Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದು ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದ ಬಳಿಕ, ಖಾಲಿಸ್ತಾನಿ ಬೆಂಬಲಿಗರ ಗುಂಪು ಭಾರತದ ಭಾವುಟವನ್ನು ಹರಿದಿದ್ದಾರೆ ಎಂಬ ಒಕ್ಕಣೆಯೊಂದಿಗೆ ಒಂದು ಪೋಸ್ಟ್‌‌ ಮಾಡಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್‌ ಆಗಿದೆ. ಈ ವಿಡಿಯೋವನ್ನು ಭಾರತದಲ್ಲಿನ ರೈತರ ಹೋರಾಟ ಹಾಗೂ ಉತ್ತರ ಪ್ರದೇಶದ ಘಟನೆಗೆ ತಳುಕು ಹಾಕಲಾಗಿದೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟಿಸುತ್ತಿರುವ ರೈತರು ಭಾರತದ ಭಾವುಟವನ್ನು ಹಾಗೂ ಹರಿದು ಹಾಕುತ್ತಿರುವುದು ಎಂಬ ಒಕ್ಕಣೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಈ ವಿಡಿಯೋದ ಹಿಂದಿನ ಸತ್ಯವನ್ನು ಫ್ಯಾಕ್ಟಿ.ಇನ್‌ ಜಾಲತಾಣ ಬಯಲಿಗೆಳೆದಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ ತಿಂಗಳು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದಾಗ ನ್ಯೂಯಾರ್ಕ್‌ನಲ್ಲಿನ ವಿಶ್ವಸಂಸ್ಥೆಯ ಕಚೇರಿಯ ಹೊರಗೆ ಖಾಲಿಸ್ತಾನಿ ಬೆಂಬಲಿಗರು ನಡೆಸಿದ ಪ್ರತಿಭಟನೆಯ ವಿಡಿಯೋ ಇದಾಗಿದೆ. ಕೆಲವು ಆನ್‌ಲೈನ್‌ ನ್ಯೂಸ್ ಪೋರ್ಟಲ್‌ಗಳು ಇದೇ ಥರದ ವಿಡಿಯೋದ ವರದಿ ಮಾಡಿದ್ದಾರೆ. ಈ ವಿಡಿಯೋ ಭಾರತಕ್ಕೆ ಅಥವಾ ಲಖಿಂಪುರ್‌ ಖೇರಿ ಘಟನೆಗೆ ಸಂಬಂಧಿಸಿದ್ದಲ್ಲ. ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಿರುವುದು ಸುಳ್ಳಾಗಿದೆ.

ಇದನ್ನೂ ಓದಿರಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಸಂಬಂಧಪಟ್ಟ ಕೀವರ್ಡ್‌‌ಗಳೊಂದಿಗೆ ಗೂಗಲ್‌ ಸರ್ಚ್ ಮಾಡಿದಾಗ ಇದೇ ವಿಡಿಯೋವನ್ನು ಎನ್‌‌ಆರ್‌ಐ ಹೆರಾಲ್ಡ್‌ ಟ್ಟೀಟ್ ಮಾಡಿ ಶೇ‌ರ್ ಮಾಡಿರುವುದು ಕಂಡುಬಂದಿದೆ. “ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ನ್ಯೂಯಾರ್ಕ್ ನಲ್ಲಿ ಖಲಿಸ್ತಾನಿ ಸಿಖ್ ಬಂಡುಕೋರರು ಭಾರತೀಯ ರಾಷ್ಟ್ರೀಯ ಧ್ವಜವನ್ನು ಹರಿದು ಹಾಕಿ, ಉಗ್ರ ಘೋಷಣೆಗಳನ್ನು ಕೂಗಿದರು” ಎಂಬ ವಿವರಣೆಯನ್ನು ಶೇರ್‌ ಮಾಡಲಾಗಿರುವ ವಿಡಿಯೋಕ್ಕೆ ನೀಡಲಾಗಿದೆ. ‘ಎನ್ ಆರ್ ಐ ಹೆರಾಲ್ಡ್’ ಆಸ್ಟ್ರೇಲಿಯಾ ಮೂಲದ ವೆಬ್ ನ್ಯೂಸ್ ಪೋರ್ಟಲ್ ಆಗಿದ್ದು, ಇದು ಹೆಚ್ಚಾಗಿ ಭಾರತಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಒಳಗೊಂಡಿರುತ್ತದೆ. ಎನ್ ಆರ್ ಐ ಹೆರಾಲ್ಡ್ ಇದೇ ವಿಡಿಯೋವನ್ನು ತಮ್ಮ ಫೇಸ್ ಬುಕ್ ಪೇಜ್‌ನಲ್ಲೂ ಹಂಚಿಕೊಂಡಿದೆ.

