Homeಫ್ಯಾಕ್ಟ್‌ಚೆಕ್FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಭಾರತೀಯ ಸೇನೆಯ ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರಿಗೆ ಇತ್ತೀಚೆಗೆ ಮರಣೋತ್ತರವಾಗಿ ‘ಕೀರ್ತಿ ಚಕ್ರ’ ಪ್ರಧಾನ ಮಾಡಲಾಗಿದೆ. ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ತಮ್ಮ ಅತ್ತೆಯೊಂದಿಗೆ ಜುಲೈ 5, 2024 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಅನ್ಶುಮನ್ ಸಿಂಗ್ ಅವರ ಪತ್ನಿಯ ಕುರಿತು ಅನೇಕ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅನ್ಶುಮನ್ ಅವರ ಪೋಷಕರು, “ಸ್ಮೃತಿ ಸಿಂಗ್ ನಮ್ಮ ಮಗನ ಶೌರ್ಯ ಪದಕ ಮತ್ತು ಇತರ ನೆನಪುಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ. ಸಶಸ್ತ್ರ ಪಡೆಗಳ ಪ್ರಸ್ತುತ ನೀತಿಯ ಅಡಿಯಲ್ಲಿ, ಸೈನಿಕನು ವಿವಾಹಿತನಾಗಿದ್ದರೆ, ಅವರ ಸಂಗಾತಿಯನ್ನು ‘ನೆಕ್ಸ್ಟ್ ಆಫ್ ಕಿನ್’ (NOK) ಎಂದು ಗುರುತಿಸಲಾಗುತ್ತದೆ. ಯೋಧ ಹುತಾತ್ಮರಾದರೆ ಪರಿಹಾರದ ಹಣವನ್ನು ಅವರ ಪತ್ನಿಗೆ ನೀಡಲಾಗುತ್ತದೆ. ಅನ್ಶುಮನ್ ಸಿಂಗ್ ಪೋಷಕರು “ನಮಗೆ ಮಗನೂ ಇಲ್ಲ, ಪರಿಹಾರನೂ ಇಲ್ಲ” ಎಂದು ಬೇಸರ ಹೊರ ಹಾಕಿದ್ದಾರೆ. ಸೇನೆಯ ನಿಯಮಗಳನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.

ಅನ್ಶುಮನ್ ಸಿಂಗ್ ಅವರ ಪತ್ನಿಯ ವಿಡಿಯೋಗೆ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆಯೂ ನಡೆದಿದೆ. ಇವೆಲ್ಲದರ ಬಳಿಕ ಈಗ ಹೊಸತೊಂದು ಚರ್ಚೆ ಶುರುವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಬ್ಬರ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋ ಹುತಾತ್ಮ ಯೋಧ ಅನ್ಶುಮನ್ ಸಿಂಗ್ ಅವರ ಪತ್ನಿಯದ್ದು ಎಂದು ಹೇಳಲಾಗಿದೆ. “ತಾಯಿ ದೇಶಕ್ಕಾಗಿ ತನ್ನ ಮಗನನ್ನು ಕಳೆದುಕೊಂಡರೆ, ಯೋಧನ ಪತ್ನಿ ಪರಿಹಾರದ ಹಣ ಮತ್ತು ಶೌರ್ಯ ಪದಕ ಪಡೆದುಕೊಂಡು, ಇಲ್ಲಿ ತನ್ನ ಸೌಂದರ್ಯ ಪ್ರದರ್ಶಿಸುತ್ತಿದ್ದಾರೆ” ಎಂದು ವಿಡಿಯೋ ಜೊತೆ ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವುದು ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ಎನ್ನುವುದು ಸುಳ್ಳು.

ಶೌರ್ಯ ಪದಕ ಪಡೆದುಕೊಂಡಾಗಿನ ಸ್ಮೃತಿ ಸಿಂಗ್ ಅವರ ವಿಡಿಯೋ ಮತ್ತು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ಗಳು ಕೆಳಗಡೆಯಿದೆ. ಇಬ್ಬರು ಬೇರೆ ಬೇರೆ ಮಹಿಳೆಯರು ಎಂಬ ವ್ಯತ್ಯಾಸವನ್ನು ಗಮನಿಸಬಹುದು.

ವೈರಲ್ ವಿಡಿಯೋದ ಮೂಲ ತಿಳಿದುಕೊಳ್ಳಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ label_ilma ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ನಮಗೆ ವಿಡಿಯೋ ದೊರೆತಿದೆ. ವಿಡಿಯೋ ಕೆಳಗೆ “@reshsebu setting the perfect summer vibes in our Meadow Kota Doriya Saree” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಮೇಲಿನ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಲಾದ ಇನ್‌ಸ್ಟಾಗ್ರಾಂ ಖಾತೆಯನ್ನು ನಾವು ಪರಿಶೀಲಿಸಿದ್ದೇವೆ. ಅದು ರೇಷ್ಮಾ ಸೆಬಾಸ್ಟಿಯನ್ ಎಂಬ ಬಳಕೆದಾರರಿಗೆ ಸೇರಿದೆ. ಇವರೂ ಕೂಡ ವೈರಲ್ ವಿಡಿಯೋವನ್ನು ಏಪ್ರಿಲ್ 24 ರಂದು ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಪೋಸ್ಟ್ ಮಾಡಿದ್ದರು. ಸ್ಮೃತಿ ಸಿಂಗ್ ಹೆಸರಿನಲ್ಲಿ ವಿಡಿಯೋ ವೈರಲ್ ಆದ ಬಳಿಕ, ವಿಡಿಯೋದಲ್ಲಿರುವುದು ಸ್ಮೃತಿ ಸಿಂಗ್ ಅಲ್ಲ ಎಂದು ರೇಷ್ಮಾ ಸೆಬಾಸ್ಟಿಯನ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ತನ್ನ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಂಚುವ ಜನರು ಮತ್ತು ಸಾಮಾಜಿಕ ಜಾಲತಾಣ ಪೇಜ್‌ಗಳ ವಿರುದ್ದ ನಾವು ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದೂ ತಿಳಿಸಿದ್ದಾರೆ.

ಒಟ್ಟಿನಲ್ಲಿ, ಫ್ಯಾಶನ್ ಬ್ರ್ಯಾಂಡ್‌ ಒಂದರ ಜಾಹೀರಾತಿಗಾಗಿ ರೇಷ್ಮಾ ಸೆಬಾಸ್ಟಿಯನ್ ಎಂಬ ನಟಿ, ರೂಪದರ್ಶಿ ವಿಡಿಯೋ ಮಾಡಿದ್ದರು. ಆಕೆ ಹುತಾತ್ಮ ಯೋಧನ ಪತ್ನಿ ಸ್ಮೃತಿ ಸಿಂಗ್ ರೀತಿ ಕಾಣುತ್ತಿರುವುದರಿಂದ ಜನರು, ಯೋಧನ ಪತ್ನಿ ಸರ್ಕಾರದಿಂದ ಸಿಕ್ಕ ಪರಿಹಾರದ ಹಣ ಬಳಸಿಕೊಂಡು ಬಹಳ ಖುಷಿಯಾಗಿದ್ದಾರೆ ಎಂಬ ದಾಟಿಯಲ್ಲಿ ತಪ್ಪಾದ ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ಸಾಧುಗಳ ವೇ‍ಷ ಧರಿಸಿ ಮಕ್ಕಳನ್ನು ಅಪಹರಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...