Homeಫ್ಯಾಕ್ಟ್‌ಚೆಕ್FACT CHECK : CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ವೈರಲ್ ಫೋಟೋದ ಸತ್ಯಾಸತ್ಯತೆ ಏನು?

FACT CHECK : CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ವೈರಲ್ ಫೋಟೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸೆಪ್ಟೆಂಬರ್ 12 ರಂದು ತನ್ನ 72ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನದ ನಂತರ, ಪಾರ್ಥಿವ ಶರೀರವನ್ನು ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಗೆ ‘ಶವಪೆಟ್ಟಿಗೆ’ಯಲ್ಲಿ ಕೊಂಡೊಯ್ಯಲಾಗಿತ್ತು. ವಿವಿಯ ವಿದ್ಯಾರ್ಥಿಗಳು ಮಾರ್ಕ್ಸ್‌ವಾದಿ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದ್ದರು.

ಈ ಕುರಿತ ಫೋಟೋವನ್ನು ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳಲಾಗಿತ್ತು. ಫೋಟೋ ಗಮನಿಸಿದ ಅನೇಕ ಬಲಪಂಥೀಯರು ಸೀತಾರಾಂ ಯೆಚೂರಿ ಕ್ರೈಸ್ತ ಧರ್ಮದವರು, ರಾಜಕೀಯ ಜೀವನದಲ್ಲಿ ಹಿಂದೂ ಹೆಸರಿಟ್ಟುಕೊಂಡು ಹಿಂದೂಗಳಿಗೆ ವಂಚನೆ ಮಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ಸದಾ ಸುಳ್ಳು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರಿಶಿ ಬಾಗ್ರೀ ಸೆಪ್ಟೆಂಬರ್ 14ರಂದು ಜೆಎನ್‌ಎಸ್‌ಯು ಪೋಸ್ಟ್‌ಗೆ ಪ್ರತಿಕ್ರಿಯಿಸಿ “ಹಾಗಾದರೆ ಸೀತಾರಾಮ್ ಯೆಚೂರಿ ಅವರು ಕ್ರಿಶ್ಚಿಯನ್. ಅವರು ಹಿಂದೂ ಧರ್ಮವನ್ನು ಏಕೆ ದ್ವೇಷಿಸುತ್ತಿದ್ದರು ಎಂಬುದರಲ್ಲಿ ಆಶ್ಚರ್ಯವಿಲ್ಲ. ಅಂದಹಾಗೆ, ಅವರು ತಮ್ಮ ಸಕ್ರಿಯ ರಾಜಕೀಯ ಜೀವನದಲ್ಲಿ ತಮ್ಮ ಧಾರ್ಮಿಕ ಗುರುತನ್ನು ಏಕೆ ಮರೆ ಮಾಚುತ್ತಿದ್ದರು?” ಎಂದು ಬರೆದುಕೊಂಡಿದ್ದರು.

ಸೀತಾರಾಂ ಯೆಚೂರಿ ಅವರಿಗೆ ಜೆಎನ್‌ಯುನಲ್ಲಿ ಗೌರವ ಸಲ್ಲಿಸಿದ್ದ ಫೋಟೋವನ್ನು ಸೆ.14ರಂದು ಎಕ್ಸ್ ಹಂಚಿಕೊಂಡಿದ್ದ ಮತ್ತೊಂದು ಬಲಪಂಥೀಯ ಎಕ್ಸ್ ಖಾತೆ ಓಕ್‌ಫ್ಲಿಕ್ಸ್ (@wokeflix) “ಹೆಸರು: ಸೀತಾರಾಮ್ ಯೆಚೂರಿ, ಧರ್ಮ: ಕ್ರಿಶ್ಚಿಯನ್ : ಇಷ್ಟು ದಿನ ಅಕ್ಕಿ ಮೂಟೆಯಾಗಿ ತನ್ನ ಹಿಂದೂ ಹೆಸರಿನಿಂದ ಎಷ್ಟು ಜನರನ್ನು ಮೂರ್ಖರನ್ನಾಗಿಸಿದ್ದಾನೆ ಎಂದು ಊಹಿಸಿಕೊಳ್ಳಿ” ಎಂದು ಬರೆದುಕೊಂಡಿತ್ತು.