ಮೇಲಿನ ಟ್ವೀಟ್‌ನಿಂದ ಒಂದು ಸುಳಿವು ಪಡೆದು ಹುಡುಕಾಡಿದಾಗ, ಕಳೆದ ತಿಂಗಳು (ಸೆಪ್ಟೆಂಬರ್‌ 2021) ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಹೊರಗೆ ಪ್ರತಿಭಟನೆ ನಡೆದಿರುವ ವರದಿಯ ಕೆಲವು ಆನ್‌ಲೈನ್‌ ನ್ಯೂಸ್‌ಗಳು (ಇಲ್ಲಿ ಮತ್ತು ಇಲ್ಲಿ) ದೊರೆತಿವೆ. ಈ ಲೇಖನಗಳು ಪ್ರತಿಭಟನೆಗೆ ಸಂಬಂಧಿಸಿದ ಫೋಟೋಗಳನ್ನೂ ಪ್ರಕಟಿಸಿದ್ದು, ವೈರಲ್‌ ವಿಡಿಯೋದಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಸುಟ್ಟುಹಾಕಿದ ಅದೇ ಇಬ್ಬರು ಪ್ರತಿಭಟನಾಕಾರರನ್ನು ಈ ಚಿತ್ರಗಳಲ್ಲೂ ಕಾಣಬಹುದು.

ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಈ ಮೇಲೆ ನಮೂದಿಸಲಾಗಿರುವ ಪ್ರತಿಭಟನೆಯ ನೇರಪ್ರಸಾರವನ್ನು ಯೂಟ್ಯೂಬ್‌ ಚಾನೆಲ್‌ವೊಂದು ಮಾಡಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳೇ ಈ ವಿಡಿಯೋದಲ್ಲೂ ಇರುವುದನ್ನು ಕಾಣಬಹುದು. ಅದಲ್ಲದೆ ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಪ್ರತಿಭಟನೆ ನಡೆದಿರುವ ಕುರಿತು ಮುಖ್ಯವಾಹಿನಿ ಸುದ್ದಿ ಸಂಸ್ಥೆಗಳೂ (ಇಲ್ಲಿ ಮತ್ತು ಇಲ್ಲಿ) ವರದಿ ಮಾಡಿವೆ. ಇವೆಲ್ಲವುಗಳಿಂದ ತಿಳಿಯುವುದೇನೆಂದರೆ ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ವೇಳೆ ಖಾಲಿಸ್ಥಾನಿ ಬೆಂಬಲಿಗರು ಪ್ರತಿಭಟಿಸಿರುವುದು ಈ ವಿಡಿಯೋದಲ್ಲಿ ಕಂಡು ಬರುತ್ತದೆ. ಭಾರತ ಅಥವಾ ಲಖಿಂಪುರ್‌ಖೇರಿ ಘಟನೆಗೂ ಇದು ಸಂಬಂಧಿಸಿದ್ದಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪ್ರಧಾನಿ ಮೋದಿಯವರ ವಿಶ್ವಸಂಸ್ಥೆಯ ಭಾಷಣದ ವೇಳೆ ಖಲಿಸ್ತಾನ್ ಬೆಂಬಲಿಗರು ನ್ಯೂಯಾರ್ಕ್‌ನ ವಿಶ್ವಸಂಸ್ಥೆಯ ಕಟ್ಟಡದ ಹೊರಗೆ ಭಾರತೀಯ ರಾಷ್ಟ್ರ ಧ್ವಜವನ್ನು ಹರಿದು ಹಾಕಿದ ವಿಡಿಯೋವನ್ನು ಲಖಿಂಪುರ್ ಖೇರಿ ಘಟನೆಗೆ ಆರೋಪಿಸಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...