Homeನಿಜವೋ ಸುಳ್ಳೋFact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

Fact Check: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?

- Advertisement -
- Advertisement -

ಟಿಕ್ ಟಾಕ್‌ ಬಳಕೆದಾರ ಶಾದಾಬ್ ಖಾನ್ ಅವರ ವೀಡಿಯೊವೊಂದನ್ನು ಎಲ್ಲಾ ಕಡೆ ಷೇರ್‌ ಮಾಡಿ ಕೊರೊನಾ ಹರಡುವುದೇಗೆಂದು ಈ ಮುಸ್ಲಿಂ ಯುವಕ ವಿಡಿಯೋ ಮಾಡಿ ಹಂಚುತ್ತಿದ್ದಾನೆ ಎಂಬ ಆರೋಪ ಮಾಡಲಾಗಿದೆ.

ಟ್ವಿಟರ್ ಬಳಕೆದಾರ ದೀಪಕ್ ಖಾಂಡ್ವಾಲ್ ಅವರು ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದು “ಶಬಾದ್ ಖಾನ್ ಟಿಕ್ ಟಾಕ್‌ನಲ್ಲಿ 11 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ ಮತ್ತು ಅವರು ಕರೋನವೈರಸ್ ಅನ್ನು ಹೇಗೆ ಹರಡಬೇಕೆಂದು ಪ್ರಚಾರ ಮಾಡುತ್ತಿದ್ದಾರೆ” ಎಂದು ಬರೆದಿದ್ದಾರೆ.

ಒಂದು ವಿಡಿಯೋದಲ್ಲಿ ಶಾದಾಬ್ ಖಾನ್ ತನ್ನ ಅಂಗೈಯನ್ನು ಉಗುಳಿನಿಂದ ತುಂಬಿಸಿ ಮಹಿಳೆಯ ಕೈ ಕುಲುಕುತ್ತಾನೆ. ಈ ವೀಡಿಯೊವನ್ನು ಹಂಚಿಕೊಂಡವರಲ್ಲಿ ಟ್ವಿಟರ್ ಬಳಕೆದಾರರಾದ ಬಾಲಾ ಮೊದಲಿಗರಾಗಿದ್ದಾರೆ. ಬಾಲಾ ಅವರನ್ನು ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಫಾಲೋ ಮಾಡುತ್ತಿದ್ದಾರೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

 

ಅದೇ ಕ್ಲಿಪ್ ಫೇಸ್‌ಬುಕ್‌ನಲ್ಲಿ ವೈರಲ್ ಆಗಿದೆ. ಎಕ್ಸ್‌ಪೋಸ್ ದಿ ದೇಶ್ರೋಹಿಸ್ ಮತ್ತು ಮೋದಿ ಒನ್ಸ್ ಮೋರ್ ಎಂಬ ಫೇಸ್‌ಬುಕ್‌ ಪುಟಗಳಿಂದ ಇದು ಸಾವಿರಾರು ವೀಕ್ಷಣೆಗಳನ್ನು ಗಳಿಸಿದೆ. ರಣವೀರ್ ಗುಪ್ತಾ ಅವರ ಖಾತೆಯಿಂದ ಇದು 25 ಸಾವಿರ ವೀಕ್ಷಣೆಗಳನ್ನು ಪಡೆದಿದೆ, ಅವರು ಬಿಜೆಪಿಯಲ್ಲಿ ಯುವ ಕಾರ್ಯಕರ್ತ, ಆರ್‌ಎಸ್‌ಎಸ್‌ನಲ್ಲಿ ಸ್ವಯಂ ಸೇವಕ ಮತ್ತು ಎಬಿವಿಪಿ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ.

ಫ್ಯಾಕ್ಟ್‌ ಚೆಕ್‌

ಕೊರೋನವೈರಸ್ ಭಾರತದಲ್ಲಿ ಹರಡಲು ಅಥವಾ ಭಾರತದಲ್ಲಿ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸುವ ಹಲವು ವಾರಗಳ ಮೊದಲು, ಅಂದರೆ ಫೆಬ್ರವರಿ 6, 2020 ರಂದು ವೀಡಿಯೊವನ್ನು ತಯಾರಿಸಲಾಗಿದೆ ಎಂದು ಸದಾಬ್ ಖಾನ್ ಅವರ ಟಿಕ್ ಟೋಕ್ ಪ್ರೊಫೈಲ್ ಮೂಲಕ ತಿಳಿಯಬಹುದಾಗಿದೆ. ಅಂದರೆ ಈ ವಿಡಿಯೋಗೂ ಕೊರೊನಾ ವೈರಸ್‌ಗೂ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಸದಾಬ್‌ ಖಾನ್‌ ಮುಸ್ಲಿಂ ಯುವಕನಾಗಿದ್ದರಿಂದ ಇದು ವೈರಲ್‌ ಆಗಿದೆ.

