Homeಫ್ಯಾಕ್ಟ್‌ಚೆಕ್FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಆರೋಗ್ಯ ವಿಮೆಯ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18% ರಿಂದ ಶೇಕಡಾ 5 % ಕ್ಕೆ ಇಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ತೆಗೆದು ಹಾಕುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಅವರಿಗೆ ಕೆಲ ದಿನಗಳ ಹಿಂದೆ ಪತ್ರ ಬರೆದಿದ್ದರು. ಹಾಗಾಗಿ, ಜಿಎಸ್‌ಟಿ ಇಳಿಸಲಾಗಿದೆ ಎಂದು ಪೋಸ್ಟ್ ಹಾಕಿದವರು ಸಚಿವ ನಿತಿನ್ ಗಡ್ಕರಿಯವರಿಗೂ ಧನ್ಯವಾದ ಹೇಳಿದ್ದಾರೆ.

ಹಾಗಿದ್ದರೆ, ನಿಜವಾಗಿಯೂ ಕೇಂದ್ರ ಸರ್ಕಾರ ಆರೋಗ್ಯ ವಿಮೆಯ ಮೇಲಿನ ಜಿಎಸ್‌ಟಿ ಶೇಕಡಾ 18% ರಿಂದ ಶೇಕಡಾ 5 % ಕ್ಕೆ ಇಳಿಸಿದೆಯೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ಕಡಿತಗೊಳಿಸಲಾಗಿದೆಯೇ? ಎಂದು ಪರಿಶೀಲಿಸಲು ನಾವು ಮಾಹಿತಿ ಹುಡುಕಿದಾಗ, ಜಿಎಸ್‌ಟಿ ಕೌನ್ಸಿಲ್‌ ಜಿಎಸ್‌ಟಿ ದರವನ್ನು ಶೇ.18ರಿಂದ ಶೇ. 5ಕ್ಕೆ ಕಡಿತಗೊಳಿಸಿದೆ ಎಂದು ಆದೇಶ ಹೊರಡಿಸಿದಿರುವುದರ ಕುರಿತು ಯಾವುದೇ ವಿಶ್ವಾಸಾರ್ಹ ವರದಿಗಳು ನಮಗೆ ಲಭ್ಯವಾಗಿಲ್ಲ.

ಸೆಪ್ಟೆಂಬರ್ 12ರಂದು ಪ್ರಜಾವಾಣಿ ವೆಬ್‌ಸೈಟ್ ಪ್ರಕಟಿಸಿದ ಲೇಖನದಲ್ಲಿ “ಆರೋಗ್ಯ ಮತ್ತು ಜೀವ ವಿಮಾ ಕಂತುಗಳ ಮೇಲೆ ಜಿಎಸ್‌ಟಿ ವಿಧಿಸುವುದರ ವಿರುದ್ಧ ಕೇಳಿ ಬಂದಿರುವ ಮಾತುಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿದಂತೆ ಕಾಣುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸುವುದಕ್ಕಾಗಿ ಸಚಿವರ ತಂಡವನ್ನು ರಚಿಸಿದೆ. ತಂಡವು ವಸ್ತುಸ್ಥಿತಿ ಅಧ್ಯಯನ ಮಾಡಿ ಜಿಎಸ್‌ಟಿ ಕೌನ್ಸಿಲ್‌ಗೆ ವರದಿ ನೀಡಲಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಮಂಡಳಿಯು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಜಿಎಸ್‌ಟಿಯನ್ನು ಪೂರ್ಣವಾಗಿ ರದ್ದುಪಡಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರ ಪರಿಗಣಿಸಿದಂತೆ ಕಾಣುತ್ತಿಲ್ಲ. ತೆರಿಗೆ ಕಡಿತಕ್ಕೆ ಮಾತ್ರ ಒಲವು ತೋರಿದಂತಿದೆ” ಎಂದು ಹೇಳಿತ್ತು.

“ಕೆಲವು ವರ್ಷಗಳಿಂದೀಚೆಗೆ ಆರೋಗ್ಯ ಸೇವೆ ದುಬಾರಿಯಾಗುತ್ತಿದೆ. ರೋಗಿಗಳ ಆಸ್ಪತ್ರೆ ವೆಚ್ಚ ಜಾಸ್ತಿಯಾಗುತ್ತಿದೆ. ಕಳೆದ ವರ್ಷ ವೈದ್ಯಕೀಯ ಹಣದುಬ್ಬರ ಶೇ 14ರಷ್ಟಿತ್ತು. ಇದು ವಿಮಾ ಕಂಪನಿಗಳಿಗೆ ಹೊರೆಯಾಗುತ್ತಿದೆ. ಇದರೊಂದಿಗೆ ಜಿಎಸ್‌ಟಿ ಜಾಸ್ತಿ ಇರುವುದರಿಂದ ವಿಮಾ ಕಂತುಗಳ ಮೊತ್ತ ಹೆಚ್ಚಳವಾಗಿದೆ. ಹೀಗಾಗಿ ಜಿಎಸ್‌ಟಿಯಲ್ಲಿ ಕಡಿತ ಮಾಡಬೇಕು ಎಂಬುವುದು ವಿಮಾ ಕ್ಷೇತ್ರದಲ್ಲಿ ತೊಡಗಿಕೊಂಡವರ ಹೇಳಿಕೆ. ಭಾರತೀಯ ಸಾಮಾನ್ಯ ವಿಮಾ ಏಜೆಂಟರ ಮಹಾ ಒಕ್ಕೂಟವು ಜೂನ್‌ ತಿಂಗಳಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದು ಸಾಮಾನ್ಯ ವಿಮೆಗಳ ಮೇಲಿನ ಜಿಎಸ್‌ಟಿಯನ್ನು ಶೇ 18ರಿಂದ ಶೇ 5ಕ್ಕೆ ಇಳಿಸಬೇಕು ಎಂದು ಒತ್ತಾಯಿಸಿತ್ತು” ಎಂದು ಪ್ರಜಾವಾಣಿ ಲೇಖನ ತಿಳಿಸಿದೆ.

ವಿಮೆ ಮೇಲೆ ಜಿಎಸ್‌ಟಿ ವಿಧಿಸಬಾರದು ಎಂಬ ಒತ್ತಾಯ ಹಲವು ಸಮಯದಿಂದ ಕೇಳಿಬರುತ್ತಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಜುಲೈ 31ರಂದು ಪತ್ರ ಬರೆದ ನಂತರ ಈ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ.

ಒಟ್ಟಿನಲ್ಲಿ, ಆರೋಗ್ಯ ವಿಮೆ ಮೇಲೆ ಜಿಎಸ್‌ಟಿ ವಿಧಿಸಬಾರದು ಎಂಬ ಒತ್ತಾಯ ಹಲವು ಸಮಯದಿಂದ ಕೇಳಿಬರುತ್ತಿದೆಯಾದರೂ ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ಶೇಕಡ 18% ರಿಂದ ಶೇಖಡ 5% ಇಳಿಸಲಾಗಿದೆ ಎಂಬುವುದು ಸುಳ್ಳು. ಈ ಬಗ್ಗೆ ನವೆಂಬರ್ 2024ರಲ್ಲಿ ನಡೆಯುವ ಜಿಎಸ್‌ಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...