Homeಫ್ಯಾಕ್ಟ್‌ಚೆಕ್Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

- Advertisement -
- Advertisement -

‘ರಂಝಾನ್ ಪ್ರಯುಕ್ತ ರಾಜ್ಯದ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆ. ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಸಮಯ ಬದಲಿಸಿದೆ. ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಶಾಲೆಯಿಂದ ಅರ್ಧ ಗಂಟೆ ಬೇಗ ಹೋಗಬಹುದು’ ಎಂಬ ಸುದ್ದಿಯೊಂದು ಎರಡು ದಿನಗಳ ಹಿಂದೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ.

ಟಿವಿ9, ಸುವರ್ಣ ನ್ಯೂಸ್‌, ಹೊಸ ದಿಗಂತ ಸೇರಿದಂತೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಈ ಸುದ್ದಿಯನ್ನು ಪ್ರಸಾರ ಮಾಡಿವೆ.

ಫೋಸ್ಟ್ ಲಿಂಕ್ ಇಲ್ಲಿದೆ

ಇದನ್ನೇ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ರಂಜಾನ್ ಹಬ್ಬದ ಪ್ರಯುಕ್ತ ಸಂಜೆ ನಾಲ್ಕರ ಬದಲು ಮಧ್ಯಾಹ್ನ 12:45ಕ್ಕೆ ಶಾಲೆ ಮುಕ್ತಾಯಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರದ ಮುಸ್ಲಿಂ ಪ್ರೀತಿ” ಎಂದು ಬರೆದುಕೊಂಡಿದ್ದಾರೆ.


ಫ್ಯಾಕ್ಟ್‌ಚೆಕ್:
ರಾಜ್ಯ ಸರ್ಕಾರ ರಂಝಾನ್ ಪ್ರಯುಕ್ತ ಶಾಲೆಗಳ ವೇಳಾಪಟ್ಟಿ ಬದಲಾಯಿಸಿದೆ ಎಂಬ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಇದಕ್ಕಾಗಿ ನಾವು ಮೊದಲು ಸರ್ಕಾರ ಸಮಯ ಬದಲಾವಣೆಯ ಕುರಿತು ಸುತ್ತೋಲೆ ಹೊರಡಿಸಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಮಾರ್ಚ್‌ 6,2024ರಂದು ‘ಕರ್ನಾಟಕ ರಾಜ್ಯ ಉರ್ದು ಮತ್ತು ಇತರ ಅಲ್ಪ ಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯಿಂದ’ ಹೊರಡಿಸಿರುವ ಸುತ್ತೋಲೆ ದೊರೆತಿದೆ.

ಈ ಸುತ್ತೋಲೆಯ ಆರಂಭದಲ್ಲಿಯೇ “ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡುವ ಬಗ್ಗೆ” ಎಂಬ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯ ಎರಡನೇ ಪ್ಯಾರದಲ್ಲಿ “ಉಲ್ಲೇಖಿತ 2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಂದು ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ 31, 10 2002ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ಅನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮನುಸಾರ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ” ಎನ್ನುವುದನ್ನು ಉಲ್ಲೇಖಿಸಿರುವುದನ್ನು ಕಾಣಬಹುದು.

ಅಧಿಕೃತ ಸುತ್ತೋಲೆಯ ಪ್ರಕಾರ, ರಂಝಾನ್ ಪ್ರಯುಕ್ತ ಒಂದು ತಿಂಗಳ ಕಾಲ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ಸಮಯ ಬದಲಾವಣೆ ಮಾಡಿ ನಡೆಸಲು ಸೂಚಿಸಲಾಗಿದೆ.

ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ ರಂಝಾನ್ ಪ್ರಯಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಹಿರಿಯ ಮತ್ತು ಪ್ರೌಢ ಶಾಲೆಗಳ ಸಮಯ ಮಾತ್ರ ಬದಲಾವಣೆ ಮಾಡಲು ಸೂಚಿಸಲಾಗಿದೆ. ಅಲ್ಲದೆ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅಲ್ಲ. ಮಾಧ್ಯಮಗಳು ಉರ್ದು ಶಾಲೆಗಳ ಸಮಯ ಬದಲಾಯಿಸಲಾಗಿದೆ ಎಂದು ಉಲ್ಲೇಖಿಸದೆ, ಸರ್ಕಾರಿ, ಅನುದಾನಿತ ಶಾಲೆಗಳ ಸಮಯ ಬದಲಾವಣೆ ಎಂದು ಸುದ್ದಿ ಪ್ರಸಾರ ಮಾಡಿ ತಪ್ಪು ಮಾಹಿತಿ ನೀಡಿದೆ. ಇದನ್ನೇ ನಂಬಿರುವ ಅನೇಕ ಜನರು ಮುಸ್ಲಿಮರ ರಂಝಾನ್ ಆಚರಣೆಗಾಗಿ ಸರ್ಕಾರಿ ಶಾಲೆಯ ವೇಳಾಪಟ್ಟಿಯನ್ನೇ ಬದಲಾಯಿಸಲಾಗಿದೆ ಎಂದು ಸರ್ಕಾರದ ಆದೇಶಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಇದನ್ನೂ ಓದಿ : Fact Check: ವಿದೇಶಿ ಮಹಿಳೆಯ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರೈಸ್ತರೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...