Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದು ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದ ಬಳಿಕ, ಖಾಲಿಸ್ತಾನಿ ಬೆಂಬಲಿಗರ ಗುಂಪು ಭಾರತದ ಭಾವುಟವನ್ನು ಹರಿದಿದ್ದಾರೆ ಎಂಬ ಒಕ್ಕಣೆಯೊಂದಿಗೆ ಒಂದು ಪೋಸ್ಟ್‌‌ ಮಾಡಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್‌ ಆಗಿದೆ. ಈ ವಿಡಿಯೋವನ್ನು ಭಾರತದಲ್ಲಿನ ರೈತರ ಹೋರಾಟ ಹಾಗೂ ಉತ್ತರ ಪ್ರದೇಶದ ಘಟನೆಗೆ ತಳುಕು ಹಾಕಲಾಗಿದೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟಿಸುತ್ತಿರುವ ರೈತರು ಭಾರತದ ಭಾವುಟವನ್ನು ಹಾಗೂ ಹರಿದು ಹಾಕುತ್ತಿರುವುದು ಎಂಬ ಒಕ್ಕಣೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಈ ವಿಡಿಯೋದ ಹಿಂದಿನ ಸತ್ಯವನ್ನು ಫ್ಯಾಕ್ಟಿ.ಇನ್‌ ಜಾಲತಾಣ ಬಯಲಿಗೆಳೆದಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ ತಿಂಗಳು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದಾಗ ನ್ಯೂಯಾರ್ಕ್‌ನಲ್ಲಿನ ವಿಶ್ವಸಂಸ್ಥೆಯ ಕಚೇರಿಯ ಹೊರಗೆ ಖಾಲಿಸ್ತಾನಿ ಬೆಂಬಲಿಗರು ನಡೆಸಿದ ಪ್ರತಿಭಟನೆಯ ವಿಡಿಯೋ ಇದಾಗಿದೆ. ಕೆಲವು ಆನ್‌ಲೈನ್‌ ನ್ಯೂಸ್ ಪೋರ್ಟಲ್‌ಗಳು ಇದೇ ಥರದ ವಿಡಿಯೋದ ವರದಿ ಮಾಡಿದ್ದಾರೆ. ಈ ವಿಡಿಯೋ ಭಾರತಕ್ಕೆ ಅಥವಾ ಲಖಿಂಪುರ್‌ ಖೇರಿ ಘಟನೆಗೆ ಸಂಬಂಧಿಸಿದ್ದಲ್ಲ. ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಿರುವುದು ಸುಳ್ಳಾಗಿದೆ.

ಇದನ್ನೂ ಓದಿರಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಸಂಬಂಧಪಟ್ಟ ಕೀವರ್ಡ್‌‌ಗಳೊಂದಿಗೆ ಗೂಗಲ್‌ ಸರ್ಚ್ ಮಾಡಿದಾಗ ಇದೇ ವಿಡಿಯೋವನ್ನು ಎನ್‌‌ಆರ್‌ಐ ಹೆರಾಲ್ಡ್‌ ಟ್ಟೀಟ್ ಮಾಡಿ ಶೇ‌ರ್ ಮಾಡಿರುವುದು ಕಂಡುಬಂದಿದೆ. “ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ನ್ಯೂಯಾರ್ಕ್ ನಲ್ಲಿ ಖಲಿಸ್ತಾನಿ ಸಿಖ್ ಬಂಡುಕೋರರು ಭಾರತೀಯ ರಾಷ್ಟ್ರೀಯ ಧ್ವಜವನ್ನು ಹರಿದು ಹಾಕಿ, ಉಗ್ರ ಘೋಷಣೆಗಳನ್ನು ಕೂಗಿದರು” ಎಂಬ ವಿವರಣೆಯನ್ನು ಶೇರ್‌ ಮಾಡಲಾಗಿರುವ ವಿಡಿಯೋಕ್ಕೆ ನೀಡಲಾಗಿದೆ. ‘ಎನ್ ಆರ್ ಐ ಹೆರಾಲ್ಡ್’ ಆಸ್ಟ್ರೇಲಿಯಾ ಮೂಲದ ವೆಬ್ ನ್ಯೂಸ್ ಪೋರ್ಟಲ್ ಆಗಿದ್ದು, ಇದು ಹೆಚ್ಚಾಗಿ ಭಾರತಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಒಳಗೊಂಡಿರುತ್ತದೆ. ಎನ್ ಆರ್ ಐ ಹೆರಾಲ್ಡ್ ಇದೇ ವಿಡಿಯೋವನ್ನು ತಮ್ಮ ಫೇಸ್ ಬುಕ್ ಪೇಜ್‌ನಲ್ಲೂ ಹಂಚಿಕೊಂಡಿದೆ.

