎಂಬುದಕ್ಕೆ ನಿರ್ದಿಷ್ಟ ನಿಬಂಧನೆಗಳಿದ್ದು, ಅದು ಹೀಗಿದೆ:

‘ಕೇರಳದ ದೇವಸ್ವಂ ಮಂಡಳಿಗಳು ಮತ್ತು ದೇವಾಲಯಗಳ ಆಡಳಿತ’ ಎಂಬ ಶೀರ್ಷಿಕೆಯ ಶೋಧಗಂಗದಲ್ಲಿ ಪ್ರಕಟವಾದ ಅಧ್ಯಾಯದ ಪ್ರಕಾರ, ಎಲ್ಲಾ ದೇವಾಲಯಗಳನ್ನು ಸಾಮಾಜಿಕ-ಧಾರ್ಮಿಕ ಟ್ರಸ್ಟ್‌ಗಳಾದ ಸರ್ಕಾರಿ ನಿಯಂತ್ರಿತ ದೇವಸ್ವಂಗಳು ಅಥವಾ ಖಾಸಗಿ ಸಂಸ್ಥೆಗಳು / ಕುಟುಂಬಗಳು ನಿರ್ವಹಿಸುತ್ತವೆ. ಅವುಗಳ ಸದಸ್ಯರು ಹಿಂದೂಗಳೇ ಆಗಿರುತ್ತಾರೆ. ಕೇರಳದಲ್ಲಿ ಐದು ವಿಭಿನ್ನ ದೇವಸ್ವಂ ಮಂಡಳಿಗಳಿವೆ. ಎಲ್ಲಾ ಐದು ದೇವಸ್ವಂ ಮಂಡಳಿಗಳು ಹಿಂದೂ ಸದಸ್ಯರನ್ನು ಹೊಂದಿವೆ.

ದೇವಾಲಯ ನಿರ್ವಹಣಾ ಆದೇಶಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಇತ್ತೀಚೆಗೆ ಹೊರಡಿಸಿದ ಆದೇಶದ ಯಾವುದೇ ವರದಿಗಳು ದೊರೆಯದಿದ್ದರೂ, 2018ರಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿದ್ದ ಲೇಖನದಲ್ಲಿ ದೇವಸ್ವಂ ಮಂಡಳಿಯ ಮುಖ್ಯಸ್ಥರು ಹಿಂದೂಗಳೆ ಆಗಿರಬೇಕು ಎನ್ನುವುದು ಸ್ಪಷ್ಟವಾಗಿ ಹೇಳಿದೆ.

ದಿ ಹಿಂದೂ ಲೇಖನದ ಪ್ರಕಾರ, 1950 ರ ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ XV (ಟಿಸಿಆರ್ಐ) ಯಡಿಯಲ್ಲಿ ರಚಿಸಲಾದ ಸ್ವಾಯತ್ತ ಸಂಸ್ಥೆಯಾದ ತಿರುವಾಂಕೂರು ದೇವಸ್ವಂ ಮಂಡಳಿ ಮತ್ತು ಕೊಚ್ಚಿನ್ ದೇವಸ್ವಂ ಮಂಡಳಿಗಳಿಗೆ ಆಯುಕ್ತರನ್ನಾಗಿ ಹಿಂದೂಗಳನ್ನು ಮಾತ್ರ ನೇಮಕ ಮಾಡಲಿದೆ ಎಂದು ಕೇರಳ ಸರ್ಕಾರ ಕೇರಳ ಹೈಕೋರ್ಟ್‌ಗೆ ತಿಳಿಸಿದೆ.

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ಕ್ಕೆ ತಿದ್ದುಪಡಿ ಮೂಲಕ ಹಿಂದೂಯೇತರರನ್ನು ದೇವಸ್ವಂ ಆಯುಕ್ತರನ್ನಾಗಿ ನೇಮಕ ಮಾಡಲು ಕೇರಳ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಎಸ್.ಶ್ರೀಧರನ್ ಪಿಳ್ಳೈ ಎಂಬವರು 2018ರಲ್ಲಿ ಸಲ್ಲಿಸಿದ ರಿಟ್ ಅನ್ನು ನ್ಯಾಯಾಲಯವು ಆಲಿಸಿತ್ತು, ಆಗ ಕೇರಳ ಸರ್ಕಾರ ಈ ಬಗ್ಗೆ ಉತ್ತರಿಸುತ್ತಾ ಮೇಲಿನಂತೆ ಹೇಳಿದೆ.

