Homeಫ್ಯಾಕ್ಟ್‌ಚೆಕ್FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಭಾರತೀಯ ಸೇನೆಯ ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರಿಗೆ ಇತ್ತೀಚೆಗೆ ಮರಣೋತ್ತರವಾಗಿ ‘ಕೀರ್ತಿ ಚಕ್ರ’ ಪ್ರಧಾನ ಮಾಡಲಾಗಿದೆ. ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ತಮ್ಮ ಅತ್ತೆಯೊಂದಿಗೆ ಜುಲೈ 5, 2024 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಅನ್ಶುಮನ್ ಸಿಂಗ್ ಅವರ ಪತ್ನಿಯ ಕುರಿತು ಅನೇಕ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅನ್ಶುಮನ್ ಅವರ ಪೋಷಕರು, “ಸ್ಮೃತಿ ಸಿಂಗ್ ನಮ್ಮ ಮಗನ ಶೌರ್ಯ ಪದಕ ಮತ್ತು ಇತರ ನೆನಪುಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ. ಸಶಸ್ತ್ರ ಪಡೆಗಳ ಪ್ರಸ್ತುತ ನೀತಿಯ ಅಡಿಯಲ್ಲಿ, ಸೈನಿಕನು ವಿವಾಹಿತನಾಗಿದ್ದರೆ, ಅವರ ಸಂಗಾತಿಯನ್ನು ‘ನೆಕ್ಸ್ಟ್ ಆಫ್ ಕಿನ್’ (NOK) ಎಂದು ಗುರುತಿಸಲಾಗುತ್ತದೆ. ಯೋಧ ಹುತಾತ್ಮರಾದರೆ ಪರಿಹಾರದ ಹಣವನ್ನು ಅವರ ಪತ್ನಿಗೆ ನೀಡಲಾಗುತ್ತದೆ. ಅನ್ಶುಮನ್ ಸಿಂಗ್ ಪೋಷಕರು “ನಮಗೆ ಮಗನೂ ಇಲ್ಲ, ಪರಿಹಾರನೂ ಇಲ್ಲ” ಎಂದು ಬೇಸರ ಹೊರ ಹಾಕಿದ್ದಾರೆ. ಸೇನೆಯ ನಿಯಮಗಳನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.

ಅನ್ಶುಮನ್ ಸಿಂಗ್ ಅವರ ಪತ್ನಿಯ ವಿಡಿಯೋಗೆ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆಯೂ ನಡೆದಿದೆ. ಇವೆಲ್ಲದರ ಬಳಿಕ ಈಗ ಹೊಸತೊಂದು ಚರ್ಚೆ ಶುರುವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಬ್ಬರ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋ ಹುತಾತ್ಮ ಯೋಧ ಅನ್ಶುಮನ್ ಸಿಂಗ್ ಅವರ ಪತ್ನಿಯದ್ದು ಎಂದು ಹೇಳಲಾಗಿದೆ. “ತಾಯಿ ದೇಶಕ್ಕಾಗಿ ತನ್ನ ಮಗನನ್ನು ಕಳೆದುಕೊಂಡರೆ, ಯೋಧನ ಪತ್ನಿ ಪರಿಹಾರದ ಹಣ ಮತ್ತು ಶೌರ್ಯ ಪದಕ ಪಡೆದುಕೊಂಡು, ಇಲ್ಲಿ ತನ್ನ ಸೌಂದರ್ಯ ಪ್ರದರ್ಶಿಸುತ್ತಿದ್ದಾರೆ” ಎಂದು ವಿಡಿಯೋ ಜೊತೆ ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವುದು ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ಎನ್ನುವುದು ಸುಳ್ಳು.

ಶೌರ್ಯ ಪದಕ ಪಡೆದುಕೊಂಡಾಗಿನ ಸ್ಮೃತಿ ಸಿಂಗ್ ಅವರ ವಿಡಿಯೋ ಮತ್ತು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ಗಳು ಕೆಳಗಡೆಯಿದೆ. ಇಬ್ಬರು ಬೇರೆ ಬೇರೆ ಮಹಿಳೆಯರು ಎಂಬ ವ್ಯತ್ಯಾಸವನ್ನು ಗಮನಿಸಬಹುದು.

ವೈರಲ್ ವಿಡಿಯೋದ ಮೂಲ ತಿಳಿದುಕೊಳ್ಳಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ label_ilma ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ನಮಗೆ ವಿಡಿಯೋ ದೊರೆತಿದೆ. ವಿಡಿಯೋ ಕೆಳಗೆ “@reshsebu setting the perfect summer vibes in our Meadow Kota Doriya Saree” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಮೇಲಿನ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಲಾದ ಇನ್‌ಸ್ಟಾಗ್ರಾಂ ಖಾತೆಯನ್ನು ನಾವು ಪರಿಶೀಲಿಸಿದ್ದೇವೆ. ಅದು ರೇಷ್ಮಾ ಸೆಬಾಸ್ಟಿಯನ್ ಎಂಬ ಬಳಕೆದಾರರಿಗೆ ಸೇರಿದೆ. ಇವರೂ ಕೂಡ ವೈರಲ್ ವಿಡಿಯೋವನ್ನು ಏಪ್ರಿಲ್ 24 ರಂದು ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಪೋಸ್ಟ್ ಮಾಡಿದ್ದರು. ಸ್ಮೃತಿ ಸಿಂಗ್ ಹೆಸರಿನಲ್ಲಿ ವಿಡಿಯೋ ವೈರಲ್ ಆದ ಬಳಿಕ, ವಿಡಿಯೋದಲ್ಲಿರುವುದು ಸ್ಮೃತಿ ಸಿಂಗ್ ಅಲ್ಲ ಎಂದು ರೇಷ್ಮಾ ಸೆಬಾಸ್ಟಿಯನ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ತನ್ನ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಂಚುವ ಜನರು ಮತ್ತು ಸಾಮಾಜಿಕ ಜಾಲತಾಣ ಪೇಜ್‌ಗಳ ವಿರುದ್ದ ನಾವು ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದೂ ತಿಳಿಸಿದ್ದಾರೆ.

ಒಟ್ಟಿನಲ್ಲಿ, ಫ್ಯಾಶನ್ ಬ್ರ್ಯಾಂಡ್‌ ಒಂದರ ಜಾಹೀರಾತಿಗಾಗಿ ರೇಷ್ಮಾ ಸೆಬಾಸ್ಟಿಯನ್ ಎಂಬ ನಟಿ, ರೂಪದರ್ಶಿ ವಿಡಿಯೋ ಮಾಡಿದ್ದರು. ಆಕೆ ಹುತಾತ್ಮ ಯೋಧನ ಪತ್ನಿ ಸ್ಮೃತಿ ಸಿಂಗ್ ರೀತಿ ಕಾಣುತ್ತಿರುವುದರಿಂದ ಜನರು, ಯೋಧನ ಪತ್ನಿ ಸರ್ಕಾರದಿಂದ ಸಿಕ್ಕ ಪರಿಹಾರದ ಹಣ ಬಳಸಿಕೊಂಡು ಬಹಳ ಖುಷಿಯಾಗಿದ್ದಾರೆ ಎಂಬ ದಾಟಿಯಲ್ಲಿ ತಪ್ಪಾದ ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ಸಾಧುಗಳ ವೇ‍ಷ ಧರಿಸಿ ಮಕ್ಕಳನ್ನು ಅಪಹರಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...