Homeಫ್ಯಾಕ್ಟ್‌ಚೆಕ್FACT CHECK : CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ವೈರಲ್ ಫೋಟೋದ ಸತ್ಯಾಸತ್ಯತೆ ಏನು?

FACT CHECK : CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ವೈರಲ್ ಫೋಟೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸೆಪ್ಟೆಂಬರ್ 12 ರಂದು ತನ್ನ 72ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನದ ನಂತರ, ಪಾರ್ಥಿವ ಶರೀರವನ್ನು ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಗೆ ‘ಶವಪೆಟ್ಟಿಗೆ’ಯಲ್ಲಿ ಕೊಂಡೊಯ್ಯಲಾಗಿತ್ತು. ವಿವಿಯ ವಿದ್ಯಾರ್ಥಿಗಳು ಮಾರ್ಕ್ಸ್‌ವಾದಿ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದ್ದರು.

ಈ ಕುರಿತ ಫೋಟೋವನ್ನು ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳಲಾಗಿತ್ತು. ಫೋಟೋ ಗಮನಿಸಿದ ಅನೇಕ ಬಲಪಂಥೀಯರು ಸೀತಾರಾಂ ಯೆಚೂರಿ ಕ್ರೈಸ್ತ ಧರ್ಮದವರು, ರಾಜಕೀಯ ಜೀವನದಲ್ಲಿ ಹಿಂದೂ ಹೆಸರಿಟ್ಟುಕೊಂಡು ಹಿಂದೂಗಳಿಗೆ ವಂಚನೆ ಮಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ಸದಾ ಸುಳ್ಳು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರಿಶಿ ಬಾಗ್ರೀ ಸೆಪ್ಟೆಂಬರ್ 14ರಂದು ಜೆಎನ್‌ಎಸ್‌ಯು ಪೋಸ್ಟ್‌ಗೆ ಪ್ರತಿಕ್ರಿಯಿಸಿ “ಹಾಗಾದರೆ ಸೀತಾರಾಮ್ ಯೆಚೂರಿ ಅವರು ಕ್ರಿಶ್ಚಿಯನ್. ಅವರು ಹಿಂದೂ ಧರ್ಮವನ್ನು ಏಕೆ ದ್ವೇಷಿಸುತ್ತಿದ್ದರು ಎಂಬುದರಲ್ಲಿ ಆಶ್ಚರ್ಯವಿಲ್ಲ. ಅಂದಹಾಗೆ, ಅವರು ತಮ್ಮ ಸಕ್ರಿಯ ರಾಜಕೀಯ ಜೀವನದಲ್ಲಿ ತಮ್ಮ ಧಾರ್ಮಿಕ ಗುರುತನ್ನು ಏಕೆ ಮರೆ ಮಾಚುತ್ತಿದ್ದರು?” ಎಂದು ಬರೆದುಕೊಂಡಿದ್ದರು.

ಸೀತಾರಾಂ ಯೆಚೂರಿ ಅವರಿಗೆ ಜೆಎನ್‌ಯುನಲ್ಲಿ ಗೌರವ ಸಲ್ಲಿಸಿದ್ದ ಫೋಟೋವನ್ನು ಸೆ.14ರಂದು ಎಕ್ಸ್ ಹಂಚಿಕೊಂಡಿದ್ದ ಮತ್ತೊಂದು ಬಲಪಂಥೀಯ ಎಕ್ಸ್ ಖಾತೆ ಓಕ್‌ಫ್ಲಿಕ್ಸ್ (@wokeflix) “ಹೆಸರು: ಸೀತಾರಾಮ್ ಯೆಚೂರಿ, ಧರ್ಮ: ಕ್ರಿಶ್ಚಿಯನ್ : ಇಷ್ಟು ದಿನ ಅಕ್ಕಿ ಮೂಟೆಯಾಗಿ ತನ್ನ ಹಿಂದೂ ಹೆಸರಿನಿಂದ ಎಷ್ಟು ಜನರನ್ನು ಮೂರ್ಖರನ್ನಾಗಿಸಿದ್ದಾನೆ ಎಂದು ಊಹಿಸಿಕೊಳ್ಳಿ” ಎಂದು ಬರೆದುಕೊಂಡಿತ್ತು.

