Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...