Homeಫ್ಯಾಕ್ಟ್‌ಚೆಕ್FACT CHECK : CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ವೈರಲ್ ಫೋಟೋದ ಸತ್ಯಾಸತ್ಯತೆ ಏನು?

FACT CHECK : CPI(M) ನಾಯಕ ಸೀತಾರಾಮ್ ಯೆಚೂರಿ ಕ್ರಿಶ್ಚಿಯನ್ನರೇ? ವೈರಲ್ ಫೋಟೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಸೆಪ್ಟೆಂಬರ್ 12 ರಂದು ತನ್ನ 72ನೇ ವಯಸ್ಸಿನಲ್ಲಿ ನಿಧನರಾದರು. ಅವರ ನಿಧನದ ನಂತರ, ಪಾರ್ಥಿವ ಶರೀರವನ್ನು ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು) ಗೆ ‘ಶವಪೆಟ್ಟಿಗೆ’ಯಲ್ಲಿ ಕೊಂಡೊಯ್ಯಲಾಗಿತ್ತು. ವಿವಿಯ ವಿದ್ಯಾರ್ಥಿಗಳು ಮಾರ್ಕ್ಸ್‌ವಾದಿ ನಾಯಕನಿಗೆ ಅಂತಿಮ ಗೌರವ ಸಲ್ಲಿಸಿದ್ದರು.

ಈ ಕುರಿತ ಫೋಟೋವನ್ನು ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹಂಚಿಕೊಳ್ಳಲಾಗಿತ್ತು. ಫೋಟೋ ಗಮನಿಸಿದ ಅನೇಕ ಬಲಪಂಥೀಯರು ಸೀತಾರಾಂ ಯೆಚೂರಿ ಕ್ರೈಸ್ತ ಧರ್ಮದವರು, ರಾಜಕೀಯ ಜೀವನದಲ್ಲಿ ಹಿಂದೂ ಹೆಸರಿಟ್ಟುಕೊಂಡು ಹಿಂದೂಗಳಿಗೆ ವಂಚನೆ ಮಾಡಿದ್ದಾರೆ ಎಂದು ಬರೆದುಕೊಂಡಿದ್ದರು.

ಸದಾ ಸುಳ್ಳು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರಿಶಿ ಬಾಗ್ರೀ ಸೆಪ್ಟೆಂಬರ್ 14ರಂದು ಜೆಎನ್‌ಎಸ್‌ಯು ಪೋಸ್ಟ್‌ಗೆ ಪ್ರತಿಕ್ರಿಯಿಸಿ “ಹಾಗಾದರೆ ಸೀತಾರಾಮ್ ಯೆಚೂರಿ ಅವರು ಕ್ರಿಶ್ಚಿಯನ್. ಅವರು ಹಿಂದೂ ಧರ್ಮವನ್ನು ಏಕೆ ದ್ವೇಷಿಸುತ್ತಿದ್ದರು ಎಂಬುದರಲ್ಲಿ ಆಶ್ಚರ್ಯವಿಲ್ಲ. ಅಂದಹಾಗೆ, ಅವರು ತಮ್ಮ ಸಕ್ರಿಯ ರಾಜಕೀಯ ಜೀವನದಲ್ಲಿ ತಮ್ಮ ಧಾರ್ಮಿಕ ಗುರುತನ್ನು ಏಕೆ ಮರೆ ಮಾಚುತ್ತಿದ್ದರು?” ಎಂದು ಬರೆದುಕೊಂಡಿದ್ದರು.

ಸೀತಾರಾಂ ಯೆಚೂರಿ ಅವರಿಗೆ ಜೆಎನ್‌ಯುನಲ್ಲಿ ಗೌರವ ಸಲ್ಲಿಸಿದ್ದ ಫೋಟೋವನ್ನು ಸೆ.14ರಂದು ಎಕ್ಸ್ ಹಂಚಿಕೊಂಡಿದ್ದ ಮತ್ತೊಂದು ಬಲಪಂಥೀಯ ಎಕ್ಸ್ ಖಾತೆ ಓಕ್‌ಫ್ಲಿಕ್ಸ್ (@wokeflix) “ಹೆಸರು: ಸೀತಾರಾಮ್ ಯೆಚೂರಿ, ಧರ್ಮ: ಕ್ರಿಶ್ಚಿಯನ್ : ಇಷ್ಟು ದಿನ ಅಕ್ಕಿ ಮೂಟೆಯಾಗಿ ತನ್ನ ಹಿಂದೂ ಹೆಸರಿನಿಂದ ಎಷ್ಟು ಜನರನ್ನು ಮೂರ್ಖರನ್ನಾಗಿಸಿದ್ದಾನೆ ಎಂದು ಊಹಿಸಿಕೊಳ್ಳಿ” ಎಂದು ಬರೆದುಕೊಂಡಿತ್ತು.