ಇವಿಷ್ಟೇ ಅಲ್ಲದೆ, ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ಸೀತಾರಾಂ ಯೆಚೂರಿ ಕ್ರೈಸ್ತ ಧರ್ಮದವರು ಎಂದು ಪ್ರತಿಪಾದಿಸಿ ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸೀತಾರಾಂ ಯೆಚೂರಿ ಯಾವ ಧರ್ಮದವರು? ಅವರ ಕೌಟುಂಬಿಕ ಹಿನ್ನೆಲೆ ಏನು? ಎಂಬುವುದರ ಬಗ್ಗೆ 2017ರಲ್ಲಿ ರಾಜ್ಯಸಭೆಯಲ್ಲಿ ಮಾಡಿದ ವಿದಾಯ ಭಾಷಣದಲ್ಲಿ ಸ್ವತಃ ಯೆಚೂರಿ ಅವರೇ ವಿವರಿಸಿದ್ದಾರೆ. ಅವರ ಭಾಷಣವನ್ನು ಕೆಳಗೆ ಅಕ್ಷರ ರೂಪದಲ್ಲಿ ಕೊಡಲಾಗಿದೆ.

“ಈಗ ಚೆನ್ನೈ ಎಂದು ಕರೆಯಲ್ಪಡುವ ಮದ್ರಾಸ್‌ನ ಜನರಲ್ ಆಸ್ಪತ್ರೆಯಲ್ಲಿ ತೆಲುಗು ಮಾತನಾಡುವ ಬ್ರಾಹ್ಮಣ ಕುಟುಂಬದಲ್ಲಿ ನಾನು ಜನಿಸಿದೆ. ನನ್ನ ಅಜ್ಜ ನ್ಯಾಯಾಧೀಶರು…ಗುಂಟೂರಿಗೆ ಹೋಗಬೇಕಾಗಿತ್ತು. 1954ರಲ್ಲಿ ನಾವು ಅಲ್ಲಿಗೆ ಸ್ಥಳಾಂತರಗೊಂಡೆವು. ನಾನು 1952ರಲ್ಲಿ ಜನಿಸಿದೆ. 1956ರಲ್ಲಿ ನಾವು ಹೈದರಾಬಾದ್‌ಗೆ ಸ್ಥಳಾಂತರಗೊಂಡೆವು. ಸ್ವಾತಂತ್ರ್ಯ ದೊರೆತ ಆರಂಭದಲ್ಲಿ ನಾನು ಹೈದರಾಬಾದ್‌ನ ನಿಝಾಮರ ಆಡಳಿತಡಿ ಇಸ್ಲಾಮಿಕ್ ಸಂಸ್ಕೃತಿಯಲ್ಲಿ ನನ್ನ ಶಾಲಾ ಶಿಕ್ಷಣ ಪಡೆದೆ. ನಂತರ ನಾನು ದೆಹಲಿಗೆ ಬಂದೆ, ಇಲ್ಲಿ ಓದಿದೆ. ನಾನು ಒಬ್ಬರು ವ್ಯಕ್ತಿಯನ್ನು ಮದುವೆಯಾಗಿದ್ದೇನೆ. ಆಕೆಯ ತಂದೆ ಇಸ್ಲಾಮಿಕ್ ಸೂಫಿ ಪಂಥದವರು ಮತ್ತು ಅವರ ಉಪನಾಮ ಚಿಸ್ತಿ… ಆಕೆಯ ತಾಯಿ ರಜಪೂತ ಸಮುದಾಯದವರು. 8ನೇ ಶತಮಾನದಲ್ಲಿ ವಲಸೆ ಬಂದ ಮೈಸೂರಿನ ರಜಪೂತರು. ನಾವೀಗ 21ನೇ ಶತಮಾನದಲ್ಲಿದ್ದೇವೆ. ನಾನು ಈ ಮಹಿಳೆಯನ್ನು ಮದುವೆಯಾಗಿರುವ ದಕ್ಷಿಣ ಭಾರತದ ಬ್ರಾಹ್ಮಣ ಕುಟುಂಬದಿಂದ ಬಂದವನು. ಹಾಗಾಗಿ, ನನ್ನ ಮಗನನ್ನು ಏನೆಂದು ಕರೆಯುತ್ತಾರೆ ಸರ್?. ನನ್ನ ಮಗನನ್ನು ಭಾರತೀಯ ಎನ್ನುವುದಕ್ಕಿಂತ ಹೆಚ್ಚಾಗಿ ಹೇಳಲು ಸಾಧ್ಯವೇ ಇಲ್ಲ. ಇದು ನಮ್ಮ ದೇಶ. ಇದು ನನ್ನ ಉದಾಹರಣೆ, ಇಂತಹ ಎಷ್ಟು ಜನರಿದ್ದಾರೆ ನೋಡಿ.”

