Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...