Homeಫ್ಯಾಕ್ಟ್‌ಚೆಕ್FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಹುತಾತ್ಮ ಯೋಧನ ಪತ್ನಿಯದ್ದು ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಭಾರತೀಯ ಸೇನೆಯ ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರಿಗೆ ಇತ್ತೀಚೆಗೆ ಮರಣೋತ್ತರವಾಗಿ ‘ಕೀರ್ತಿ ಚಕ್ರ’ ಪ್ರಧಾನ ಮಾಡಲಾಗಿದೆ. ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ತಮ್ಮ ಅತ್ತೆಯೊಂದಿಗೆ ಜುಲೈ 5, 2024 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಅನ್ಶುಮನ್ ಸಿಂಗ್ ಅವರ ಪತ್ನಿಯ ಕುರಿತು ಅನೇಕ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅನ್ಶುಮನ್ ಅವರ ಪೋಷಕರು, “ಸ್ಮೃತಿ ಸಿಂಗ್ ನಮ್ಮ ಮಗನ ಶೌರ್ಯ ಪದಕ ಮತ್ತು ಇತರ ನೆನಪುಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಿದ್ದಾರೆ” ಎಂದು ಆರೋಪಿಸಿದ್ದಾರೆ. ಸಶಸ್ತ್ರ ಪಡೆಗಳ ಪ್ರಸ್ತುತ ನೀತಿಯ ಅಡಿಯಲ್ಲಿ, ಸೈನಿಕನು ವಿವಾಹಿತನಾಗಿದ್ದರೆ, ಅವರ ಸಂಗಾತಿಯನ್ನು ‘ನೆಕ್ಸ್ಟ್ ಆಫ್ ಕಿನ್’ (NOK) ಎಂದು ಗುರುತಿಸಲಾಗುತ್ತದೆ. ಯೋಧ ಹುತಾತ್ಮರಾದರೆ ಪರಿಹಾರದ ಹಣವನ್ನು ಅವರ ಪತ್ನಿಗೆ ನೀಡಲಾಗುತ್ತದೆ. ಅನ್ಶುಮನ್ ಸಿಂಗ್ ಪೋಷಕರು “ನಮಗೆ ಮಗನೂ ಇಲ್ಲ, ಪರಿಹಾರನೂ ಇಲ್ಲ” ಎಂದು ಬೇಸರ ಹೊರ ಹಾಕಿದ್ದಾರೆ. ಸೇನೆಯ ನಿಯಮಗಳನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿದ್ದಾರೆ.

ಅನ್ಶುಮನ್ ಸಿಂಗ್ ಅವರ ಪತ್ನಿಯ ವಿಡಿಯೋಗೆ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆಯೂ ನಡೆದಿದೆ. ಇವೆಲ್ಲದರ ಬಳಿಕ ಈಗ ಹೊಸತೊಂದು ಚರ್ಚೆ ಶುರುವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಬ್ಬರ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋ ಹುತಾತ್ಮ ಯೋಧ ಅನ್ಶುಮನ್ ಸಿಂಗ್ ಅವರ ಪತ್ನಿಯದ್ದು ಎಂದು ಹೇಳಲಾಗಿದೆ. “ತಾಯಿ ದೇಶಕ್ಕಾಗಿ ತನ್ನ ಮಗನನ್ನು ಕಳೆದುಕೊಂಡರೆ, ಯೋಧನ ಪತ್ನಿ ಪರಿಹಾರದ ಹಣ ಮತ್ತು ಶೌರ್ಯ ಪದಕ ಪಡೆದುಕೊಂಡು, ಇಲ್ಲಿ ತನ್ನ ಸೌಂದರ್ಯ ಪ್ರದರ್ಶಿಸುತ್ತಿದ್ದಾರೆ” ಎಂದು ವಿಡಿಯೋ ಜೊತೆ ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದಲ್ಲಿರುವುದು ಹುತಾತ್ಮ ಯೋಧ ಕ್ಯಾಪ್ಟನ್ ಅನ್ಶುಮನ್ ಸಿಂಗ್ ಅವರ ಪತ್ನಿ ಸ್ಮೃತಿ ಸಿಂಗ್ ಎನ್ನುವುದು ಸುಳ್ಳು.