ಇವಿಷ್ಟೇ ಅಲ್ಲದೆ, ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ಸೀತಾರಾಂ ಯೆಚೂರಿ ಕ್ರೈಸ್ತ ಧರ್ಮದವರು ಎಂದು ಪ್ರತಿಪಾದಿಸಿ ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸೀತಾರಾಂ ಯೆಚೂರಿ ಯಾವ ಧರ್ಮದವರು? ಅವರ ಕೌಟುಂಬಿಕ ಹಿನ್ನೆಲೆ ಏನು? ಎಂಬುವುದರ ಬಗ್ಗೆ 2017ರಲ್ಲಿ ರಾಜ್ಯಸಭೆಯಲ್ಲಿ ಮಾಡಿದ ವಿದಾಯ ಭಾಷಣದಲ್ಲಿ ಸ್ವತಃ ಯೆಚೂರಿ ಅವರೇ ವಿವರಿಸಿದ್ದಾರೆ. ಅವರ ಭಾಷಣವನ್ನು ಕೆಳಗೆ ಅಕ್ಷರ ರೂಪದಲ್ಲಿ ಕೊಡಲಾಗಿದೆ.

“ಈಗ ಚೆನ್ನೈ ಎಂದು ಕರೆಯಲ್ಪಡುವ ಮದ್ರಾಸ್‌ನ ಜನರಲ್ ಆಸ್ಪತ್ರೆಯಲ್ಲಿ ತೆಲುಗು ಮಾತನಾಡುವ ಬ್ರಾಹ್ಮಣ ಕುಟುಂಬದಲ್ಲಿ ನಾನು ಜನಿಸಿದೆ. ನನ್ನ ಅಜ್ಜ ನ್ಯಾಯಾಧೀಶರು…ಗುಂಟೂರಿಗೆ ಹೋಗಬೇಕಾಗಿತ್ತು. 1954ರಲ್ಲಿ ನಾವು ಅಲ್ಲಿಗೆ ಸ್ಥಳಾಂತರಗೊಂಡೆವು. ನಾನು 1952ರಲ್ಲಿ ಜನಿಸಿದೆ. 1956ರಲ್ಲಿ ನಾವು ಹೈದರಾಬಾದ್‌ಗೆ ಸ್ಥಳಾಂತರಗೊಂಡೆವು. ಸ್ವಾತಂತ್ರ್ಯ ದೊರೆತ ಆರಂಭದಲ್ಲಿ ನಾನು ಹೈದರಾಬಾದ್‌ನ ನಿಝಾಮರ ಆಡಳಿತಡಿ ಇಸ್ಲಾಮಿಕ್ ಸಂಸ್ಕೃತಿಯಲ್ಲಿ ನನ್ನ ಶಾಲಾ ಶಿಕ್ಷಣ ಪಡೆದೆ. ನಂತರ ನಾನು ದೆಹಲಿಗೆ ಬಂದೆ, ಇಲ್ಲಿ ಓದಿದೆ. ನಾನು ಒಬ್ಬರು ವ್ಯಕ್ತಿಯನ್ನು ಮದುವೆಯಾಗಿದ್ದೇನೆ. ಆಕೆಯ ತಂದೆ ಇಸ್ಲಾಮಿಕ್ ಸೂಫಿ ಪಂಥದವರು ಮತ್ತು ಅವರ ಉಪನಾಮ ಚಿಸ್ತಿ… ಆಕೆಯ ತಾಯಿ ರಜಪೂತ ಸಮುದಾಯದವರು. 8ನೇ ಶತಮಾನದಲ್ಲಿ ವಲಸೆ ಬಂದ ಮೈಸೂರಿನ ರಜಪೂತರು. ನಾವೀಗ 21ನೇ ಶತಮಾನದಲ್ಲಿದ್ದೇವೆ. ನಾನು ಈ ಮಹಿಳೆಯನ್ನು ಮದುವೆಯಾಗಿರುವ ದಕ್ಷಿಣ ಭಾರತದ ಬ್ರಾಹ್ಮಣ ಕುಟುಂಬದಿಂದ ಬಂದವನು. ಹಾಗಾಗಿ, ನನ್ನ ಮಗನನ್ನು ಏನೆಂದು ಕರೆಯುತ್ತಾರೆ ಸರ್?. ನನ್ನ ಮಗನನ್ನು ಭಾರತೀಯ ಎನ್ನುವುದಕ್ಕಿಂತ ಹೆಚ್ಚಾಗಿ ಹೇಳಲು ಸಾಧ್ಯವೇ ಇಲ್ಲ. ಇದು ನಮ್ಮ ದೇಶ. ಇದು ನನ್ನ ಉದಾಹರಣೆ, ಇಂತಹ ಎಷ್ಟು ಜನರಿದ್ದಾರೆ ನೋಡಿ.”

