Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

FACT CHECK : ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದೆರಡು ತಿಂಗಳಿನಿಂದ ವಿಡಿಯೋವೊಂದು ಹರಿದಾಡುತ್ತಿದೆ. ವಿಡಿಯೋವೊದಲ್ಲಿ ವ್ಯಕ್ತಿಯೊಬ್ಬ ಮೊಬೈಲ್ ಕ್ಯಾಮರಾ ಓಪನ್ ಮಾಡಿಕೊಂಡು ಕೊಠಡಿಯೊಂದಕ್ಕೆ ನುಗ್ಗುತ್ತಾನೆ. ಆಗ ಅಲ್ಲಿ ಕೆಲ ವಿದ್ಯಾರ್ಥಿನಿಯರು ನಿಂತಿರುವುದು ಕಾಣುತ್ತದೆ. ಆ ವಿದ್ಯಾರ್ಥಿನಿಯರ ಪೈಕಿ ಕೆಲವರು ಹಿಜಾಬ್ ಧರಿಸಿರುವುದು ನೋಡಬಹುದು.

ವಿಡಿಯೋದಲ್ಲಿ ಮೊಬೈಲ್ ಹಿಡಿದ ವ್ಯಕ್ತಿ “ಏನು ಮಾಡುತ್ತಿದ್ದೀರಿ? ಎಂದು ತೆಲುಗು ಭಾಷೆಯಲ್ಲಿ ಕೇಳುತ್ತಾನೆ. ಅದಕ್ಕೆ ನಮಾಝ್ ಮಾಡುತ್ತೀದ್ದೇವೆ ಎಂದು ವಿದ್ಯಾರ್ಥಿನಿಯರು ಉತ್ತರಿಸುತ್ತಾರೆ. ಆಗ ಯಾರು ಕಳಿಸಿದ್ರು? ಎಂದು ಆ ವ್ಯಕ್ತಿ ಮರುಪ್ರಶ್ನೆ ಹಾಕುತ್ತಾನೆ. ಆಗ ವಿದ್ಯಾರ್ಥಿನಿಯರು ಪ್ರಿಯಾ ಮ್ಯಾಮ್ ಎಂದು ಹೇಳಿದಂತೆ ಕೇಳಿಸುತ್ತದೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ” ತೆಲಂಗಾಣದ ಶಾಲೆಯೊಂದರಲ್ಲಿ ಹಿಂದೂ ಶಾಲಾ ಬಾಲಕಿಯರನ್ನು ಮತಾಂತರ ಮಾಡಲಾಗುತ್ತಿದೆ. ಅವರಿಂದ ಶಾಲೆಯಲ್ಲೇ ನಮಾಝ್ ಮಾಡಿಸಲಾಗಿದೆ” ಎಂದು ಸುದ್ದಿ ಹಬ್ಬಿವೆ. ಅಲ್ಲದೆ, ತೆಲಂಗಾಣದ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿವೆ.

ಪೋಸ್ಟ್‌ಗಳ ಸ್ಕ್ರೀನ್ ಶಾಟ್‌ಗಳು ಕೆಳಗಿದೆ. 

ಫ್ಯಾಕ್ಟ್‌ಚೆಕ್ : ವಿಡಿಯೋ ಗಮನಿಸಿದಾಗಲೇ ನಮಗೆ ಅದು ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗುತ್ತಿರುವುದು ಗೊತ್ತಾಗಿದೆ. ಏಕೆಂದರೆ, ಈ ವಿಡಿಯೋದಲ್ಲಿರುವ ಘಟನೆ ನಡೆದಾಗಲೇ, ಅದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಹಾಗಾಗಿ, ವಿಡಿಯೋದ ಸತ್ಯಾಸತ್ಯತೆ ನಮಗೆ ತಿಳಿದಿದೆ.

