Homeನಿಜವೋ ಸುಳ್ಳೋFact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

Fact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

- Advertisement -
- Advertisement -

ಟಿಕ್ ಟಾಕ್‌ ಬಳಕೆದಾರ ಶಾದಾಬ್ ಖಾನ್ ಅವರ ವೀಡಿಯೊವೊಂದನ್ನು ಎಲ್ಲಾ ಕಡೆ ಷೇರ್‌ ಮಾಡಿ ಕೊರೊನಾ ಹರಡುವುದೇಗೆಂದು ಈ ಮುಸ್ಲಿಂ ಯುವಕ ವಿಡಿಯೋ ಮಾಡಿ ಹಂಚುತ್ತಿದ್ದಾನೆ ಎಂಬ ಆರೋಪ ಮಾಡಲಾಗಿದೆ.

ಟ್ವಿಟರ್ ಬಳಕೆದಾರ ದೀಪಕ್ ಖಾಂಡ್ವಾಲ್ ಅವರು ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದು “ಶಬಾದ್ ಖಾನ್ ಟಿಕ್ ಟಾಕ್‌ನಲ್ಲಿ 11 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ ಮತ್ತು ಅವರು ಕರೋನವೈರಸ್ ಅನ್ನು ಹೇಗೆ ಹರಡಬೇಕೆಂದು ಪ್ರಚಾರ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ.

ಒಂದು ವಿಡಿಯೋದಲ್ಲಿ ಶಾದಾಬ್ ಖಾನ್ ತನ್ನ ಅಂಗೈಯನ್ನು ಉಗುಳಿನಿಂದ ತುಂಬಿಸಿ ಮಹಿಳೆಯ ಕೈ ಕುಲುಕುತ್ತಾನೆ. ಈ ವೀಡಿಯೊವನ್ನು ಹಂಚಿಕೊಂಡವರಲ್ಲಿ ಟ್ವಿಟರ್ ಬಳಕೆದಾರರಾದ ಬಾಲಾ ಮೊದಲಿಗರಾಗಿದ್ದಾರೆ. ಬಾಲಾ ಅವರನ್ನು ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

 

ಅದೇ ಕ್ಲಿಪ್ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಎಕ್ಸ್‌ಪೋಸ್ ದಿ ದೇಶ್ರೋಹಿಸ್ ಮತ್ತು ಮೋದಿ ಒನ್ಸ್ ಮೋರ್ ಎಂಬ ಫೇಸ್‌ಬುಕ್‌ ಪುಟಗಳಿಂದ ಇದು ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ. ರಣವೀರ್ ಗುಪ್ತಾ ಅವರ ಖಾತೆಯಿಂದ ಇದು 25 ಸಾವಿರ ವೀಕ್ಷಣೆಗಳನ್ನು ಪಡೆದಿದೆ, ಅವರು ಬಿಜೆಪಿಯಲ್ಲಿ ಯುವ ಕಾರ್ಯಕರ್ತ, ಆರ್‌ಎಸ್‌ಎಸ್‌ನಲ್ಲಿ ಸ್ವಯಂ ಸೇವಕ ಮತ್ತು ಎಬಿವಿಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

ಫ್ಯಾಕ್ಟ್‌ ಚೆಕ್‌

ಕೊರೋನವೈರಸ್ ಭಾರತದಲ್ಲಿ ಹರಡಲು ಅಥವಾ ಭಾರತದಲ್ಲಿ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಹಲವು ವಾರಗಳ ಮೊದಲು, ಅಂದರೆ ಫೆಬ್ರವರಿ 6, 2020 ರಂದು ವೀಡಿಯೊವನ್ನು ತಯಾರಿಸಲಾಗಿದೆ ಎಂದು ಸದಾಬ್ ಖಾನ್ ಅವರ ಟಿಕ್ ಟೋಕ್ ಪ್ರೊಫೈಲ್ ಮೂಲಕ ತಿಳಿಯಬಹುದಾಗಿದೆ. ಅಂದರೆ ಈ ವಿಡಿಯೋಗೂ ಕೊರೊನಾ ವೈರಸ್‌ಗೂ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಸದಾಬ್‌ ಖಾನ್‌ ಮುಸ್ಲಿಂ ಯುವಕನಾಗಿದ್ದರಿಂದ ಇದು ವೈರಲ್‌ ಆಗಿದೆ.

ಅಲ್ಲದೇ ಕರೋನ ವೈರಸ್‌ ಕುರಿತು ಜಾಗೃತಿಗೆ ಸಂಬಂಧಿಸಿದ ಹಲವಾರು ವೀಡಿಯೊಗಳನ್ನು ಸಹ ಖಾನ್ ಮಾಡಿದ್ದಾರೆ. ಅವರು ಮನೆಯಲ್ಲಿರಲು ಜನರಿಗೆ ಸಲಹೆ ನೀಡುತ್ತಿರುವ ಒಂದು ವಿಡಿಯೋ ಕೆಳಗಿದ ನೋಡಿ.

ಟಿಕ್‌ಟಾಕ್‌ ಅಷ್ಟೇನೂ ಒಳ್ಳೇಯ ಸಾಮಾಜಿಕ ಜಾಲತಾಣವಲ್ಲ. ಅದರಲ್ಲಿ ದ್ವೇಷಪೂರಿತ, ಸುಳ್ಳಿನಿಂದ ಕೂಡಿದ ವಿಡಿಯೋಗಳೇ ತುಂಬಿರುತ್ತವೆ. ಅತಿಹೆಚ್ಚಿನ ಮನರಂಜನೆಗಾಗಿ ಅತಿಹೆಚ್ಚಿನ ಸುಳ್ಳುಗಳು ಸೇರಿಕೊಳ್ಳುತ್ತವೆ.

ಅದೇ ರೀತಿಯಲ್ಲಿ ಇಲ್ಲಿ ಈ ಹಿಂದೆ ಟ್ರೋಲ್‌ ಮಾಡುವ ಸಲುವಾಗಿ ಮುಸ್ಲಿಂ ಯುವಕ ಶಬಾದ್‌ ಖಾನ್‌ ಮಾಡಿದ ವಿಡಿಯೋ ಕೊರೊನಾ ತೀವ್ರವಾಗಿ ಭೀತಿ ಹುಟ್ಟಿಸಿರುವ ಸಮಯದಲ್ಲಿ ವೈರಲ್‌ ಆಗಿದೆ. ಅಲ್ಲದೇ ಕೊರೊನಾ ಹರಡುತ್ತಿದ್ದಾರೆ ಎಂಬು ಕೋಮುವಾದಿ ಆಯಾಮವನ್ನು ಸಹ ನೀಡಲಾಗಿದೆ. ಆದರೆ ಅದೆಲ್ಲವೂ ಸುಳ್ಳಾಗಿದೆ. ಒಂದು ಧರ್ಮವನ್ನು ಗುರಿಯಾಗಿಸಿ ಪ್ರಚಾರ ಮಾಡಲು ಈ ರೀತಿಯ ವಿಡಿಯೋಗಳು ಸರಕಾಗಿ ಬಳಕೆಯಾಗುತ್ತಿವಿ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಇದನ್ನೂ ಓದಿ: ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Sir/ Madam, I am reading articles from last one month in your webesite, I feel your publishing only one side favoured articles. Reality should have some base. I want inform you that I will continue as yours published articles if it says impartial truths. Otherwise I think you’re also sailing in the same boat.
    With regards
    S V GANESH

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...