Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...