Homeನಿಜವೋ ಸುಳ್ಳೋFact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

Fact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

- Advertisement -
- Advertisement -

ಟಿಕ್ ಟಾಕ್‌ ಬಳಕೆದಾರ ಶಾದಾಬ್ ಖಾನ್ ಅವರ ವೀಡಿಯೊವೊಂದನ್ನು ಎಲ್ಲಾ ಕಡೆ ಷೇರ್‌ ಮಾಡಿ ಕೊರೊನಾ ಹರಡುವುದೇಗೆಂದು ಈ ಮುಸ್ಲಿಂ ಯುವಕ ವಿಡಿಯೋ ಮಾಡಿ ಹಂಚುತ್ತಿದ್ದಾನೆ ಎಂಬ ಆರೋಪ ಮಾಡಲಾಗಿದೆ.

ಟ್ವಿಟರ್ ಬಳಕೆದಾರ ದೀಪಕ್ ಖಾಂಡ್ವಾಲ್ ಅವರು ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದು “ಶಬಾದ್ ಖಾನ್ ಟಿಕ್ ಟಾಕ್‌ನಲ್ಲಿ 11 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ ಮತ್ತು ಅವರು ಕರೋನವೈರಸ್ ಅನ್ನು ಹೇಗೆ ಹರಡಬೇಕೆಂದು ಪ್ರಚಾರ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ.

ಒಂದು ವಿಡಿಯೋದಲ್ಲಿ ಶಾದಾಬ್ ಖಾನ್ ತನ್ನ ಅಂಗೈಯನ್ನು ಉಗುಳಿನಿಂದ ತುಂಬಿಸಿ ಮಹಿಳೆಯ ಕೈ ಕುಲುಕುತ್ತಾನೆ. ಈ ವೀಡಿಯೊವನ್ನು ಹಂಚಿಕೊಂಡವರಲ್ಲಿ ಟ್ವಿಟರ್ ಬಳಕೆದಾರರಾದ ಬಾಲಾ ಮೊದಲಿಗರಾಗಿದ್ದಾರೆ. ಬಾಲಾ ಅವರನ್ನು ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

 

ಅದೇ ಕ್ಲಿಪ್ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಎಕ್ಸ್‌ಪೋಸ್ ದಿ ದೇಶ್ರೋಹಿಸ್ ಮತ್ತು ಮೋದಿ ಒನ್ಸ್ ಮೋರ್ ಎಂಬ ಫೇಸ್‌ಬುಕ್‌ ಪುಟಗಳಿಂದ ಇದು ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ. ರಣವೀರ್ ಗುಪ್ತಾ ಅವರ ಖಾತೆಯಿಂದ ಇದು 25 ಸಾವಿರ ವೀಕ್ಷಣೆಗಳನ್ನು ಪಡೆದಿದೆ, ಅವರು ಬಿಜೆಪಿಯಲ್ಲಿ ಯುವ ಕಾರ್ಯಕರ್ತ, ಆರ್‌ಎಸ್‌ಎಸ್‌ನಲ್ಲಿ ಸ್ವಯಂ ಸೇವಕ ಮತ್ತು ಎಬಿವಿಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

ಫ್ಯಾಕ್ಟ್‌ ಚೆಕ್‌

ಕೊರೋನವೈರಸ್ ಭಾರತದಲ್ಲಿ ಹರಡಲು ಅಥವಾ ಭಾರತದಲ್ಲಿ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಹಲವು ವಾರಗಳ ಮೊದಲು, ಅಂದರೆ ಫೆಬ್ರವರಿ 6, 2020 ರಂದು ವೀಡಿಯೊವನ್ನು ತಯಾರಿಸಲಾಗಿದೆ ಎಂದು ಸದಾಬ್ ಖಾನ್ ಅವರ ಟಿಕ್ ಟೋಕ್ ಪ್ರೊಫೈಲ್ ಮೂಲಕ ತಿಳಿಯಬಹುದಾಗಿದೆ. ಅಂದರೆ ಈ ವಿಡಿಯೋಗೂ ಕೊರೊನಾ ವೈರಸ್‌ಗೂ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಸದಾಬ್‌ ಖಾನ್‌ ಮುಸ್ಲಿಂ ಯುವಕನಾಗಿದ್ದರಿಂದ ಇದು ವೈರಲ್‌ ಆಗಿದೆ.

ಅಲ್ಲದೇ ಕರೋನ ವೈರಸ್‌ ಕುರಿತು ಜಾಗೃತಿಗೆ ಸಂಬಂಧಿಸಿದ ಹಲವಾರು ವೀಡಿಯೊಗಳನ್ನು ಸಹ ಖಾನ್ ಮಾಡಿದ್ದಾರೆ. ಅವರು ಮನೆಯಲ್ಲಿರಲು ಜನರಿಗೆ ಸಲಹೆ ನೀಡುತ್ತಿರುವ ಒಂದು ವಿಡಿಯೋ ಕೆಳಗಿದ ನೋಡಿ.

ಟಿಕ್‌ಟಾಕ್‌ ಅಷ್ಟೇನೂ ಒಳ್ಳೇಯ ಸಾಮಾಜಿಕ ಜಾಲತಾಣವಲ್ಲ. ಅದರಲ್ಲಿ ದ್ವೇಷಪೂರಿತ, ಸುಳ್ಳಿನಿಂದ ಕೂಡಿದ ವಿಡಿಯೋಗಳೇ ತುಂಬಿರುತ್ತವೆ. ಅತಿಹೆಚ್ಚಿನ ಮನರಂಜನೆಗಾಗಿ ಅತಿಹೆಚ್ಚಿನ ಸುಳ್ಳುಗಳು ಸೇರಿಕೊಳ್ಳುತ್ತವೆ.

ಅದೇ ರೀತಿಯಲ್ಲಿ ಇಲ್ಲಿ ಈ ಹಿಂದೆ ಟ್ರೋಲ್‌ ಮಾಡುವ ಸಲುವಾಗಿ ಮುಸ್ಲಿಂ ಯುವಕ ಶಬಾದ್‌ ಖಾನ್‌ ಮಾಡಿದ ವಿಡಿಯೋ ಕೊರೊನಾ ತೀವ್ರವಾಗಿ ಭೀತಿ ಹುಟ್ಟಿಸಿರುವ ಸಮಯದಲ್ಲಿ ವೈರಲ್‌ ಆಗಿದೆ. ಅಲ್ಲದೇ ಕೊರೊನಾ ಹರಡುತ್ತಿದ್ದಾರೆ ಎಂಬು ಕೋಮುವಾದಿ ಆಯಾಮವನ್ನು ಸಹ ನೀಡಲಾಗಿದೆ. ಆದರೆ ಅದೆಲ್ಲವೂ ಸುಳ್ಳಾಗಿದೆ. ಒಂದು ಧರ್ಮವನ್ನು ಗುರಿಯಾಗಿಸಿ ಪ್ರಚಾರ ಮಾಡಲು ಈ ರೀತಿಯ ವಿಡಿಯೋಗಳು ಸರಕಾಗಿ ಬಳಕೆಯಾಗುತ್ತಿವಿ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಇದನ್ನೂ ಓದಿ: ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Sir/ Madam, I am reading articles from last one month in your webesite, I feel your publishing only one side favoured articles. Reality should have some base. I want inform you that I will continue as yours published articles if it says impartial truths. Otherwise I think you’re also sailing in the same boat.
    With regards
    S V GANESH

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...