Homeಫ್ಯಾಕ್ಟ್‌ಚೆಕ್FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಭಾರತೀಯ ಸೇನೆಯ ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರಿಗೆ ಇತ್ತೀಚೆಗೆ ಮರಣೋತ್ತರವಾಗಿ ‘ಕೀರ್ತಿ ಚಕ್ರ’ ಪ್ರಧಾನ ಮಾಡಲಾಗಿದೆ. ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ತಮ್ಮ ಅತ್ತೆಯೊಂದಿಗೆ ಜುಲೈ 5, 2024 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಅನ್ಶುಮನ್ ಸಿಂಗ್ ಅವರ ಪತ್ನಿಯ ಕುರಿತು ಅನೇಕ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅನ್ಶುಮನ್ ಅವರ ಪೋಷಕರು, “ಸ್ಮೃತಿ ಸಿಂಗ್ ನಮ್ಮ ಮಗನ ಶೌರ್ಯ ಪದಕ ಮತ್ತು ಇತರ ನೆನಪುಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ. ಸಶಸ್ತ್ರ ಪಡೆಗಳ ಪ್ರಸ್ತುತ ನೀತಿಯ ಅಡಿಯಲ್ಲಿ, ಸೈನಿಕನು ವಿವಾಹಿತನಾಗಿದ್ದರೆ, ಅವರ ಸಂಗಾತಿಯನ್ನು ‘ನೆಕ್ಸ್ಟ್ ಆಫ್ ಕಿನ್’ (NOK) ಎಂದು ಗುರುತಿಸಲಾಗುತ್ತದೆ. ಯೋಧ ಹುತಾತ್ಮರಾದರೆ ಪರಿಹಾರದ ಹಣವನ್ನು ಅವರ ಪತ್ನಿಗೆ ನೀಡಲಾಗುತ್ತದೆ. ಅನ್ಶುಮನ್ ಸಿಂಗ್ ಪೋಷಕರು “ನಮಗೆ ಮಗನೂ ಇಲ್ಲ, ಪರಿಹಾರನೂ ಇಲ್ಲ” ಎಂದು ಬೇಸರ ಹೊರ ಹಾಕಿದ್ದಾರೆ. ಸೇನೆಯ ನಿಯಮಗಳನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.

ಅನ್ಶುಮನ್ ಸಿಂಗ್ ಅವರ ಪತ್ನಿಯ ವಿಡಿಯೋಗೆ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆಯೂ ನಡೆದಿದೆ. ಇವೆಲ್ಲದರ ಬಳಿಕ ಈಗ ಹೊಸತೊಂದು ಚರ್ಚೆ ಶುರುವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಬ್ಬರ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋ ಹುತಾತ್ಮ ಯೋಧ ಅನ್ಶುಮನ್ ಸಿಂಗ್ ಅವರ ಪತ್ನಿಯದ್ದು ಎಂದು ಹೇಳಲಾಗಿದೆ. “ತಾಯಿ ದೇಶಕ್ಕಾಗಿ ತನ್ನ ಮಗನನ್ನು ಕಳೆದುಕೊಂಡರೆ, ಯೋಧನ ಪತ್ನಿ ಪರಿಹಾರದ ಹಣ ಮತ್ತು ಶೌರ್ಯ ಪದಕ ಪಡೆದುಕೊಂಡು, ಇಲ್ಲಿ ತನ್ನ ಸೌಂದರ್ಯ ಪ್ರದರ್ಶಿಸುತ್ತಿದ್ದಾರೆ” ಎಂದು ವಿಡಿಯೋ ಜೊತೆ ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವುದು ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ಎನ್ನುವುದು ಸುಳ್ಳು.

ಶೌರ್ಯ ಪದಕ ಪಡೆದುಕೊಂಡಾಗಿನ ಸ್ಮೃತಿ ಸಿಂಗ್ ಅವರ ವಿಡಿಯೋ ಮತ್ತು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ಗಳು ಕೆಳಗಡೆಯಿದೆ. ಇಬ್ಬರು ಬೇರೆ ಬೇರೆ ಮಹಿಳೆಯರು ಎಂಬ ವ್ಯತ್ಯಾಸವನ್ನು ಗಮನಿಸಬಹುದು.

ವೈರಲ್ ವಿಡಿಯೋದ ಮೂಲ ತಿಳಿದುಕೊಳ್ಳಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ label_ilma ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ನಮಗೆ ವಿಡಿಯೋ ದೊರೆತಿದೆ. ವಿಡಿಯೋ ಕೆಳಗೆ “@reshsebu setting the perfect summer vibes in our Meadow Kota Doriya Saree” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಮೇಲಿನ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಲಾದ ಇನ್‌ಸ್ಟಾಗ್ರಾಂ ಖಾತೆಯನ್ನು ನಾವು ಪರಿಶೀಲಿಸಿದ್ದೇವೆ. ಅದು ರೇಷ್ಮಾ ಸೆಬಾಸ್ಟಿಯನ್ ಎಂಬ ಬಳಕೆದಾರರಿಗೆ ಸೇರಿದೆ. ಇವರೂ ಕೂಡ ವೈರಲ್ ವಿಡಿಯೋವನ್ನು ಏಪ್ರಿಲ್ 24 ರಂದು ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಪೋಸ್ಟ್ ಮಾಡಿದ್ದರು. ಸ್ಮೃತಿ ಸಿಂಗ್ ಹೆಸರಿನಲ್ಲಿ ವಿಡಿಯೋ ವೈರಲ್ ಆದ ಬಳಿಕ, ವಿಡಿಯೋದಲ್ಲಿರುವುದು ಸ್ಮೃತಿ ಸಿಂಗ್ ಅಲ್ಲ ಎಂದು ರೇಷ್ಮಾ ಸೆಬಾಸ್ಟಿಯನ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ತನ್ನ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಂಚುವ ಜನರು ಮತ್ತು ಸಾಮಾಜಿಕ ಜಾಲತಾಣ ಪೇಜ್‌ಗಳ ವಿರುದ್ದ ನಾವು ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದೂ ತಿಳಿಸಿದ್ದಾರೆ.

ಒಟ್ಟಿನಲ್ಲಿ, ಫ್ಯಾಶನ್ ಬ್ರ್ಯಾಂಡ್‌ ಒಂದರ ಜಾಹೀರಾತಿಗಾಗಿ ರೇಷ್ಮಾ ಸೆಬಾಸ್ಟಿಯನ್ ಎಂಬ ನಟಿ, ರೂಪದರ್ಶಿ ವಿಡಿಯೋ ಮಾಡಿದ್ದರು. ಆಕೆ ಹುತಾತ್ಮ ಯೋಧನ ಪತ್ನಿ ಸ್ಮೃತಿ ಸಿಂಗ್ ರೀತಿ ಕಾಣುತ್ತಿರುವುದರಿಂದ ಜನರು, ಯೋಧನ ಪತ್ನಿ ಸರ್ಕಾರದಿಂದ ಸಿಕ್ಕ ಪರಿಹಾರದ ಹಣ ಬಳಸಿಕೊಂಡು ಬಹಳ ಖುಷಿಯಾಗಿದ್ದಾರೆ ಎಂಬ ದಾಟಿಯಲ್ಲಿ ತಪ್ಪಾದ ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ಸಾಧುಗಳ ವೇ‍ಷ ಧರಿಸಿ ಮಕ್ಕಳನ್ನು ಅಪಹರಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...