Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

ಫ್ಯಾಕ್ಟ್‌ ಚೆಕ್‌: ಭಾರತೀಯ ರೈತರು ರಾಷ್ಟ್ರಧ್ವಜ ಅಪಮಾನಿಸಿಲ್ಲ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದು ರೈತರು ಹಾಗೂ ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದ ಬಳಿಕ, ಖಾಲಿಸ್ತಾನಿ ಬೆಂಬಲಿಗರ ಗುಂಪು ಭಾರತದ ಭಾವುಟವನ್ನು ಹರಿದಿದ್ದಾರೆ ಎಂಬ ಒಕ್ಕಣೆಯೊಂದಿಗೆ ಒಂದು ಪೋಸ್ಟ್‌‌ ಮಾಡಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್‌ ಆಗಿದೆ. ಈ ವಿಡಿಯೋವನ್ನು ಭಾರತದಲ್ಲಿನ ರೈತರ ಹೋರಾಟ ಹಾಗೂ ಉತ್ತರ ಪ್ರದೇಶದ ಘಟನೆಗೆ ತಳುಕು ಹಾಕಲಾಗಿದೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟಿಸುತ್ತಿರುವ ರೈತರು ಭಾರತದ ಭಾವುಟವನ್ನು ಹಾಗೂ ಹರಿದು ಹಾಕುತ್ತಿರುವುದು ಎಂಬ ಒಕ್ಕಣೆಯೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಈ ವಿಡಿಯೋದ ಹಿಂದಿನ ಸತ್ಯವನ್ನು ಫ್ಯಾಕ್ಟಿ.ಇನ್‌ ಜಾಲತಾಣ ಬಯಲಿಗೆಳೆದಿದೆ. ಪ್ರಧಾನಿ ನರೇಂದ್ರ ಮೋದಿಯವರು ಕಳೆದ ತಿಂಗಳು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದಾಗ ನ್ಯೂಯಾರ್ಕ್‌ನಲ್ಲಿನ ವಿಶ್ವಸಂಸ್ಥೆಯ ಕಚೇರಿಯ ಹೊರಗೆ ಖಾಲಿಸ್ತಾನಿ ಬೆಂಬಲಿಗರು ನಡೆಸಿದ ಪ್ರತಿಭಟನೆಯ ವಿಡಿಯೋ ಇದಾಗಿದೆ. ಕೆಲವು ಆನ್‌ಲೈನ್‌ ನ್ಯೂಸ್ ಪೋರ್ಟಲ್‌ಗಳು ಇದೇ ಥರದ ವಿಡಿಯೋದ ವರದಿ ಮಾಡಿದ್ದಾರೆ. ಈ ವಿಡಿಯೋ ಭಾರತಕ್ಕೆ ಅಥವಾ ಲಖಿಂಪುರ್‌ ಖೇರಿ ಘಟನೆಗೆ ಸಂಬಂಧಿಸಿದ್ದಲ್ಲ. ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಿರುವುದು ಸುಳ್ಳಾಗಿದೆ.

ಇದನ್ನೂ ಓದಿರಿ: ಕಿಸಾನ್ ಮಹಾಪಂಚಾಯತ್‌ನಲ್ಲಿ ಮದ್ಯಕ್ಕಾಗಿ ರೈತರ ಕಿತ್ತಾಟವೆಂದು ತಪ್ಪು ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ

ಸಂಬಂಧಪಟ್ಟ ಕೀವರ್ಡ್‌‌ಗಳೊಂದಿಗೆ ಗೂಗಲ್‌ ಸರ್ಚ್ ಮಾಡಿದಾಗ ಇದೇ ವಿಡಿಯೋವನ್ನು ಎನ್‌‌ಆರ್‌ಐ ಹೆರಾಲ್ಡ್‌ ಟ್ಟೀಟ್ ಮಾಡಿ ಶೇ‌ರ್ ಮಾಡಿರುವುದು ಕಂಡುಬಂದಿದೆ. “ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ವೇಳೆ ನ್ಯೂಯಾರ್ಕ್ ನಲ್ಲಿ ಖಲಿಸ್ತಾನಿ ಸಿಖ್ ಬಂಡುಕೋರರು ಭಾರತೀಯ ರಾಷ್ಟ್ರೀಯ ಧ್ವಜವನ್ನು ಹರಿದು ಹಾಕಿ, ಉಗ್ರ ಘೋಷಣೆಗಳನ್ನು ಕೂಗಿದರು” ಎಂಬ ವಿವರಣೆಯನ್ನು ಶೇರ್‌ ಮಾಡಲಾಗಿರುವ ವಿಡಿಯೋಕ್ಕೆ ನೀಡಲಾಗಿದೆ. ‘ಎನ್ ಆರ್ ಐ ಹೆರಾಲ್ಡ್’ ಆಸ್ಟ್ರೇಲಿಯಾ ಮೂಲದ ವೆಬ್ ನ್ಯೂಸ್ ಪೋರ್ಟಲ್ ಆಗಿದ್ದು, ಇದು ಹೆಚ್ಚಾಗಿ ಭಾರತಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಒಳಗೊಂಡಿರುತ್ತದೆ. ಎನ್ ಆರ್ ಐ ಹೆರಾಲ್ಡ್ ಇದೇ ವಿಡಿಯೋವನ್ನು ತಮ್ಮ ಫೇಸ್ ಬುಕ್ ಪೇಜ್‌ನಲ್ಲೂ ಹಂಚಿಕೊಂಡಿದೆ.

