Homeನಿಜವೋ ಸುಳ್ಳೋFact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

Fact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

- Advertisement -
- Advertisement -

ಟಿಕ್ ಟಾಕ್‌ ಬಳಕೆದಾರ ಶಾದಾಬ್ ಖಾನ್ ಅವರ ವೀಡಿಯೊವೊಂದನ್ನು ಎಲ್ಲಾ ಕಡೆ ಷೇರ್‌ ಮಾಡಿ ಕೊರೊನಾ ಹರಡುವುದೇಗೆಂದು ಈ ಮುಸ್ಲಿಂ ಯುವಕ ವಿಡಿಯೋ ಮಾಡಿ ಹಂಚುತ್ತಿದ್ದಾನೆ ಎಂಬ ಆರೋಪ ಮಾಡಲಾಗಿದೆ.

ಟ್ವಿಟರ್ ಬಳಕೆದಾರ ದೀಪಕ್ ಖಾಂಡ್ವಾಲ್ ಅವರು ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದು “ಶಬಾದ್ ಖಾನ್ ಟಿಕ್ ಟಾಕ್‌ನಲ್ಲಿ 11 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ ಮತ್ತು ಅವರು ಕರೋನವೈರಸ್ ಅನ್ನು ಹೇಗೆ ಹರಡಬೇಕೆಂದು ಪ್ರಚಾರ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ.

ಒಂದು ವಿಡಿಯೋದಲ್ಲಿ ಶಾದಾಬ್ ಖಾನ್ ತನ್ನ ಅಂಗೈಯನ್ನು ಉಗುಳಿನಿಂದ ತುಂಬಿಸಿ ಮಹಿಳೆಯ ಕೈ ಕುಲುಕುತ್ತಾನೆ. ಈ ವೀಡಿಯೊವನ್ನು ಹಂಚಿಕೊಂಡವರಲ್ಲಿ ಟ್ವಿಟರ್ ಬಳಕೆದಾರರಾದ ಬಾಲಾ ಮೊದಲಿಗರಾಗಿದ್ದಾರೆ. ಬಾಲಾ ಅವರನ್ನು ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

 

ಅದೇ ಕ್ಲಿಪ್ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಎಕ್ಸ್‌ಪೋಸ್ ದಿ ದೇಶ್ರೋಹಿಸ್ ಮತ್ತು ಮೋದಿ ಒನ್ಸ್ ಮೋರ್ ಎಂಬ ಫೇಸ್‌ಬುಕ್‌ ಪುಟಗಳಿಂದ ಇದು ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ. ರಣವೀರ್ ಗುಪ್ತಾ ಅವರ ಖಾತೆಯಿಂದ ಇದು 25 ಸಾವಿರ ವೀಕ್ಷಣೆಗಳನ್ನು ಪಡೆದಿದೆ, ಅವರು ಬಿಜೆಪಿಯಲ್ಲಿ ಯುವ ಕಾರ್ಯಕರ್ತ, ಆರ್‌ಎಸ್‌ಎಸ್‌ನಲ್ಲಿ ಸ್ವಯಂ ಸೇವಕ ಮತ್ತು ಎಬಿವಿಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

ಫ್ಯಾಕ್ಟ್‌ ಚೆಕ್‌

ಕೊರೋನವೈರಸ್ ಭಾರತದಲ್ಲಿ ಹರಡಲು ಅಥವಾ ಭಾರತದಲ್ಲಿ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಹಲವು ವಾರಗಳ ಮೊದಲು, ಅಂದರೆ ಫೆಬ್ರವರಿ 6, 2020 ರಂದು ವೀಡಿಯೊವನ್ನು ತಯಾರಿಸಲಾಗಿದೆ ಎಂದು ಸದಾಬ್ ಖಾನ್ ಅವರ ಟಿಕ್ ಟೋಕ್ ಪ್ರೊಫೈಲ್ ಮೂಲಕ ತಿಳಿಯಬಹುದಾಗಿದೆ. ಅಂದರೆ ಈ ವಿಡಿಯೋಗೂ ಕೊರೊನಾ ವೈರಸ್‌ಗೂ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಸದಾಬ್‌ ಖಾನ್‌ ಮುಸ್ಲಿಂ ಯುವಕನಾಗಿದ್ದರಿಂದ ಇದು ವೈರಲ್‌ ಆಗಿದೆ.

ಅಲ್ಲದೇ ಕರೋನ ವೈರಸ್‌ ಕುರಿತು ಜಾಗೃತಿಗೆ ಸಂಬಂಧಿಸಿದ ಹಲವಾರು ವೀಡಿಯೊಗಳನ್ನು ಸಹ ಖಾನ್ ಮಾಡಿದ್ದಾರೆ. ಅವರು ಮನೆಯಲ್ಲಿರಲು ಜನರಿಗೆ ಸಲಹೆ ನೀಡುತ್ತಿರುವ ಒಂದು ವಿಡಿಯೋ ಕೆಳಗಿದ ನೋಡಿ.

ಟಿಕ್‌ಟಾಕ್‌ ಅಷ್ಟೇನೂ ಒಳ್ಳೇಯ ಸಾಮಾಜಿಕ ಜಾಲತಾಣವಲ್ಲ. ಅದರಲ್ಲಿ ದ್ವೇಷಪೂರಿತ, ಸುಳ್ಳಿನಿಂದ ಕೂಡಿದ ವಿಡಿಯೋಗಳೇ ತುಂಬಿರುತ್ತವೆ. ಅತಿಹೆಚ್ಚಿನ ಮನರಂಜನೆಗಾಗಿ ಅತಿಹೆಚ್ಚಿನ ಸುಳ್ಳುಗಳು ಸೇರಿಕೊಳ್ಳುತ್ತವೆ.

ಅದೇ ರೀತಿಯಲ್ಲಿ ಇಲ್ಲಿ ಈ ಹಿಂದೆ ಟ್ರೋಲ್‌ ಮಾಡುವ ಸಲುವಾಗಿ ಮುಸ್ಲಿಂ ಯುವಕ ಶಬಾದ್‌ ಖಾನ್‌ ಮಾಡಿದ ವಿಡಿಯೋ ಕೊರೊನಾ ತೀವ್ರವಾಗಿ ಭೀತಿ ಹುಟ್ಟಿಸಿರುವ ಸಮಯದಲ್ಲಿ ವೈರಲ್‌ ಆಗಿದೆ. ಅಲ್ಲದೇ ಕೊರೊನಾ ಹರಡುತ್ತಿದ್ದಾರೆ ಎಂಬು ಕೋಮುವಾದಿ ಆಯಾಮವನ್ನು ಸಹ ನೀಡಲಾಗಿದೆ. ಆದರೆ ಅದೆಲ್ಲವೂ ಸುಳ್ಳಾಗಿದೆ. ಒಂದು ಧರ್ಮವನ್ನು ಗುರಿಯಾಗಿಸಿ ಪ್ರಚಾರ ಮಾಡಲು ಈ ರೀತಿಯ ವಿಡಿಯೋಗಳು ಸರಕಾಗಿ ಬಳಕೆಯಾಗುತ್ತಿವಿ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಇದನ್ನೂ ಓದಿ: ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Sir/ Madam, I am reading articles from last one month in your webesite, I feel your publishing only one side favoured articles. Reality should have some base. I want inform you that I will continue as yours published articles if it says impartial truths. Otherwise I think you’re also sailing in the same boat.
    With regards
    S V GANESH

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...