ಅಸಲಿಗೆ, ವಿಡಿಯೋ ಹಂಚಿಕೊಂಡಿರುವ ಬಲಪಂಥೀಯ ಸಾಮಾಜಿಕ ಜಾಲತಾಣ ಖಾತೆಗಳು ಸುಳ್ಳು ಸುದ್ದಿಯೊಂದಿಗೆ ಕೋಮುದ್ವೇಷ ಹರಡುವ ಪ್ರಯತ್ನ ಮಾಡಿವೆ. ವಿಡಿಯೋದಲ್ಲಿರುವುದು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಿದ ದೃಶ್ಯವಲ್ಲ. ಅದು ಮುಸ್ಲಿಂ ವಿದ್ಯಾರ್ಥಿನಿಯರೇ ನಮಾಝ್ ಮಾಡಿರುವ ದೃಶ್ಯವಾಗಿದೆ. ಆದರೆ, ಶಾಲೆಗೆ ನುಗ್ಗಿದ ಬಜರಂಗದಳದ ಗುಂಪು ವಿದ್ಯಾರ್ಥಿನಿಯರ ನಮಾಝ್‌ಗೆ ಅಡ್ಡಿಪಡಿಸಿರುವುದು ನಿಜ.

ಈ ಘಟನೆಯ ಕುರಿತು 27 ಆಗಸ್ಟ್ 2024ರಂದು ‘ದಿ ಸಿಯಾಸತ್ ಡೈಲಿ‘ ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ವರದಿ ಪ್ರಕಟಗೊಂಡಿತ್ತು. ವರದಿಗೆ ” ತೆಲಂಗಾಣದಲ್ಲಿ ಶಾಲೆಯಲ್ಲಿ ನಮಾಝ್ ಮಾಡಿದ್ದಕ್ಕೆ ಬಾಲಕಿಯರಿಗೆ ಥಳಿಸಿದ ಬಜರಂಗದಳ : ಅಮ್ಜದ್ ಉಲ್ಲಾ” ಎಂದು ಶೀರ್ಷಿಕೆ ಕೊಡಲಾಗಿತ್ತು.

ವರದಿಯಲ್ಲಿ “ತೆಲಂಗಾಣದ ಶಾಲೆಯೊಂದರಲ್ಲಿ ನಮಾಝ್ ಮಾಡುತ್ತಿದ್ದ ಬಾಲಕಿಯರಿಗೆ ಬಜರಂಗದಳದವರು ಥಳಿಸಿದ್ದಾರೆ ಎಂದು ಮಜ್ಲಿಸ್ ಬಚಾವೋ ತೆಹ್ರೀಕ್ (ಎಂಬಿಟಿ) ವಕ್ತಾರ ಅಮ್ಜದ್ ಉಲ್ಲಾ ಖಾನ್ ಆರೋಪಿಸಿದ್ದಾರೆ” ಎಂದು ಹೇಳಲಾಗಿತ್ತು.

“ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಅಮ್ಜದ್‌ ಉಲ್ಲಾ, ಬಜರಂಗದಳದ ಸದಸ್ಯರು ವನಪರ್ತಿಯ ಚಾಣಕ್ಯ ಹೈಸ್ಕೂಲ್‌ಗೆ ನುಗ್ಗಿ ಶಾಲಾ ಅಧಿಕಾರಿಗಳ ಅನುಮತಿಯೊಂದಿಗೆ ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ” ತಿಳಿಸಲಾಗಿದೆ.

“ಆಗಸ್ಟ್ 23ರಂದು ಶುಕ್ರವಾರ ಘಟನೆ ನಡೆದಿದ್ದರೂ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅಮ್ಜದ್ ಉಲ್ಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ” ಎಂದು ವರದಿಯಲ್ಲಿ ವಿವರಿಸಲಾಗಿದೆ.

ಈ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ನಾವು ಅಮ್ಜದ್‌ ಉಲ್ಲಾ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದ್ದೇವೆ. ಈ ವೇಳೆ “ಆಗಸ್ಟ್ 27, 2024ರಂದು ಅವರು ವೈರಲ್ ವಿಡಿಯೋ ಸಹಿತ ಪೋಸ್ಟ್ ಒಂದನ್ನು ಹಾಕಿರುವುದು ಕಂಡು ಬಂದಿದೆ.

