Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...