Homeಫ್ಯಾಕ್ಟ್‌ಚೆಕ್Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

- Advertisement -
- Advertisement -

‘ರಂಝಾನ್ ಪ್ರಯುಕ್ತ ರಾಜ್ಯದ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆ. ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಸಮಯ ಬದಲಿಸಿದೆ. ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಶಾಲೆಯಿಂದ ಅರ್ಧ ಗಂಟೆ ಬೇಗ ಹೋಗಬಹುದು’ ಎಂಬ ಸುದ್ದಿಯೊಂದು ಎರಡು ದಿನಗಳ ಹಿಂದೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ.

ಟಿವಿ9, ಸುವರ್ಣ ನ್ಯೂಸ್‌, ಹೊಸ ದಿಗಂತ ಸೇರಿದಂತೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಈ ಸುದ್ದಿಯನ್ನು ಪ್ರಸಾರ ಮಾಡಿವೆ.

ಫೋಸ್ಟ್ ಲಿಂಕ್ ಇಲ್ಲಿದೆ

ಇದನ್ನೇ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ರಂಜಾನ್ ಹಬ್ಬದ ಪ್ರಯುಕ್ತ ಸಂಜೆ ನಾಲ್ಕರ ಬದಲು ಮಧ್ಯಾಹ್ನ 12:45ಕ್ಕೆ ಶಾಲೆ ಮುಕ್ತಾಯಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರದ ಮುಸ್ಲಿಂ ಪ್ರೀತಿ” ಎಂದು ಬರೆದುಕೊಂಡಿದ್ದಾರೆ.


ಫ್ಯಾಕ್ಟ್‌ಚೆಕ್:
ರಾಜ್ಯ ಸರ್ಕಾರ ರಂಝಾನ್ ಪ್ರಯುಕ್ತ ಶಾಲೆಗಳ ವೇಳಾಪಟ್ಟಿ ಬದಲಾಯಿಸಿದೆ ಎಂಬ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಇದಕ್ಕಾಗಿ ನಾವು ಮೊದಲು ಸರ್ಕಾರ ಸಮಯ ಬದಲಾವಣೆಯ ಕುರಿತು ಸುತ್ತೋಲೆ ಹೊರಡಿಸಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಮಾರ್ಚ್‌ 6,2024ರಂದು ‘ಕರ್ನಾಟಕ ರಾಜ್ಯ ಉರ್ದು ಮತ್ತು ಇತರ ಅಲ್ಪ ಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯಿಂದ’ ಹೊರಡಿಸಿರುವ ಸುತ್ತೋಲೆ ದೊರೆತಿದೆ.

ಈ ಸುತ್ತೋಲೆಯ ಆರಂಭದಲ್ಲಿಯೇ “ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡುವ ಬಗ್ಗೆ” ಎಂಬ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯ ಎರಡನೇ ಪ್ಯಾರದಲ್ಲಿ “ಉಲ್ಲೇಖಿತ 2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಂದು ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ 31, 10 2002ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ಅನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮನುಸಾರ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ” ಎನ್ನುವುದನ್ನು ಉಲ್ಲೇಖಿಸಿರುವುದನ್ನು ಕಾಣಬಹುದು.

ಅಧಿಕೃತ ಸುತ್ತೋಲೆಯ ಪ್ರಕಾರ, ರಂಝಾನ್ ಪ್ರಯುಕ್ತ ಒಂದು ತಿಂಗಳ ಕಾಲ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ಸಮಯ ಬದಲಾವಣೆ ಮಾಡಿ ನಡೆಸಲು ಸೂಚಿಸಲಾಗಿದೆ.

ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ ರಂಝಾನ್ ಪ್ರಯಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಹಿರಿಯ ಮತ್ತು ಪ್ರೌಢ ಶಾಲೆಗಳ ಸಮಯ ಮಾತ್ರ ಬದಲಾವಣೆ ಮಾಡಲು ಸೂಚಿಸಲಾಗಿದೆ. ಅಲ್ಲದೆ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅಲ್ಲ. ಮಾಧ್ಯಮಗಳು ಉರ್ದು ಶಾಲೆಗಳ ಸಮಯ ಬದಲಾಯಿಸಲಾಗಿದೆ ಎಂದು ಉಲ್ಲೇಖಿಸದೆ, ಸರ್ಕಾರಿ, ಅನುದಾನಿತ ಶಾಲೆಗಳ ಸಮಯ ಬದಲಾವಣೆ ಎಂದು ಸುದ್ದಿ ಪ್ರಸಾರ ಮಾಡಿ ತಪ್ಪು ಮಾಹಿತಿ ನೀಡಿದೆ. ಇದನ್ನೇ ನಂಬಿರುವ ಅನೇಕ ಜನರು ಮುಸ್ಲಿಮರ ರಂಝಾನ್ ಆಚರಣೆಗಾಗಿ ಸರ್ಕಾರಿ ಶಾಲೆಯ ವೇಳಾಪಟ್ಟಿಯನ್ನೇ ಬದಲಾಯಿಸಲಾಗಿದೆ ಎಂದು ಸರ್ಕಾರದ ಆದೇಶಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಇದನ್ನೂ ಓದಿ : Fact Check: ವಿದೇಶಿ ಮಹಿಳೆಯ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರೈಸ್ತರೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...