Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...