Homeಫ್ಯಾಕ್ಟ್‌ಚೆಕ್FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಆರೋಗ್ಯ ವಿಮೆಯ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18% ರಿಂದ ಶೇಕಡಾ 5 % ಕ್ಕೆ ಇಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ತೆಗೆದು ಹಾಕುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಅವರಿಗೆ ಕೆಲ ದಿನಗಳ ಹಿಂದೆ ಪತ್ರ ಬರೆದಿದ್ದರು. ಹಾಗಾಗಿ, ಜಿಎಸ್‌ಟಿ ಇಳಿಸಲಾಗಿದೆ ಎಂದು ಪೋಸ್ಟ್ ಹಾಕಿದವರು ಸಚಿವ ನಿತಿನ್ ಗಡ್ಕರಿಯವರಿಗೂ ಧನ್ಯವಾದ ಹೇಳಿದ್ದಾರೆ.

ಹಾಗಿದ್ದರೆ, ನಿಜವಾಗಿಯೂ ಕೇಂದ್ರ ಸರ್ಕಾರ ಆರೋಗ್ಯ ವಿಮೆಯ ಮೇಲಿನ ಜಿಎಸ್‌ಟಿ ಶೇಕಡಾ 18% ರಿಂದ ಶೇಕಡಾ 5 % ಕ್ಕೆ ಇಳಿಸಿದೆಯೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ಕಡಿತಗೊಳಿಸಲಾಗಿದೆಯೇ? ಎಂದು ಪರಿಶೀಲಿಸಲು ನಾವು ಮಾಹಿತಿ ಹುಡುಕಿದಾಗ, ಜಿಎಸ್‌ಟಿ ಕೌನ್ಸಿಲ್‌ ಜಿಎಸ್‌ಟಿ ದರವನ್ನು ಶೇ.18ರಿಂದ ಶೇ. 5ಕ್ಕೆ ಕಡಿತಗೊಳಿಸಿದೆ ಎಂದು ಆದೇಶ ಹೊರಡಿಸಿದಿರುವುದರ ಕುರಿತು ಯಾವುದೇ ವಿಶ್ವಾಸಾರ್ಹ ವರದಿಗಳು ನಮಗೆ ಲಭ್ಯವಾಗಿಲ್ಲ.

ಸೆಪ್ಟೆಂಬರ್ 12ರಂದು ಪ್ರಜಾವಾಣಿ ವೆಬ್‌ಸೈಟ್ ಪ್ರಕಟಿಸಿದ ಲೇಖನದಲ್ಲಿ “ಆರೋಗ್ಯ ಮತ್ತು ಜೀವ ವಿಮಾ ಕಂತುಗಳ ಮೇಲೆ ಜಿಎಸ್‌ಟಿ ವಿಧಿಸುವುದರ ವಿರುದ್ಧ ಕೇಳಿ ಬಂದಿರುವ ಮಾತುಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿದಂತೆ ಕಾಣುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸುವುದಕ್ಕಾಗಿ ಸಚಿವರ ತಂಡವನ್ನು ರಚಿಸಿದೆ. ತಂಡವು ವಸ್ತುಸ್ಥಿತಿ ಅಧ್ಯಯನ ಮಾಡಿ ಜಿಎಸ್‌ಟಿ ಕೌನ್ಸಿಲ್‌ಗೆ ವರದಿ ನೀಡಲಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಮಂಡಳಿಯು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಜಿಎಸ್‌ಟಿಯನ್ನು ಪೂರ್ಣವಾಗಿ ರದ್ದುಪಡಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರ ಪರಿಗಣಿಸಿದಂತೆ ಕಾಣುತ್ತಿಲ್ಲ. ತೆರಿಗೆ ಕಡಿತಕ್ಕೆ ಮಾತ್ರ ಒಲವು ತೋರಿದಂತಿದೆ” ಎಂದು ಹೇಳಿತ್ತು.

“ಕೆಲವು ವರ್ಷಗಳಿಂದೀಚೆಗೆ ಆರೋಗ್ಯ ಸೇವೆ ದುಬಾರಿಯಾಗುತ್ತಿದೆ. ರೋಗಿಗಳ ಆಸ್ಪತ್ರೆ ವೆಚ್ಚ ಜಾಸ್ತಿಯಾಗುತ್ತಿದೆ. ಕಳೆದ ವರ್ಷ ವೈದ್ಯಕೀಯ ಹಣದುಬ್ಬರ ಶೇ 14ರಷ್ಟಿತ್ತು. ಇದು ವಿಮಾ ಕಂಪನಿಗಳಿಗೆ ಹೊರೆಯಾಗುತ್ತಿದೆ. ಇದರೊಂದಿಗೆ ಜಿಎಸ್‌ಟಿ ಜಾಸ್ತಿ ಇರುವುದರಿಂದ ವಿಮಾ ಕಂತುಗಳ ಮೊತ್ತ ಹೆಚ್ಚಳವಾಗಿದೆ. ಹೀಗಾಗಿ ಜಿಎಸ್‌ಟಿಯಲ್ಲಿ ಕಡಿತ ಮಾಡಬೇಕು ಎಂಬುವುದು ವಿಮಾ ಕ್ಷೇತ್ರದಲ್ಲಿ ತೊಡಗಿಕೊಂಡವರ ಹೇಳಿಕೆ. ಭಾರತೀಯ ಸಾಮಾನ್ಯ ವಿಮಾ ಏಜೆಂಟರ ಮಹಾ ಒಕ್ಕೂಟವು ಜೂನ್‌ ತಿಂಗಳಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದು ಸಾಮಾನ್ಯ ವಿಮೆಗಳ ಮೇಲಿನ ಜಿಎಸ್‌ಟಿಯನ್ನು ಶೇ 18ರಿಂದ ಶೇ 5ಕ್ಕೆ ಇಳಿಸಬೇಕು ಎಂದು ಒತ್ತಾಯಿಸಿತ್ತು” ಎಂದು ಪ್ರಜಾವಾಣಿ ಲೇಖನ ತಿಳಿಸಿದೆ.

ವಿಮೆ ಮೇಲೆ ಜಿಎಸ್‌ಟಿ ವಿಧಿಸಬಾರದು ಎಂಬ ಒತ್ತಾಯ ಹಲವು ಸಮಯದಿಂದ ಕೇಳಿಬರುತ್ತಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಜುಲೈ 31ರಂದು ಪತ್ರ ಬರೆದ ನಂತರ ಈ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ.

ಒಟ್ಟಿನಲ್ಲಿ, ಆರೋಗ್ಯ ವಿಮೆ ಮೇಲೆ ಜಿಎಸ್‌ಟಿ ವಿಧಿಸಬಾರದು ಎಂಬ ಒತ್ತಾಯ ಹಲವು ಸಮಯದಿಂದ ಕೇಳಿಬರುತ್ತಿದೆಯಾದರೂ ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ಶೇಕಡ 18% ರಿಂದ ಶೇಖಡ 5% ಇಳಿಸಲಾಗಿದೆ ಎಂಬುವುದು ಸುಳ್ಳು. ಈ ಬಗ್ಗೆ ನವೆಂಬರ್ 2024ರಲ್ಲಿ ನಡೆಯುವ ಜಿಎಸ್‌ಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...