2017ರಲ್ಲಿ ಆಗಿನ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ನೀಡಿದ ಹೇಳಿಕೆಯನ್ನು ಟೀಕಿಸಿದ್ದ ಯೆಚೂರಿ ಅವರು ‘ನಾನು ನಾಸ್ತಿಕ’ ಎಂದು ಎಕ್ಸ್‌ನಲ್ಲಿ ತಿಳಿಸಿದ್ದರು.

ಸೀತಾರಾಮ್ ಯೆಚೂರಿ ಕ್ರೈಸ್ತ ಧರ್ಮದವರು ಎಂಬ ವಾದದ ಕುರಿತು ಖ್ಯಾತ ಫ್ಯಾಕ್ಟ್ ಚೆಕ್ ಸಂಸ್ಥೆ ಆಲ್ಟ್ ನ್ಯೂಸ್ ಸಿಪಿಐ(ಎಂ) ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಅವರಿಂದ ಪ್ರತಿಕ್ರಿಯೆ ಕೇಳಿದೆ. “ಈ ವೇಳೆ ಮಾತನಾಡಿದ ಸಲೀಂ ಅವರು “ನವ ಭಾರತ’ದ ವಿಷಕಾರಿ ಸಾಮಾಜಿಕ-ರಾಜಕೀಯ ವಾತಾವರಣದಲ್ಲಿ, ಎಲ್ಲವನ್ನೂ ಧರ್ಮದೊಂದಿಗೆ ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಸಾಂಪ್ರದಾಯಿಕವಾಗಿ, ಧಾರ್ಮಿಕ ನಂಬಿಕೆಗಳನ್ನು ಮಾನವ ಮತ್ತು ವೈಯಕ್ತಿಕ  ಹಾಗೂ ಪೂಜಕ ಮತ್ತು ಪೂಜಿಸಲ್ಪಡುವುದರ ನಡುವಿನ ಸಂಬಂಧ ಎಂದು ಪರಿಗಣಿಸಲಾಗುತ್ತದೆ. ಕಾಮ್ರೇಡ್ ಸೀತಾರಾಂ ಯೆಚೂರಿ ಅವರೇ ತಮ್ಮ ರಾಜ್ಯಸಭಾ ಭಾಷಣದಲ್ಲಿ ತಮ್ಮ ಕೌಟುಂಬಿಕ ಹಿನ್ನೆಲೆ ವಿವರಿಸಿದ್ದಾರೆ. ಇನ್ನು ಕ್ರೈಸ್ತರ ರೀತಿಯ ಶವಪೆಟ್ಟಿಗೆ ಬಳಸಿದ್ದರ ಬಗ್ಗೆ ಪ್ರಶ್ನೆ ಎತ್ತಲಾಗಿದೆ. ಸಂಕುಚಿತ ನಂಬಿಕೆಗಳ ಆಧಾರದ ಮೇಲೆ ಎಲ್ಲವನ್ನೂ ವಿಭಜಿಸಲು ಬಯಸುವವರನ್ನು ಹೊರತು, ಶವ ಪೆಟ್ಟಿಗೆಗೆ ಯಾವುದೇ ನಿರ್ದಿಷ್ಟ ಧರ್ಮವಿಲ್ಲ” ಎಂದು ಹೇಳಿದ್ದಾರೆ.