ಇವಿಷ್ಟೇ ಅಲ್ಲದೆ, ಇನ್ನೂ ಹಲವು ಎಕ್ಸ್‌ ಖಾತೆಗಳಲ್ಲಿ ಸೀತಾರಾಂ ಯೆಚೂರಿ ಕ್ರೈಸ್ತ ಧರ್ಮದವರು ಎಂದು ಪ್ರತಿಪಾದಿಸಿ ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸೀತಾರಾಂ ಯೆಚೂರಿ ಯಾವ ಧರ್ಮದವರು? ಅವರ ಕೌಟುಂಬಿಕ ಹಿನ್ನೆಲೆ ಏನು? ಎಂಬುವುದರ ಬಗ್ಗೆ 2017ರಲ್ಲಿ ರಾಜ್ಯಸಭೆಯಲ್ಲಿ ಮಾಡಿದ ವಿದಾಯ ಭಾಷಣದಲ್ಲಿ ಸ್ವತಃ ಯೆಚೂರಿ ಅವರೇ ವಿವರಿಸಿದ್ದಾರೆ. ಅವರ ಭಾಷಣವನ್ನು ಕೆಳಗೆ ಅಕ್ಷರ ರೂಪದಲ್ಲಿ ಕೊಡಲಾಗಿದೆ.

“ಈಗ ಚೆನ್ನೈ ಎಂದು ಕರೆಯಲ್ಪಡುವ ಮದ್ರಾಸ್‌ನ ಜನರಲ್ ಆಸ್ಪತ್ರೆಯಲ್ಲಿ ತೆಲುಗು ಮಾತನಾಡುವ ಬ್ರಾಹ್ಮಣ ಕುಟುಂಬದಲ್ಲಿ ನಾನು ಜನಿಸಿದೆ. ನನ್ನ ಅಜ್ಜ ನ್ಯಾಯಾಧೀಶರು…ಗುಂಟೂರಿಗೆ ಹೋಗಬೇಕಾಗಿತ್ತು. 1954ರಲ್ಲಿ ನಾವು ಅಲ್ಲಿಗೆ ಸ್ಥಳಾಂತರಗೊಂಡೆವು. ನಾನು 1952ರಲ್ಲಿ ಜನಿಸಿದೆ. 1956ರಲ್ಲಿ ನಾವು ಹೈದರಾಬಾದ್‌ಗೆ ಸ್ಥಳಾಂತರಗೊಂಡೆವು. ಸ್ವಾತಂತ್ರ್ಯ ದೊರೆತ ಆರಂಭದಲ್ಲಿ ನಾನು ಹೈದರಾಬಾದ್‌ನ ನಿಝಾಮರ ಆಡಳಿತಡಿ ಇಸ್ಲಾಮಿಕ್ ಸಂಸ್ಕೃತಿಯಲ್ಲಿ ನನ್ನ ಶಾಲಾ ಶಿಕ್ಷಣ ಪಡೆದೆ. ನಂತರ ನಾನು ದೆಹಲಿಗೆ ಬಂದೆ, ಇಲ್ಲಿ ಓದಿದೆ. ನಾನು ಒಬ್ಬರು ವ್ಯಕ್ತಿಯನ್ನು ಮದುವೆಯಾಗಿದ್ದೇನೆ. ಆಕೆಯ ತಂದೆ ಇಸ್ಲಾಮಿಕ್ ಸೂಫಿ ಪಂಥದವರು ಮತ್ತು ಅವರ ಉಪನಾಮ ಚಿಸ್ತಿ… ಆಕೆಯ ತಾಯಿ ರಜಪೂತ ಸಮುದಾಯದವರು. 8ನೇ ಶತಮಾನದಲ್ಲಿ ವಲಸೆ ಬಂದ ಮೈಸೂರಿನ ರಜಪೂತರು. ನಾವೀಗ 21ನೇ ಶತಮಾನದಲ್ಲಿದ್ದೇವೆ. ನಾನು ಈ ಮಹಿಳೆಯನ್ನು ಮದುವೆಯಾಗಿರುವ ದಕ್ಷಿಣ ಭಾರತದ ಬ್ರಾಹ್ಮಣ ಕುಟುಂಬದಿಂದ ಬಂದವನು. ಹಾಗಾಗಿ, ನನ್ನ ಮಗನನ್ನು ಏನೆಂದು ಕರೆಯುತ್ತಾರೆ ಸರ್?. ನನ್ನ ಮಗನನ್ನು ಭಾರತೀಯ ಎನ್ನುವುದಕ್ಕಿಂತ ಹೆಚ್ಚಾಗಿ ಹೇಳಲು ಸಾಧ್ಯವೇ ಇಲ್ಲ. ಇದು ನಮ್ಮ ದೇಶ. ಇದು ನನ್ನ ಉದಾಹರಣೆ, ಇಂತಹ ಎಷ್ಟು ಜನರಿದ್ದಾರೆ ನೋಡಿ.”

