Homeಫ್ಯಾಕ್ಟ್‌ಚೆಕ್FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಆರೋಗ್ಯ ವಿಮೆಯ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18% ರಿಂದ ಶೇಕಡಾ 5 % ಕ್ಕೆ ಇಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ತೆಗೆದು ಹಾಕುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಅವರಿಗೆ ಕೆಲ ದಿನಗಳ ಹಿಂದೆ ಪತ್ರ ಬರೆದಿದ್ದರು. ಹಾಗಾಗಿ, ಜಿಎಸ್‌ಟಿ ಇಳಿಸಲಾಗಿದೆ ಎಂದು ಪೋಸ್ಟ್ ಹಾಕಿದವರು ಸಚಿವ ನಿತಿನ್ ಗಡ್ಕರಿಯವರಿಗೂ ಧನ್ಯವಾದ ಹೇಳಿದ್ದಾರೆ.

ಹಾಗಿದ್ದರೆ, ನಿಜವಾಗಿಯೂ ಕೇಂದ್ರ ಸರ್ಕಾರ ಆರೋಗ್ಯ ವಿಮೆಯ ಮೇಲಿನ ಜಿಎಸ್‌ಟಿ ಶೇಕಡಾ 18% ರಿಂದ ಶೇಕಡಾ 5 % ಕ್ಕೆ ಇಳಿಸಿದೆಯೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ಕಡಿತಗೊಳಿಸಲಾಗಿದೆಯೇ? ಎಂದು ಪರಿಶೀಲಿಸಲು ನಾವು ಮಾಹಿತಿ ಹುಡುಕಿದಾಗ, ಜಿಎಸ್‌ಟಿ ಕೌನ್ಸಿಲ್‌ ಜಿಎಸ್‌ಟಿ ದರವನ್ನು ಶೇ.18ರಿಂದ ಶೇ. 5ಕ್ಕೆ ಕಡಿತಗೊಳಿಸಿದೆ ಎಂದು ಆದೇಶ ಹೊರಡಿಸಿದಿರುವುದರ ಕುರಿತು ಯಾವುದೇ ವಿಶ್ವಾಸಾರ್ಹ ವರದಿಗಳು ನಮಗೆ ಲಭ್ಯವಾಗಿಲ್ಲ.

ಸೆಪ್ಟೆಂಬರ್ 12ರಂದು ಪ್ರಜಾವಾಣಿ ವೆಬ್‌ಸೈಟ್ ಪ್ರಕಟಿಸಿದ ಲೇಖನದಲ್ಲಿ “ಆರೋಗ್ಯ ಮತ್ತು ಜೀವ ವಿಮಾ ಕಂತುಗಳ ಮೇಲೆ ಜಿಎಸ್‌ಟಿ ವಿಧಿಸುವುದರ ವಿರುದ್ಧ ಕೇಳಿ ಬಂದಿರುವ ಮಾತುಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿದಂತೆ ಕಾಣುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸುವುದಕ್ಕಾಗಿ ಸಚಿವರ ತಂಡವನ್ನು ರಚಿಸಿದೆ. ತಂಡವು ವಸ್ತುಸ್ಥಿತಿ ಅಧ್ಯಯನ ಮಾಡಿ ಜಿಎಸ್‌ಟಿ ಕೌನ್ಸಿಲ್‌ಗೆ ವರದಿ ನೀಡಲಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಮಂಡಳಿಯು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಜಿಎಸ್‌ಟಿಯನ್ನು ಪೂರ್ಣವಾಗಿ ರದ್ದುಪಡಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರ ಪರಿಗಣಿಸಿದಂತೆ ಕಾಣುತ್ತಿಲ್ಲ. ತೆರಿಗೆ ಕಡಿತಕ್ಕೆ ಮಾತ್ರ ಒಲವು ತೋರಿದಂತಿದೆ” ಎಂದು ಹೇಳಿತ್ತು.

“ಕೆಲವು ವರ್ಷಗಳಿಂದೀಚೆಗೆ ಆರೋಗ್ಯ ಸೇವೆ ದುಬಾರಿಯಾಗುತ್ತಿದೆ. ರೋಗಿಗಳ ಆಸ್ಪತ್ರೆ ವೆಚ್ಚ ಜಾಸ್ತಿಯಾಗುತ್ತಿದೆ. ಕಳೆದ ವರ್ಷ ವೈದ್ಯಕೀಯ ಹಣದುಬ್ಬರ ಶೇ 14ರಷ್ಟಿತ್ತು. ಇದು ವಿಮಾ ಕಂಪನಿಗಳಿಗೆ ಹೊರೆಯಾಗುತ್ತಿದೆ. ಇದರೊಂದಿಗೆ ಜಿಎಸ್‌ಟಿ ಜಾಸ್ತಿ ಇರುವುದರಿಂದ ವಿಮಾ ಕಂತುಗಳ ಮೊತ್ತ ಹೆಚ್ಚಳವಾಗಿದೆ. ಹೀಗಾಗಿ ಜಿಎಸ್‌ಟಿಯಲ್ಲಿ ಕಡಿತ ಮಾಡಬೇಕು ಎಂಬುವುದು ವಿಮಾ ಕ್ಷೇತ್ರದಲ್ಲಿ ತೊಡಗಿಕೊಂಡವರ ಹೇಳಿಕೆ. ಭಾರತೀಯ ಸಾಮಾನ್ಯ ವಿಮಾ ಏಜೆಂಟರ ಮಹಾ ಒಕ್ಕೂಟವು ಜೂನ್‌ ತಿಂಗಳಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದು ಸಾಮಾನ್ಯ ವಿಮೆಗಳ ಮೇಲಿನ ಜಿಎಸ್‌ಟಿಯನ್ನು ಶೇ 18ರಿಂದ ಶೇ 5ಕ್ಕೆ ಇಳಿಸಬೇಕು ಎಂದು ಒತ್ತಾಯಿಸಿತ್ತು” ಎಂದು ಪ್ರಜಾವಾಣಿ ಲೇಖನ ತಿಳಿಸಿದೆ.

ವಿಮೆ ಮೇಲೆ ಜಿಎಸ್‌ಟಿ ವಿಧಿಸಬಾರದು ಎಂಬ ಒತ್ತಾಯ ಹಲವು ಸಮಯದಿಂದ ಕೇಳಿಬರುತ್ತಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಜುಲೈ 31ರಂದು ಪತ್ರ ಬರೆದ ನಂತರ ಈ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ.

ಒಟ್ಟಿನಲ್ಲಿ, ಆರೋಗ್ಯ ವಿಮೆ ಮೇಲೆ ಜಿಎಸ್‌ಟಿ ವಿಧಿಸಬಾರದು ಎಂಬ ಒತ್ತಾಯ ಹಲವು ಸಮಯದಿಂದ ಕೇಳಿಬರುತ್ತಿದೆಯಾದರೂ ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ಶೇಕಡ 18% ರಿಂದ ಶೇಖಡ 5% ಇಳಿಸಲಾಗಿದೆ ಎಂಬುವುದು ಸುಳ್ಳು. ಈ ಬಗ್ಗೆ ನವೆಂಬರ್ 2024ರಲ್ಲಿ ನಡೆಯುವ ಜಿಎಸ್‌ಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...