ಮೇಲಿನ ಟ್ವೀಟ್‌ನಿಂದ ಒಂದು ಸುಳಿವು ಪಡೆದು ಹುಡುಕಾಡಿದಾಗ, ಕಳೆದ ತಿಂಗಳು (ಸೆಪ್ಟೆಂಬರ್‌ 2021) ಪ್ರಧಾನಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಹೊರಗೆ ಪ್ರತಿಭಟನೆ ನಡೆದಿರುವ ವರದಿಯ ಕೆಲವು ಆನ್‌ಲೈನ್‌ ನ್ಯೂಸ್‌ಗಳು (ಇಲ್ಲಿ ಮತ್ತು ಇಲ್ಲಿ) ದೊರೆತಿವೆ. ಈ ಲೇಖನಗಳು ಪ್ರತಿಭಟನೆಗೆ ಸಂಬಂಧಿಸಿದ ಫೋಟೋಗಳನ್ನೂ ಪ್ರಕಟಿಸಿದ್ದು, ವೈರಲ್‌ ವಿಡಿಯೋದಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು ಸುಟ್ಟುಹಾಕಿದ ಅದೇ ಇಬ್ಬರು ಪ್ರತಿಭಟನಾಕಾರರನ್ನು ಈ ಚಿತ್ರಗಳಲ್ಲೂ ಕಾಣಬಹುದು.

ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಈ ಮೇಲೆ ನಮೂದಿಸಲಾಗಿರುವ ಪ್ರತಿಭಟನೆಯ ನೇರಪ್ರಸಾರವನ್ನು ಯೂಟ್ಯೂಬ್‌ ಚಾನೆಲ್‌ವೊಂದು ಮಾಡಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿರುವ ಇಬ್ಬರು ವ್ಯಕ್ತಿಗಳೇ ಈ ವಿಡಿಯೋದಲ್ಲೂ ಇರುವುದನ್ನು ಕಾಣಬಹುದು. ಅದಲ್ಲದೆ ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವ ವೇಳೆ ಪ್ರತಿಭಟನೆ ನಡೆದಿರುವ ಕುರಿತು ಮುಖ್ಯವಾಹಿನಿ ಸುದ್ದಿ ಸಂಸ್ಥೆಗಳೂ (ಇಲ್ಲಿ ಮತ್ತು ಇಲ್ಲಿ) ವರದಿ ಮಾಡಿವೆ. ಇವೆಲ್ಲವುಗಳಿಂದ ತಿಳಿಯುವುದೇನೆಂದರೆ ಕಳೆದ ತಿಂಗಳು ಮೋದಿಯವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ವೇಳೆ ಖಾಲಿಸ್ಥಾನಿ ಬೆಂಬಲಿಗರು ಪ್ರತಿಭಟಿಸಿರುವುದು ಈ ವಿಡಿಯೋದಲ್ಲಿ ಕಂಡು ಬರುತ್ತದೆ. ಭಾರತ ಅಥವಾ ಲಖಿಂಪುರ್‌ಖೇರಿ ಘಟನೆಗೂ ಇದು ಸಂಬಂಧಿಸಿದ್ದಲ್ಲ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಪ್ರಧಾನಿ ಮೋದಿಯವರ ವಿಶ್ವಸಂಸ್ಥೆಯ ಭಾಷಣದ ವೇಳೆ ಖಲಿಸ್ತಾನ್ ಬೆಂಬಲಿಗರು ನ್ಯೂಯಾರ್ಕ್‌ನ ವಿಶ್ವಸಂಸ್ಥೆಯ ಕಟ್ಟಡದ ಹೊರಗೆ ಭಾರತೀಯ ರಾಷ್ಟ್ರ ಧ್ವಜವನ್ನು ಹರಿದು ಹಾಕಿದ ವಿಡಿಯೋವನ್ನು ಲಖಿಂಪುರ್ ಖೇರಿ ಘಟನೆಗೆ ಆರೋಪಿಸಲಾಗಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಮಹಿಳೆಯರನ್ನು ಅವಮಾನಿಸಿಲ್ಲ, ಅರ್ಧ ಭಾಷಣ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...