2018ರಲ್ಲಿ ಕೇರಳ ಸರ್ಕಾರ ನೀಡಿದ ತೀರ್ಪಿನ ಪ್ರತಿ

2018 ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಿಕ್ರಿಯಿಸಿದ್ದ ರಾಜಗೋಪಾಲನ್, “ತಿದ್ದುಪಡಿಯಲ್ಲಿ ಒಂದು ಗೊಂದಲವಿದೆ. ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೆಲವರು ಉದ್ದೇಶಪೂರ್ವಕವಾಗಿ ಈ ಗೊಂದಲವನ್ನು ಸೃಷ್ಟಿಸಿದ್ದರು. ಆದರೆ, ಮಂಡಳಿಗೆ ನೇಮಕವಾಗುವ ಆಯುಕ್ತರು ಸೇರಿದಂತೆ ಎಲ್ಲಾ ಉದ್ಯೋಗಿಗಳು ಹಿಂದೂಗಳಾಗಿರಬೇಕು ಎಂದು ಆಯುಕ್ತರನ್ನು ನೇಮಕ ಮಾಡಲು ಮಾಡಿದ ನಿಬಂಧನೆಗಳಲ್ಲಿ ಮಂಡಳಿಯು ನಿರ್ದಿಷ್ಟವಾಗಿ ಹೇಳಿದೆ. ಆಯುಕ್ತರಷ್ಟೇ ಅಲ್ಲದೆ ಎಲ್ಲಾ ಉದ್ಯೋಗಿಗಳೂ ಹಿಂದೂಗಳೇ ಆಗಿರಲಿದ್ದಾರೆ” ಎಂದು ಅವರು ಹೇಳಿದ್ದರು.

ವೈರಲ್‌ ಆಗುತ್ತಿರುವ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗುತ್ತಿರುವ ಹೇಳಿಕೆ ಸುಳ್ಳಾಗಿದ್ದು, ಕೇರಳದ ಎಲ್ಲಾ ದೇವಾಲಯಗಳನ್ನು ಹಿಂದೂಗಳು ಮಾತ್ರ ನಿಯಂತ್ರಿಸುತ್ತಾರೆ. ಪ್ರಸ್ತುತ ಆಯುಕ್ತರು ಕೂಡ ಹಿಂದೂ ಎಂದು ದೇವಸ್ವಂ ಮಂಡಳಿಗೆ ಸಂಬಂಧಿಸಿದ ಮೂಲಗಳು ತಿಳಿಸಿವೆ.

ಕಾನೂನು ಏನು ಹೇಳುತ್ತದೆ?

ತಿರುವಾಂಕೂರು-ಕೊಚ್ಚಿನ್ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1950 ರ ಸೆಕ್ಷನ್ 29 (1), ದೇವಸ್ವಂ ಇಲಾಖೆಯು ಹಿಂದೂ ಅಧಿಕಾರಿಗಳನ್ನು ಒಳಗೊಂಡಿರಬೇಕು ಎಂದು ಹೇಳಿದೆ.

“1097 ರಲ್ಲಿ ರಚಿಸಲಾದ ದೇವಸ್ವಂ ಇಲಾಖೆಯು ಮುಂದುವರಿಯುತ್ತದೆ ಮತ್ತು ಕಾಲಕಾಲಕ್ಕೆ ಮಂಡಳಿಯು ನಿರ್ಧರಿಸುವಂತಹ ಹಿಂದೂ ಅಧಿಕಾರಿಗಳು ಮತ್ತು ಇತರ ಸೇವಕರನ್ನು ಒಳಗೊಂಡಿರುತ್ತದೆ” ಎಂದು ಅದು ಹೇಳಿದೆ.

ಇದಲ್ಲದೆ, ಮಂಡಳಿಯ ನಾಮನಿರ್ದೇಶನ ಅರ್ಹತೆಗೆ ಸಂಬಂಧಿಸಿದಂತೆ “ಒಬ್ಬ ವ್ಯಕ್ತಿಯು ತಿರುವಾಂಕೂರು-ಕೊಚ್ಚಿನ್ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಹಿಂದೂ ಧರ್ಮವನ್ನು ಪ್ರತಿಪಾದಿಸದ ಹೊರತು ಮಂಡಳಿಯ ಸದಸ್ಯನಾಗಿ ನಾಮನಿರ್ದೇಶನ ಅಥವಾ ಚುನಾವಣೆಗೆ ಅರ್ಹನಾಗಿರುವುದಿಲ್ಲ.” ಎಂದು ಕಾಯಿದೆಯ ಸೆಕ್ಷನ್ 6 ರಲ್ಲಿ ಹೇಳಲಾಗಿದೆ.

ಹಾಗಾಗಿ ಸ್ಪಷ್ಟವಾಗಿ ಹೇಳುವುದಾದರೆ, ಕೇರಳ ಸರ್ಕಾರವು ಹಿಂದೂ ಅಲ್ಲದವರಿಗೆ ರಾಜ್ಯದ ದೇವಾಲಯಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುವ ಹೊಸ ಕಾನೂನನ್ನು ಜಾರಿಗೆ ತಂದಿದೆ ಎಂಬುವುದು ಸುಳ್ಳಾಗಿದ್ದು, ಆ ರೀತಿಯ ಯಾವುದೇ ಕಾನೂನುಗಳನ್ನು ಕೇರಳ ಸರ್ಕಾರ ರೂಪಿಸಿಲ್ಲ.


ಫ್ಯಾಕ್ಟ್‌ಚೆಕ್: ಈ ಆಕ್ರೋಶ ಭರಿತ ಜನರ ಗುಂಪು ಕೇರಳದ ಮುಸ್ಲಿಮರದ್ದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...