2017ರಲ್ಲಿ ಆಗಿನ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ನೀಡಿದ ಹೇಳಿಕೆಯನ್ನು ಟೀಕಿಸಿದ್ದ ಯೆಚೂರಿ ಅವರು ‘ನಾನು ನಾಸ್ತಿಕ’ ಎಂದು ಎಕ್ಸ್‌ನಲ್ಲಿ ತಿಳಿಸಿದ್ದರು.

ಸೀತಾರಾಮ್ ಯೆಚೂರಿ ಕ್ರೈಸ್ತ ಧರ್ಮದವರು ಎಂಬ ವಾದದ ಕುರಿತು ಖ್ಯಾತ ಫ್ಯಾಕ್ಟ್ ಚೆಕ್ ಸಂಸ್ಥೆ ಆಲ್ಟ್ ನ್ಯೂಸ್ ಸಿಪಿಐ(ಎಂ) ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಅವರಿಂದ ಪ್ರತಿಕ್ರಿಯೆ ಕೇಳಿದೆ. “ಈ ವೇಳೆ ಮಾತನಾಡಿದ ಸಲೀಂ ಅವರು “ನವ ಭಾರತ’ದ ವಿಷಕಾರಿ ಸಾಮಾಜಿಕ-ರಾಜಕೀಯ ವಾತಾವರಣದಲ್ಲಿ, ಎಲ್ಲವನ್ನೂ ಧರ್ಮದೊಂದಿಗೆ ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಸಾಂಪ್ರದಾಯಿಕವಾಗಿ, ಧಾರ್ಮಿಕ ನಂಬಿಕೆಗಳನ್ನು ಮಾನವ ಮತ್ತು ವೈಯಕ್ತಿಕ  ಹಾಗೂ ಪೂಜಕ ಮತ್ತು ಪೂಜಿಸಲ್ಪಡುವುದರ ನಡುವಿನ ಸಂಬಂಧ ಎಂದು ಪರಿಗಣಿಸಲಾಗುತ್ತದೆ. ಕಾಮ್ರೇಡ್ ಸೀತಾರಾಂ ಯೆಚೂರಿ ಅವರೇ ತಮ್ಮ ರಾಜ್ಯಸಭಾ ಭಾಷಣದಲ್ಲಿ ತಮ್ಮ ಕೌಟುಂಬಿಕ ಹಿನ್ನೆಲೆ ವಿವರಿಸಿದ್ದಾರೆ. ಇನ್ನು ಕ್ರೈಸ್ತರ ರೀತಿಯ ಶವಪೆಟ್ಟಿಗೆ ಬಳಸಿದ್ದರ ಬಗ್ಗೆ ಪ್ರಶ್ನೆ ಎತ್ತಲಾಗಿದೆ. ಸಂಕುಚಿತ ನಂಬಿಕೆಗಳ ಆಧಾರದ ಮೇಲೆ ಎಲ್ಲವನ್ನೂ ವಿಭಜಿಸಲು ಬಯಸುವವರನ್ನು ಹೊರತು, ಶವ ಪೆಟ್ಟಿಗೆಗೆ ಯಾವುದೇ ನಿರ್ದಿಷ್ಟ ಧರ್ಮವಿಲ್ಲ” ಎಂದು ಹೇಳಿದ್ದಾರೆ.