ಶೌರ್ಯ ಪದಕ ಪಡೆದುಕೊಂಡಾಗಿನ ಸ್ಮೃತಿ ಸಿಂಗ್ ಅವರ ವಿಡಿಯೋ ಮತ್ತು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ಗಳು ಕೆಳಗಡೆಯಿದೆ. ಇಬ್ಬರು ಬೇರೆ ಬೇರೆ ಮಹಿಳೆಯರು ಎಂಬ ವ್ಯತ್ಯಾಸವನ್ನು ಗಮನಿಸಬಹುದು.

ವೈರಲ್ ವಿಡಿಯೋದ ಮೂಲ ತಿಳಿದುಕೊಳ್ಳಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ label_ilma ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ನಮಗೆ ವಿಡಿಯೋ ದೊರೆತಿದೆ. ವಿಡಿಯೋ ಕೆಳಗೆ “@reshsebu setting the perfect summer vibes in our Meadow Kota Doriya Saree” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಮೇಲಿನ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಲಾದ ಇನ್‌ಸ್ಟಾಗ್ರಾಂ ಖಾತೆಯನ್ನು ನಾವು ಪರಿಶೀಲಿಸಿದ್ದೇವೆ. ಅದು ರೇಷ್ಮಾ ಸೆಬಾಸ್ಟಿಯನ್ ಎಂಬ ಬಳಕೆದಾರರಿಗೆ ಸೇರಿದೆ. ಇವರೂ ಕೂಡ ವೈರಲ್ ವಿಡಿಯೋವನ್ನು ಏಪ್ರಿಲ್ 24 ರಂದು ತಮ್ಮ ಇನ್‌ಸ್ಟಾಗ್ರಾಂ ಪುಟದಲ್ಲಿ ಪೋಸ್ಟ್ ಮಾಡಿದ್ದರು. ಸ್ಮೃತಿ ಸಿಂಗ್ ಹೆಸರಿನಲ್ಲಿ ವಿಡಿಯೋ ವೈರಲ್ ಆದ ಬಳಿಕ, ವಿಡಿಯೋದಲ್ಲಿರುವುದು ಸ್ಮೃತಿ ಸಿಂಗ್ ಅಲ್ಲ ಎಂದು ರೇಷ್ಮಾ ಸೆಬಾಸ್ಟಿಯನ್ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ, ತನ್ನ ವಿಡಿಯೋವನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಂಚುವ ಜನರು ಮತ್ತು ಸಾಮಾಜಿಕ ಜಾಲತಾಣ ಪೇಜ್‌ಗಳ ವಿರುದ್ದ ನಾವು ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದೂ ತಿಳಿಸಿದ್ದಾರೆ.

ಒಟ್ಟಿನಲ್ಲಿ, ಫ್ಯಾಶನ್ ಬ್ರ್ಯಾಂಡ್‌ ಒಂದರ ಜಾಹೀರಾತಿಗಾಗಿ ರೇಷ್ಮಾ ಸೆಬಾಸ್ಟಿಯನ್ ಎಂಬ ನಟಿ, ರೂಪದರ್ಶಿ ವಿಡಿಯೋ ಮಾಡಿದ್ದರು. ಆಕೆ ಹುತಾತ್ಮ ಯೋಧನ ಪತ್ನಿ ಸ್ಮೃತಿ ಸಿಂಗ್ ರೀತಿ ಕಾಣುತ್ತಿರುವುದರಿಂದ ಜನರು, ಯೋಧನ ಪತ್ನಿ ಸರ್ಕಾರದಿಂದ ಸಿಕ್ಕ ಪರಿಹಾರದ ಹಣ ಬಳಸಿಕೊಂಡು ಬಹಳ ಖುಷಿಯಾಗಿದ್ದಾರೆ ಎಂಬ ದಾಟಿಯಲ್ಲಿ ತಪ್ಪಾದ ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿರುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ಸಾಧುಗಳ ವೇ‍ಷ ಧರಿಸಿ ಮಕ್ಕಳನ್ನು ಅಪಹರಿಸುವಾಗ ಸಿಕ್ಕಿಬಿದ್ದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...