ಅಲ್ಲದೇ ಕರೋನ ವೈರಸ್‌ ಕುರಿತು ಜಾಗೃತಿಗೆ ಸಂಬಂಧಿಸಿದ ಹಲವಾರು ವೀಡಿಯೊಗಳನ್ನು ಸಹ ಖಾನ್ ಮಾಡಿದ್ದಾರೆ. ಅವರು ಮನೆಯಲ್ಲಿರಲು ಜನರಿಗೆ ಸಲಹೆ ನೀಡುತ್ತಿರುವ ಒಂದು ವಿಡಿಯೋ ಕೆಳಗಿದ ನೋಡಿ.

ಟಿಕ್‌ಟಾಕ್‌ ಅಷ್ಟೇನೂ ಒಳ್ಳೇಯ ಸಾಮಾಜಿಕ ಜಾಲತಾಣವಲ್ಲ. ಅದರಲ್ಲಿ ದ್ವೇಷಪೂರಿತ, ಸುಳ್ಳಿನಿಂದ ಕೂಡಿದ ವಿಡಿಯೋಗಳೇ ತುಂಬಿರುತ್ತವೆ. ಅತಿಹೆಚ್ಚಿನ ಮನರಂಜನೆಗಾಗಿ ಅತಿಹೆಚ್ಚಿನ ಸುಳ್ಳುಗಳು ಸೇರಿಕೊಳ್ಳುತ್ತವೆ.

ಅದೇ ರೀತಿಯಲ್ಲಿ ಇಲ್ಲಿ ಈ ಹಿಂದೆ ಟ್ರೋಲ್‌ ಮಾಡುವ ಸಲುವಾಗಿ ಮುಸ್ಲಿಂ ಯುವಕ ಶಬಾದ್‌ ಖಾನ್‌ ಮಾಡಿದ ವಿಡಿಯೋ ಕೊರೊನಾ ತೀವ್ರವಾಗಿ ಭೀತಿ ಹುಟ್ಟಿಸಿರುವ ಸಮಯದಲ್ಲಿ ವೈರಲ್‌ ಆಗಿದೆ. ಅಲ್ಲದೇ ಕೊರೊನಾ ಹರಡುತ್ತಿದ್ದಾರೆ ಎಂಬು ಕೋಮುವಾದಿ ಆಯಾಮವನ್ನು ಸಹ ನೀಡಲಾಗಿದೆ. ಆದರೆ ಅದೆಲ್ಲವೂ ಸುಳ್ಳಾಗಿದೆ. ಒಂದು ಧರ್ಮವನ್ನು ಗುರಿಯಾಗಿಸಿ ಪ್ರಚಾರ ಮಾಡಲು ಈ ರೀತಿಯ ವಿಡಿಯೋಗಳು ಸರಕಾಗಿ ಬಳಕೆಯಾಗುತ್ತಿವಿ.

ಕೃಪೆ: ಆಲ್ಟ್‌ನ್ಯೂಸ್‌


ಇದನ್ನೂ ಓದಿ: ನಿಮ್ಮ ಚಾನೆಲ್‌ ಪ್ರಸಾರ ಏಕೆ ನಿಲ್ಲಿಸಬಾರದು: ಸುಳ್ಳು ಸುದ್ದಿ ಪ್ರಸಾರ ಮಾಡಿದ ಪಬ್ಲಿಕ್‌ ಟಿವಿಗೆ ನೋಟಿಸ್‌

ಇದನ್ನೂ ಓದಿ: ಇಡೀ ಪ್ರಪಂಚ ಎದುರಿಸುವಷ್ಟು ಕೊರೊನಾವನ್ನು ಭಾರತವೊಂದೇ ಎದುರಿಸುತ್ತಿದೆ ಎಂಬುದು ನಿಜವೇ? ಈ ನಕ್ಷೆ ಯಾವಾಗಿನದು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Respected Sir/ Madam, I am reading articles from last one month in your webesite, I feel your publishing only one side favoured articles. Reality should have some base. I want inform you that I will continue as yours published articles if it says impartial truths. Otherwise I think you’re also sailing in the same boat.
    With regards
    S V GANESH

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...