ಸೀತಾರಾಂ ಯೆಚೂರಿಗೆ ಶವಪೆಟ್ಟಿಗೆ ಬಳಸಿದ್ದು ಏಕೆ?

ದೆಹಲಿ ಏಮ್ಸ್‌ನ ಮಾಧ್ಯಮ ಉಸ್ತುವಾರಿ ಮತ್ತು ಪ್ರಾಧ್ಯಾಪಕಿ ಡಾ. ರಿಮಾ ದಾದಾ ಅವರ ಪ್ರಕಾರ, ಸೀತಾರಾಂ ಯೆಚೂರಿ ಅವರ ಕುಟುಂಬವು ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಿದೆ. ಹಾಗಾಗಿ, ದೇಹವನ್ನು ರಕ್ಷಿಸಿಡಬೇಕಾದ ಅಗತ್ಯವಿದೆ. ಬೋಧನಾ ಉದ್ದೇಶಗಳಿಗಾಗಿ ಸಂರಕ್ಷಿಸಿಡಲು ಕೆಲ ಚುಚ್ಚು ಮದ್ದುಗಳನ್ನು ದೇಹಕ್ಕೆ ಚುಚ್ಚಲಾಗುತ್ತದೆ. ಹಾಗಾಗಿ, ದೇಹವನ್ನು ಶವಪೆಟ್ಟಿಗೆಯಲ್ಲಿ ಇಡಲಾಗಿತ್ತು ಎಂದು ತಿಳಿಸಿದ್ದಾರೆ. ಯೆಚೂರಿ ಅವರ ಕುಟುಂಬದ ನಿರ್ಧಾರವನ್ನು ರಿಮಾ ಅವರು ಶ್ಲಾಘಿಸಿದ್ದಾರೆ.

‘ದಿ ಹಿಂದೂ ಪತ್ರಿಕೆ’ಯ ವರದಿಯೊಂದರ ಪ್ರಕಾರ, ಸೀತಾರಾಂ ಯೆಚೂರಿ ಅವರ ದೇಹವನ್ನು ಎಮ್ಸ್‌ಗೆ ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಿದ್ದರಿಂದ ಯಾವುದೇ ಅಂತಿಮ ವಿಧಿಗಳನ್ನು ನಡೆಸಿಲ್ಲ. ಅವರ ಮರಣದ ಒಂದು ದಿನದ ನಂತರ, ದೇಹವನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಮತ್ತು ನಂತರ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತ್ತು. ಸೆಪ್ಟೆಂಬರ್ 14, ಶನಿವಾರದಂದು ದೇಹವನ್ನು ದೆಹಲಿಯ ಎಕೆಜಿ ಭವನದಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ತರಲಾಗಿತ್ತು.

ಒಟ್ಟಿನಲ್ಲಿ ಶವ ಪೆಟ್ಟಿಗೆ ಬಳಸಿದ್ದ ಕಾರಣಕ್ಕೆ ಬಲಪಂಥೀಯರು ಸೀತಾರಾಂ ಯೆಚೂರಿ ಕ್ರೈಸ್ತರು ಎಂದು ಸುದ್ದಿ ಹಬ್ಬಿಸಿದ್ದರು. ಅಸಲಿಗೆ ಯೆಚೂರಿ ಯಾವುದೇ ಧರ್ಮದ ಅನುಯಾಯಿ ಎಂದು ಗುರುತಿಸಿಕೊಂಡಿರಲಿಲ್ಲ. ಅವರೇ ಹೇಳಿದಂತೆ, ಯೆಚೂರಿ ಹುಟ್ಟಿದ್ದು ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ. ಆದರೆ, ಅವರು ಧರ್ಮದಲ್ಲಿ ಗುರುತಿಸಿಕೊಂಡಿರಲಿಲ್ಲ. ಅವರು ಸತ್ತಾಗ ಯಾವುದೇ ಧರ್ಮದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ಮಾಡಿಲ್ಲ. ದೇಹವನ್ನು ದೆಹಲಿಯ ಏಮ್ಸ್ ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ದಾನ ಮಾಡಲಾಗಿದೆ.

ಇದನ್ನೂ ಓದಿ | FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...