2017ರಲ್ಲಿ ಆಗಿನ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ನೀಡಿದ ಹೇಳಿಕೆಯನ್ನು ಟೀಕಿಸಿದ್ದ ಯೆಚೂರಿ ಅವರು ‘ನಾನು ನಾಸ್ತಿಕ’ ಎಂದು ಎಕ್ಸ್‌ನಲ್ಲಿ ತಿಳಿಸಿದ್ದರು.

ಸೀತಾರಾಮ್ ಯೆಚೂರಿ ಕ್ರೈಸ್ತ ಧರ್ಮದವರು ಎಂಬ ವಾದದ ಕುರಿತು ಖ್ಯಾತ ಫ್ಯಾಕ್ಟ್ ಚೆಕ್ ಸಂಸ್ಥೆ ಆಲ್ಟ್ ನ್ಯೂಸ್ ಸಿಪಿಐ(ಎಂ) ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಅವರಿಂದ ಪ್ರತಿಕ್ರಿಯೆ ಕೇಳಿದೆ. “ಈ ವೇಳೆ ಮಾತನಾಡಿದ ಸಲೀಂ ಅವರು “ನವ ಭಾರತ’ದ ವಿಷಕಾರಿ ಸಾಮಾಜಿಕ-ರಾಜಕೀಯ ವಾತಾವರಣದಲ್ಲಿ, ಎಲ್ಲವನ್ನೂ ಧರ್ಮದೊಂದಿಗೆ ಗುರುತಿಸಲು ಪ್ರಯತ್ನಿಸಲಾಗುತ್ತಿದೆ. ಸಾಂಪ್ರದಾಯಿಕವಾಗಿ, ಧಾರ್ಮಿಕ ನಂಬಿಕೆಗಳನ್ನು ಮಾನವ ಮತ್ತು ವೈಯಕ್ತಿಕ  ಹಾಗೂ ಪೂಜಕ ಮತ್ತು ಪೂಜಿಸಲ್ಪಡುವುದರ ನಡುವಿನ ಸಂಬಂಧ ಎಂದು ಪರಿಗಣಿಸಲಾಗುತ್ತದೆ. ಕಾಮ್ರೇಡ್ ಸೀತಾರಾಂ ಯೆಚೂರಿ ಅವರೇ ತಮ್ಮ ರಾಜ್ಯಸಭಾ ಭಾಷಣದಲ್ಲಿ ತಮ್ಮ ಕೌಟುಂಬಿಕ ಹಿನ್ನೆಲೆ ವಿವರಿಸಿದ್ದಾರೆ. ಇನ್ನು ಕ್ರೈಸ್ತರ ರೀತಿಯ ಶವಪೆಟ್ಟಿಗೆ ಬಳಸಿದ್ದರ ಬಗ್ಗೆ ಪ್ರಶ್ನೆ ಎತ್ತಲಾಗಿದೆ. ಸಂಕುಚಿತ ನಂಬಿಕೆಗಳ ಆಧಾರದ ಮೇಲೆ ಎಲ್ಲವನ್ನೂ ವಿಭಜಿಸಲು ಬಯಸುವವರನ್ನು ಹೊರತು, ಶವ ಪೆಟ್ಟಿಗೆಗೆ ಯಾವುದೇ ನಿರ್ದಿಷ್ಟ ಧರ್ಮವಿಲ್ಲ” ಎಂದು ಹೇಳಿದ್ದಾರೆ.