ಆ ಪೋಸ್ಟ್‌ನಲ್ಲಿ “ಆ.23 ರಂದು ಬಜರಂಗದಳದ ಕೆಲವು ಸಮಾಜ ವಿರೋಧಿಗಳು ವನಪರ್ತಿಯ ಚಾಣಕ್ಯ ಪ್ರೌಢಶಾಲೆಗೆ ನುಗ್ಗಿ ಶಾಲಾ ಅಧಿಕಾರಿಗಳಿಂದ ಅನುಮತಿ ಪಡೆದು ನಮಾಝ್ ಮಾಡುತ್ತಿದ್ದ ಕೆಲ ಮುಸ್ಲಿಂ ಬಾಲಕಿಯರನ್ನು ಬೆದರಿಸಿ ಥಳಿಸಿದ್ದಾರೆ. ಅಲ್ಲದೆ, ಶಾಲಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ವಿಪರ್ಯಾಸವೆಂದರೆ ಘಟನೆ ನಡೆದು ಮೂರು ದಿನಗಳು ಕಳೆದರೂ ಯಾರ ಮೇಲೂ ಎಫ್‌ಐಆರ್ ದಾಖಲಾಗಿಲ್ಲ. ಆದ್ದರಿಂದ ಈ ಘಟನೆಯ ಕುರಿತು ತನಿಖೆ ನಡೆಸಿ ಬಜರಂಗದಳದ ಎಲ್ಲಾ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ವನಪರ್ತಿ ಎಸ್‌ಪಿಗೆ ಆದೇಶ ನೀಡಬೇಕು. ಈ ಘಟನೆ ಮುಸಲ್ಮಾನರ ಭಾವನೆಗಳನ್ನು ಘಾಸಿಗೊಳಿಸಿದ್ದು ಮಾತ್ರವಲ್ಲದೆ, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಭಯವನ್ನುಂಟು ಮಾಡಿದೆ” ಎಂದು ಅಮ್ಜದ್‌ ಉಲ್ಲಾ ಖಾನ್ ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ತೆಲಂಗಾಣದ ವನಪರ್ತಿಯ ಚಾಣಕ್ಯ ಎಂಬ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಅನುಮತಿ ಪಡೆದು ಮುಸ್ಲಿಂ ಬಾಲಕಿಯರು ಒಂದು ಕೊಠಡಿಯಲ್ಲಿ ನಮಾಝ್ ಮಾಡುತ್ತಿದ್ದರು. ಅಲ್ಲಿಗೆ ನುಗ್ಗಿದ್ದ ಬಜರಂಗದಳದವರು ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ನಮಾಝ್‌ಗೆ ಅಡ್ಡಿಪಡಿಸಿದ್ದರು. ಅಲ್ಲದೆ, ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಘಟನೆಯ ವಿಡಿಯೋವನ್ನು ಹಂಚಿಕೊಂಡಿರುವ ಬಲಪಂಥೀಯರು ” ತೆಲಂಗಾಣದ ಶಾಲೆಯಲ್ಲಿ ಮತಾಂತರ, ಹಿಂದೂ ವಿದ್ಯಾರ್ಥಿನಿಯರಿಂದ ನಮಾಝ್ ಮಾಡಿಸಲಾಗಿದೆ” ಎಂದು ಸುಳ್ಳು ಮತ್ತು ಕೋಮುದ್ವೇಷದ ಸುದ್ದಿ ಹಬ್ಬಿಸಿದ್ದಾರೆ.

ಇದನ್ನೂ ಓದಿ : FACT CHECK | ಕುತುಬ್ ಮಿನಾರ್ ನಿರ್ಮಿಸಿದ್ದು ಮೊಘಲರಲ್ಲವೇ ? ಇತಿಹಾಸ ತಿರುಚಲಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...