Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...