Homeಫ್ಯಾಕ್ಟ್‌ಚೆಕ್FACT CHECK : ಬಳ್ಳಾರಿಯ ಚಿನ್ನಾಭರಣ ಮಳಿಗೆಯಲ್ಲಿ ನಡೆದಿರುವುದು ಬಾಂಬ್ ಸ್ಪೋಟವಲ್ಲ

FACT CHECK : ಬಳ್ಳಾರಿಯ ಚಿನ್ನಾಭರಣ ಮಳಿಗೆಯಲ್ಲಿ ನಡೆದಿರುವುದು ಬಾಂಬ್ ಸ್ಪೋಟವಲ್ಲ

- Advertisement -
- Advertisement -

ಬಳ್ಳಾರಿಯ ಕಲ್ಯಾಣ್ ಜುವೆಲ್ಲರ್ಸ್ ಮಳಿಗೆಯಲ್ಲಿ ಬಾಂಬ್ ಸ್ಪೋಟ ಸಂಭವಿಸಿದೆ ಎಂಬರ್ಥದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಹಂಚಿಕೊಳ್ಳಲಾಗಿದೆ.

“ಮತ್ತೊಂದು ದಿನ, ಕರ್ನಾಟಕದಲ್ಲಿ ಮತ್ತೊಂದು ಭಯಾನಕ ಘಟನೆ. ಬಳ್ಳಾರಿಯ ಕಲ್ಯಾಣ್ ಜುವೆಲ್ಲರ್ಸ್ ಶೋ ರೂಮ್‌ನಲ್ಲಿ ಸ್ಪೋಟ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದಾರೆ. ಕಾಂಗ್ರೆಸ್‌ ಆಡಳಿತದಲ್ಲಿ ಈ ರಾಜ್ಯ ಬದುಕಲು ಅತ್ಯಂತ ಅಸುರಕ್ಷಿತವಾಗುತ್ತಿದೆ. 2014ಕ್ಕಿಂತ ಹಿಂದಿನ ಪರಿಸ್ಥಿತಿ ನೆನಪಿಸುತ್ತಿದೆ.” ಎಂದು ಕೆಲ ಎಕ್ಸ್ ಬಳಕೆದಾರರು ಬರೆದುಕೊಂಡಿದ್ದು, ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

“ಮತ್ತೊಂದು ದಿನ, ಮತ್ತೊಂದು ಸ್ಫೋಟ. ಕರ್ನಾಟಕದ ಬಳ್ಳಾರಿಯ ಕಲ್ಯಾಣ್ ಜುವೆಲ್ಲರ್ಸ್‌ನಲ್ಲಿ ಸ್ಫೋಟ. ಬಿಟ್ಟಿ ಭಾಗ್ಯದ ಕಾಂಗ್ರೆಸ್‌ ಕರ್ನಾಟಕಕ್ಕೆ ಸ್ವಾಗತ” ಎಂದು ಇನ್ನೂ ಕೆಲವರು ಪೋಸ್ಟ್ ಹಾಕಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳ ಪೋಸ್ಟ್‌ನಲ್ಲಿರುವುದು ಸಂಪೂರ್ಣ ಸುಳ್ಳು ಮಾಹಿತಿಯಾಗಿದೆ. ಬಳ್ಳಾರಿಯ ಕಲ್ಯಾಣ್ ಜುವೆಲ್ಲರ್ಸ್ ಶಾಖೆಯಲ್ಲಿ ನಡೆದಿರುವುದು ಯಾವುದೇ ಬಾಂಬ್ ಸ್ಪೋಟ ಅಲ್ಲ. ಶೋರೂಂನ ಎಸಿ ಸ್ಪೋಟಗೊಂಡು ದುರ್ಘಟನೆ ಸಂಭವಿಸಿದೆ. ಈ ಕುರಿತು ಕನ್ನಡದ ಅನೇಕ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ.

ಈಟಿವಿ ಭಾರತ್ ಕರ್ನಾಟಕ‘ ಪ್ರಕಟಿಸಿದ ಸುದ್ದಿಯಲ್ಲಿ “2 ಮೇ 2024ರಂದು ಬಳ್ಳಾರಿ ನಗರದ ತೇರು ಬೀದಿಯಲ್ಲಿರುವ ಕಲ್ಯಾಣ್​ ಜ್ಯುವೆಲರ್ಸ್ ಚಿನ್ನಾಭರಣ ಮಾರಾಟ ಮಳಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಎಸಿ ಸ್ಪೋಟಗೊಂಡು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ನಗರ ಡಿವೈಎಸ್‌ಪಿ, ಬ್ರೂಸ್‌ಪೇಟೆ ಸರ್ಕಲ್‌ ಇನ್ಸ್​ಪೆಕ್ಟ‌ರ್ ಮತ್ತು ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ” ಎಂದು ತಿಳಿಸಿದೆ.

ಕನ್ನಡ ಪ್ರಭ‘ ಪ್ರಕಟಿಸಿದ ವರದಿಯಲ್ಲಿ “ಗಣಿ ಜಿಲ್ಲೆ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ”.

“ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಂಭೀರವಾಗಿ ಗಾಯಗೊಂಡು ಓರ್ವ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದ್ದು, ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್‌ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದೆ” ಎಂದು ತಿಳಿಸಿದೆ.

ಘಟನೆಯ ಕುರಿತು ಇಂಗ್ಲಿಷ್ ವೆಬ್‌ಸೈಟ್‌ ‘ಫ್ರೀ ಪ್ರೆಸ್ ಜರ್ನಲ್‘ ಕೂಡ ಸುದ್ದಿ ಪ್ರಕಟಿಸಿದ್ದು, ಬಳ್ಳಾರಿಯ ಕಲ್ಯಾಣ್ ಜುವೆಲ್ಲರ್ಸ್ ಚಿನ್ನದ ಮಳಿಗೆಯಲ್ಲಿ ಎಸಿ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ.

ಹಾಗಾಗಿ, ಬಳ್ಳಾರಿಯ ಕಲ್ಯಾಣ್ ಜುವೆಲ್ಲರ್ಸ್ ಶೋರೂಂನಲ್ಲಿ ನಡೆದಿರುವುದು ಎಸಿ ಸ್ಪೋಟವೇ ಹೊರತು ಯಾವುದೇ ಬಾಂಬ್ ಸ್ಪೋಟವಲ್ಲ.

ಇದನ್ನೂ ಓದಿ : FACT CHECK : ಕಾಂಗ್ರೆಸ್ ಪ್ರಣಾಳಿಕೆ ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಭರವಸೆ ನೀಡಿದೆ ಎಂಬ ಮೋದಿ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...