Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...