ಸೀತಾರಾಂ ಯೆಚೂರಿಗೆ ಶವಪೆಟ್ಟಿಗೆ ಬಳಸಿದ್ದು ಏಕೆ?

ದೆಹಲಿ ಏಮ್ಸ್‌ನ ಮಾಧ್ಯಮ ಉಸ್ತುವಾರಿ ಮತ್ತು ಪ್ರಾಧ್ಯಾಪಕಿ ಡಾ. ರಿಮಾ ದಾದಾ ಅವರ ಪ್ರಕಾರ, ಸೀತಾರಾಂ ಯೆಚೂರಿ ಅವರ ಕುಟುಂಬವು ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಿದೆ. ಹಾಗಾಗಿ, ದೇಹವನ್ನು ರಕ್ಷಿಸಿಡಬೇಕಾದ ಅಗತ್ಯವಿದೆ. ಬೋಧನಾ ಉದ್ದೇಶಗಳಿಗಾಗಿ ಸಂರಕ್ಷಿಸಿಡಲು ಕೆಲ ಚುಚ್ಚು ಮದ್ದುಗಳನ್ನು ದೇಹಕ್ಕೆ ಚುಚ್ಚಲಾಗುತ್ತದೆ. ಹಾಗಾಗಿ, ದೇಹವನ್ನು ಶವಪೆಟ್ಟಿಗೆಯಲ್ಲಿ ಇಡಲಾಗಿತ್ತು ಎಂದು ತಿಳಿಸಿದ್ದಾರೆ. ಯೆಚೂರಿ ಅವರ ಕುಟುಂಬದ ನಿರ್ಧಾರವನ್ನು ರಿಮಾ ಅವರು ಶ್ಲಾಘಿಸಿದ್ದಾರೆ.

‘ದಿ ಹಿಂದೂ ಪತ್ರಿಕೆ’ಯ ವರದಿಯೊಂದರ ಪ್ರಕಾರ, ಸೀತಾರಾಂ ಯೆಚೂರಿ ಅವರ ದೇಹವನ್ನು ಎಮ್ಸ್‌ಗೆ ವೈದ್ಯಕೀಯ ಸಂಶೋಧನೆಗಾಗಿ ದಾನ ಮಾಡಿದ್ದರಿಂದ ಯಾವುದೇ ಅಂತಿಮ ವಿಧಿಗಳನ್ನು ನಡೆಸಿಲ್ಲ. ಅವರ ಮರಣದ ಒಂದು ದಿನದ ನಂತರ, ದೇಹವನ್ನು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ ಮತ್ತು ನಂತರ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತ್ತು. ಸೆಪ್ಟೆಂಬರ್ 14, ಶನಿವಾರದಂದು ದೇಹವನ್ನು ದೆಹಲಿಯ ಎಕೆಜಿ ಭವನದಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ತರಲಾಗಿತ್ತು.

ಒಟ್ಟಿನಲ್ಲಿ ಶವ ಪೆಟ್ಟಿಗೆ ಬಳಸಿದ್ದ ಕಾರಣಕ್ಕೆ ಬಲಪಂಥೀಯರು ಸೀತಾರಾಂ ಯೆಚೂರಿ ಕ್ರೈಸ್ತರು ಎಂದು ಸುದ್ದಿ ಹಬ್ಬಿಸಿದ್ದರು. ಅಸಲಿಗೆ ಯೆಚೂರಿ ಯಾವುದೇ ಧರ್ಮದ ಅನುಯಾಯಿ ಎಂದು ಗುರುತಿಸಿಕೊಂಡಿರಲಿಲ್ಲ. ಅವರೇ ಹೇಳಿದಂತೆ, ಯೆಚೂರಿ ಹುