Homeನಿಜವೋ ಸುಳ್ಳೋFact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

Fact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

- Advertisement -
- Advertisement -

ಟಿಕ್ ಟಾಕ್‌ ಬಳಕೆದಾರ ಶಾದಾಬ್ ಖಾನ್ ಅವರ ವೀಡಿಯೊವೊಂದನ್ನು ಎಲ್ಲಾ ಕಡೆ ಷೇರ್‌ ಮಾಡಿ ಕೊರೊನಾ ಹರಡುವುದೇಗೆಂದು ಈ ಮುಸ್ಲಿಂ ಯುವಕ ವಿಡಿಯೋ ಮಾಡಿ ಹಂಚುತ್ತಿದ್ದಾನೆ ಎಂಬ ಆರೋಪ ಮಾಡಲಾಗಿದೆ.

ಟ್ವಿಟರ್ ಬಳಕೆದಾರ ದೀಪಕ್ ಖಾಂಡ್ವಾಲ್ ಅವರು ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದು “ಶಬಾದ್ ಖಾನ್ ಟಿಕ್ ಟಾಕ್‌ನಲ್ಲಿ 11 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ ಮತ್ತು ಅವರು ಕರೋನವೈರಸ್ ಅನ್ನು ಹೇಗೆ ಹರಡಬೇಕೆಂದು ಪ್ರಚಾರ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ.

ಒಂದು ವಿಡಿಯೋದಲ್ಲಿ ಶಾದಾಬ್ ಖಾನ್ ತನ್ನ ಅಂಗೈಯನ್ನು ಉಗುಳಿನಿಂದ ತುಂಬಿಸಿ ಮಹಿಳೆಯ ಕೈ ಕುಲುಕುತ್ತಾನೆ. ಈ ವೀಡಿಯೊವನ್ನು ಹಂಚಿಕೊಂಡವರಲ್ಲಿ ಟ್ವಿಟರ್ ಬಳಕೆದಾರರಾದ ಬಾಲಾ ಮೊದಲಿಗರಾಗಿದ್ದಾರೆ. ಬಾಲಾ ಅವರನ್ನು ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

 

ಅದೇ ಕ್ಲಿಪ್ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಎಕ್ಸ್‌ಪೋಸ್ ದಿ ದೇಶ್ರೋಹಿಸ್ ಮತ್ತು ಮೋದಿ ಒನ್ಸ್ ಮೋರ್ ಎಂಬ ಫೇಸ್‌ಬುಕ್‌ ಪುಟಗಳಿಂದ ಇದು ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ. ರಣವೀರ್ ಗುಪ್ತಾ ಅವರ ಖಾತೆಯಿಂದ ಇದು 25 ಸಾವಿರ ವೀಕ್ಷಣೆಗಳನ್ನು ಪಡೆದಿದೆ, ಅವರು ಬಿಜೆಪಿಯಲ್ಲಿ ಯುವ ಕಾರ್ಯಕರ್ತ, ಆರ್‌ಎಸ್‌ಎಸ್‌ನಲ್ಲಿ ಸ್ವಯಂ ಸೇವಕ ಮತ್ತು ಎಬಿವಿಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

ಫ್ಯಾಕ್ಟ್‌ ಚೆಕ್‌

ಕೊರೋನವೈರಸ್ ಭಾರತದಲ್ಲಿ ಹರಡಲು ಅಥವಾ ಭಾರತದಲ್ಲಿ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಹಲವು ವಾರಗಳ ಮೊದಲು, ಅಂದರೆ ಫೆಬ್ರವರಿ 6, 2020 ರಂದು ವೀಡಿಯೊವನ್ನು ತಯಾರಿಸಲಾಗಿದೆ ಎಂದು ಸದಾಬ್ ಖಾನ್ ಅವರ ಟಿಕ್ ಟೋಕ್ ಪ್ರೊಫೈಲ್ ಮೂಲಕ ತಿಳಿಯಬಹುದಾಗಿದೆ. ಅಂದರೆ ಈ ವಿಡಿಯೋಗೂ ಕೊರೊನಾ ವೈರಸ್‌ಗೂ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಸದಾಬ್‌ ಖಾನ್‌ ಮುಸ್ಲಿಂ ಯುವಕನಾಗಿದ್ದರಿಂದ ಇದು ವೈರಲ್‌ ಆಗಿದೆ.

ಅಲ್ಲದೇ ಕರೋನ ವೈರಸ್‌ ಕುರಿತು ಜಾಗೃತಿಗೆ ಸಂಬಂಧಿಸಿದ ಹಲವಾರು ವೀಡಿಯೊಗಳನ್ನು ಸಹ ಖಾನ್ ಮಾಡಿದ್ದಾರೆ. ಅವರು ಮನೆಯಲ್ಲಿರಲು ಜನರಿಗೆ ಸಲಹೆ ನೀಡುತ್ತಿರುವ ಒಂದು ವಿಡಿಯೋ ಕೆಳಗಿದ ನೋಡಿ.

ಟಿಕ್‌ಟಾಕ್‌ ಅಷ್ಟೇನೂ ಒಳ್ಳೇಯ ಸಾಮಾಜಿಕ ಜಾಲತಾಣವಲ್ಲ. ಅದರಲ್ಲಿ ದ್ವೇಷಪೂರಿತ, ಸುಳ್ಳಿನಿಂದ ಕೂಡಿದ ವಿಡಿಯೋಗಳೇ ತುಂಬಿರುತ್ತವೆ. ಅತಿಹೆಚ್ಚಿನ ಮನರಂಜನೆಗಾಗಿ ಅತಿಹೆಚ್ಚಿನ ಸುಳ್ಳುಗಳು ಸೇರಿಕೊಳ್ಳುತ್ತವೆ.

ಅದೇ ರೀತಿಯಲ್ಲಿ ಇಲ್ಲಿ ಈ ಹಿಂದೆ ಟ್ರೋಲ್‌ ಮಾಡುವ ಸಲುವಾಗಿ ಮುಸ್ಲಿಂ ಯುವಕ ಶಬಾದ್‌ ಖಾನ್‌ ಮಾಡಿದ ವಿಡಿಯೋ ಕೊರೊನಾ ತೀವ್ರವಾಗಿ ಭೀತಿ ಹುಟ್ಟಿಸಿರುವ ಸಮಯದಲ್ಲಿ ವೈರಲ್‌ ಆಗಿದೆ. ಅಲ್ಲದೇ ಕೊರೊನಾ ಹರಡುತ್ತಿದ್ದಾರೆ ಎಂಬು ಕೋಮುವಾದಿ ಆಯಾಮವನ್ನು ಸಹ ನೀಡಲಾಗಿದೆ. ಆದರೆ ಅದೆಲ್ಲವೂ ಸುಳ್ಳಾಗಿದೆ. ಒಂದು ಧರ್ಮವನ್ನು ಗುರಿಯಾಗಿಸಿ ಪ್ರಚಾರ ಮಾಡಲು ಈ ರೀತಿಯ ವಿಡಿಯೋಗಳು ಸರಕಾಗಿ ಬಳಕೆಯಾಗುತ್ತಿವಿ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಇದನ್ನೂ ಓದಿ: ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Sir/ Madam, I am reading articles from last one month in your webesite, I feel your publishing only one side favoured articles. Reality should have some base. I want inform you that I will continue as yours published articles if it says impartial truths. Otherwise I think you’re also sailing in the same boat.
    With regards
    S V GANESH

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...