Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದು ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದ ಬಳಿಕ, ಖಾಲಿಸ್ತಾನಿ ಬೆಂಬಲಿಗರ ಗುಂಪು ಭಾರತದ ಭಾವುಟವನ್ನು ಹರಿದಿದ್ದಾರೆ ಎಂಬ ಒಕ್ಕಣೆಯೊಂದಿಗೆ ಒಂದು ಪೋಸ್ಟ್‌‌ ಮಾಡಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್‌ ಆಗಿದೆ. ಈ ವಿಡಿಯೋವನ್ನು ಭಾರತದಲ್ಲಿನ ರೈತರ ಹೋರಾಟ ಹಾಗೂ ಉತ್ತರ ಪ್ರದೇಶದ ಘಟನೆಗೆ ತಳುಕು ಹಾಕಲಾಗಿದೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟಿಸುತ್ತಿರುವ ರೈತರು ಭಾರತದ ಭಾವುಟವನ್ನು ಹಾಗೂ ಹರಿದು ಹಾಕುತ್ತಿರುವುದು ಎಂಬ ಒಕ್ಕಣೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಈ ವಿಡಿಯೋದ ಹಿಂದಿನ ಸತ್ಯವನ್ನು ಫ್ಯಾಕ್ಟಿ.ಇನ್‌ ಜಾಲತಾಣ ಬಯಲಿಗೆಳೆದಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ ತಿಂಗಳು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದಾಗ ನ್ಯೂಯಾರ್ಕ್‌ನಲ್ಲಿನ ವಿಶ್ವಸಂಸ್ಥೆಯ ಕಚೇರಿಯ ಹೊರಗೆ ಖಾಲಿಸ್ತಾನಿ ಬೆಂಬಲಿಗರು ನಡೆಸಿದ ಪ್ರತಿಭಟನೆಯ ವಿಡಿಯೋ ಇದಾಗಿದೆ. ಕೆಲವು ಆನ್‌ಲೈನ್‌ ನ್ಯೂಸ್ ಪೋರ್ಟಲ್‌ಗಳು ಇದೇ ಥರದ ವಿಡಿಯೋದ ವರದಿ ಮಾಡಿದ್ದಾರೆ. ಈ ವಿಡಿಯೋ ಭಾರತಕ್ಕೆ ಅಥವಾ ಲಖಿಂಪುರ್‌ ಖೇರಿ ಘಟನೆಗೆ ಸಂಬಂಧಿಸಿದ್ದಲ್ಲ. ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಿರುವುದು ಸುಳ್ಳಾಗಿದೆ.

ಇದನ್ನೂ ಓದಿರಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಸಂಬಂಧಪಟ್ಟ ಕೀವರ್ಡ್‌‌ಗಳೊಂದಿಗೆ ಗೂಗಲ್‌ ಸರ್ಚ್ ಮಾಡಿದಾಗ ಇದೇ ವಿಡಿಯೋವನ್ನು ಎನ್‌‌ಆರ್‌ಐ ಹೆರಾಲ್ಡ್‌ ಟ್ಟೀಟ್ ಮಾಡಿ ಶೇ‌ರ್ ಮಾಡಿರುವುದು ಕಂಡುಬಂದಿದೆ. “ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ನ್ಯೂಯಾರ್ಕ್ ನಲ್ಲಿ ಖಲಿಸ್ತಾನಿ ಸಿಖ್ ಬಂಡುಕೋರರು ಭಾರತೀಯ ರಾಷ್ಟ್ರೀಯ ಧ್ವಜವನ್ನು ಹರಿದು ಹಾಕಿ, ಉಗ್ರ ಘೋಷಣೆಗಳನ್ನು ಕೂಗಿದರು” ಎಂಬ ವಿವರಣೆಯನ್ನು ಶೇರ್‌ ಮಾಡಲಾಗಿರುವ ವಿಡಿಯೋಕ್ಕೆ ನೀಡಲಾಗಿದೆ. ‘ಎನ್ ಆರ್ ಐ ಹೆರಾಲ್ಡ್’ ಆಸ್ಟ್ರೇಲಿಯಾ ಮೂಲದ ವೆಬ್ ನ್ಯೂಸ್ ಪೋರ್ಟಲ್ ಆಗಿದ್ದು, ಇದು ಹೆಚ್ಚಾಗಿ ಭಾರತಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಒಳಗೊಂಡಿರುತ್ತದೆ. ಎನ್ ಆರ್ ಐ ಹೆರಾಲ್ಡ್ ಇದೇ ವಿಡಿಯೋವನ್ನು ತಮ್ಮ ಫೇಸ್ ಬುಕ್ ಪೇಜ್‌ನಲ್ಲೂ ಹಂಚಿಕೊಂಡಿದೆ.