ಸೀತಾರಾಂ ಯೆಚೂರಿಗೆ ಶವಪೆಟ್ಟಿಗೆ ಬಳಸಿದ್ದು ಏಕೆ?

ದೆಹಲಿ ಏಮ್ಸ್‌ನ ಮಾಧ್ಯಮ ಉಸ್ತುವಾರಿ ಮತ್ತು ಪ್ರಾಧ್ಯಾಪಕಿ ಡಾ. ರಿಮಾ ದಾದಾ ಅವರ ಪ್ರಕಾರ, ಸೀತಾರಾಂ ಯೆಚೂರಿ ಅವರ ಕುಟುಂಬವು ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಿದೆ. ಹಾಗಾಗಿ, ದೇಹವನ್ನು ರಕ್ಷಿಸಿಡಬೇಕಾದ ಅಗತ್ಯವಿದೆ. ಬೋಧನಾ ಉದ್ದೇಶಗಳಿಗಾಗಿ ಸಂರಕ್ಷಿಸಿಡಲು ಕೆಲ ಚುಚ್ಚು ಮದ್ದುಗಳನ್ನು ದೇಹಕ್ಕೆ ಚುಚ್ಚಲಾಗುತ್ತದೆ. ಹಾಗಾಗಿ, ದೇಹವನ್ನು ಶವಪೆಟ್ಟಿಗೆಯಲ್ಲಿ ಇಡಲಾಗಿತ್ತು ಎಂದು ತಿಳಿಸಿದ್ದಾರೆ. ಯೆಚೂರಿ ಅವರ ಕುಟುಂಬದ ನಿರ್ಧಾರವನ್ನು ರಿಮಾ ಅವರು ಶ್ಲಾಘಿಸಿದ್ದಾರೆ.

‘ದಿ ಹಿಂದೂ ಪತ್ರಿಕೆ’ಯ ವರದಿಯೊಂದರ ಪ್ರಕಾರ, ಸೀತಾರಾಂ ಯೆಚೂರಿ ಅವರ ದೇಹವನ್ನು ಎಮ್ಸ್‌ಗೆ ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಿದ್ದರಿಂದ ಯಾವುದೇ ಅಂತಿಮ ವಿಧಿಗಳನ್ನು ನಡೆಸಿಲ್ಲ. ಅವರ ಮರಣದ ಒಂದು ದಿನದ ನಂತರ, ದೇಹವನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಮತ್ತು ನಂತರ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತ್ತು. ಸೆಪ್ಟೆಂಬರ್ 14, ಶನಿವಾರದಂದು ದೇಹವನ್ನು ದೆಹಲಿಯ ಎಕೆಜಿ ಭವನದಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ತರಲಾಗಿತ್ತು.

ಒಟ್ಟಿನಲ್ಲಿ ಶವ ಪೆಟ್ಟಿಗೆ ಬಳಸಿದ್ದ ಕಾರಣಕ್ಕೆ ಬಲಪಂಥೀಯರು ಸೀತಾರಾಂ ಯೆಚೂರಿ ಕ್ರೈಸ್ತರು ಎಂದು ಸುದ್ದಿ ಹಬ್ಬಿಸಿದ್ದರು. ಅಸಲಿಗೆ ಯೆಚೂರಿ ಯಾವುದೇ ಧರ್ಮದ ಅನುಯಾಯಿ ಎಂದು ಗುರುತಿಸಿಕೊಂಡಿರಲಿಲ್ಲ. ಅವರೇ ಹೇಳಿದಂತೆ, ಯೆಚೂರಿ ಹುಟ್ಟಿದ್ದು ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ. ಆದರೆ, ಅವರು ಧರ್ಮದಲ್ಲಿ ಗುರುತಿಸಿಕೊಂಡಿರಲಿಲ್ಲ. ಅವರು ಸತ್ತಾಗ ಯಾವುದೇ ಧರ್ಮದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ಮಾಡಿಲ್ಲ. ದೇಹವನ್ನು ದೆಹಲಿಯ ಏಮ್ಸ್ ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ದಾನ ಮಾಡಲಾಗಿದೆ.

ಇದನ್ನೂ ಓದಿ | FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...