ಮೇಲಿನ ಟ್ವೀಟ್‌ನಿಂದ ಒಂದು ಸುಳಿವು ಪಡೆದು ಹುಡುಕಾಡಿದಾಗ, ಕಳೆದ ತಿಂಗಳು (ಸೆಪ್ಟೆಂಬರ್‌ 2021) ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಹೊರಗೆ ಪ್ರತಿಭಟನೆ ನಡೆದಿರುವ ವರದಿಯ ಕೆಲವು ಆನ್‌ಲೈನ್‌ ನ್ಯೂಸ್‌ಗಳು (ಇಲ್ಲಿ ಮತ್ತು ಇಲ್ಲಿ) ದೊರೆತಿವೆ. ಈ ಲೇಖನಗಳು ಪ್ರತಿಭಟನೆಗೆ ಸಂಬಂಧಿಸಿದ ಫೋಟೋಗಳನ್ನೂ ಪ್ರಕಟಿಸಿದ್ದು, ವೈರಲ್‌ ವಿಡಿಯೋದಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಸುಟ್ಟುಹಾಕಿದ ಅದೇ ಇಬ್ಬರು ಪ್ರತಿಭಟನಾಕಾರರನ್ನು ಈ ಚಿತ್ರಗಳಲ್ಲೂ ಕಾಣಬಹುದು.

ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಈ ಮೇಲೆ ನಮೂದಿಸಲಾಗಿರುವ ಪ್ರತಿಭಟನೆಯ ನೇರಪ್ರಸಾರವನ್ನು ಯೂಟ್ಯೂಬ್‌ ಚಾನೆಲ್‌ವೊಂದು ಮಾಡಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳೇ ಈ ವಿಡಿಯೋದಲ್ಲೂ ಇರುವುದನ್ನು ಕಾಣಬಹುದು. ಅದಲ್ಲದೆ ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಪ್ರತಿಭಟನೆ ನಡೆದಿರುವ ಕುರಿತು ಮುಖ್ಯವಾಹಿನಿ ಸುದ್ದಿ ಸಂಸ್ಥೆಗಳೂ (ಇಲ್ಲಿ ಮತ್ತು ಇಲ್ಲಿ) ವರದಿ ಮಾಡಿವೆ. ಇವೆಲ್ಲವುಗಳಿಂದ ತಿಳಿಯುವುದೇನೆಂದರೆ ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ವೇಳೆ ಖಾಲಿಸ್ಥಾನಿ ಬೆಂಬಲಿಗರು ಪ್ರತಿಭಟಿಸಿರುವುದು ಈ ವಿಡಿಯೋದಲ್ಲಿ ಕಂಡು ಬರುತ್ತದೆ. ಭಾರತ ಅಥವಾ ಲಖಿಂಪುರ್‌ಖೇರಿ ಘಟನೆಗೂ ಇದು ಸಂಬಂಧಿಸಿದ್ದಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪ್ರಧಾನಿ ಮೋದಿಯವರ ವಿಶ್ವಸಂಸ್ಥೆಯ ಭಾಷಣದ ವೇಳೆ ಖಲಿಸ್ತಾನ್ ಬೆಂಬಲಿಗರು ನ್ಯೂಯಾರ್ಕ್‌ನ ವಿಶ್ವಸಂಸ್ಥೆಯ ಕಟ್ಟಡದ ಹೊರಗೆ ಭಾರತೀಯ ರಾಷ್ಟ್ರ ಧ್ವಜವನ್ನು ಹರಿದು ಹಾಕಿದ ವಿಡಿಯೋವನ್ನು ಲಖಿಂಪುರ್ ಖೇರಿ ಘಟನೆಗೆ ಆರೋಪಿಸಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...