ಮೇಲಿನ ಟ್ವೀಟ್‌ನಿಂದ ಒಂದು ಸುಳಿವು ಪಡೆದು ಹುಡುಕಾಡಿದಾಗ, ಕಳೆದ ತಿಂಗಳು (ಸೆಪ್ಟೆಂಬರ್‌ 2021) ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಹೊರಗೆ ಪ್ರತಿಭಟನೆ ನಡೆದಿರುವ ವರದಿಯ ಕೆಲವು ಆನ್‌ಲೈನ್‌ ನ್ಯೂಸ್‌ಗಳು (ಇಲ್ಲಿ ಮತ್ತು ಇಲ್ಲಿ) ದೊರೆತಿವೆ. ಈ ಲೇಖನಗಳು ಪ್ರತಿಭಟನೆಗೆ ಸಂಬಂಧಿಸಿದ ಫೋಟೋಗಳನ್ನೂ ಪ್ರಕಟಿಸಿದ್ದು, ವೈರಲ್‌ ವಿಡಿಯೋದಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಸುಟ್ಟುಹಾಕಿದ ಅದೇ ಇಬ್ಬರು ಪ್ರತಿಭಟನಾಕಾರರನ್ನು ಈ ಚಿತ್ರಗಳಲ್ಲೂ ಕಾಣಬಹುದು.

ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಈ ಮೇಲೆ ನಮೂದಿಸಲಾಗಿರುವ ಪ್ರತಿಭಟನೆಯ ನೇರಪ್ರಸಾರವನ್ನು ಯೂಟ್ಯೂಬ್‌ ಚಾನೆಲ್‌ವೊಂದು ಮಾಡಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳೇ ಈ ವಿಡಿಯೋದಲ್ಲೂ ಇರುವುದನ್ನು ಕಾಣಬಹುದು. ಅದಲ್ಲದೆ ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಪ್ರತಿಭಟನೆ ನಡೆದಿರುವ ಕುರಿತು ಮುಖ್ಯವಾಹಿನಿ ಸುದ್ದಿ ಸಂಸ್ಥೆಗಳೂ (ಇಲ್ಲಿ ಮತ್ತು ಇಲ್ಲಿ) ವರದಿ ಮಾಡಿವೆ. ಇವೆಲ್ಲವುಗಳಿಂದ ತಿಳಿಯುವುದೇನೆಂದರೆ ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ವೇಳೆ ಖಾಲಿಸ್ಥಾನಿ ಬೆಂಬಲಿಗರು ಪ್ರತಿಭಟಿಸಿರುವುದು ಈ ವಿಡಿಯೋದಲ್ಲಿ ಕಂಡು ಬರುತ್ತದೆ. ಭಾರತ ಅಥವಾ ಲಖಿಂಪುರ್‌ಖೇರಿ ಘಟನೆಗೂ ಇದು ಸಂಬಂಧಿಸಿದ್ದಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪ್ರಧಾನಿ ಮೋದಿಯವರ ವಿಶ್ವಸಂಸ್ಥೆಯ ಭಾಷಣದ ವೇಳೆ ಖಲಿಸ್ತಾನ್ ಬೆಂಬಲಿಗರು ನ್ಯೂಯಾರ್ಕ್‌ನ ವಿಶ್ವಸಂಸ್ಥೆಯ ಕಟ್ಟಡದ ಹೊರಗೆ ಭಾರತೀಯ ರಾಷ್ಟ್ರ ಧ್ವಜವನ್ನು ಹರಿದು ಹಾಕಿದ ವಿಡಿಯೋವನ್ನು ಲಖಿಂಪುರ್ ಖೇರಿ ಘಟನೆಗೆ ಆರೋಪಿಸಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...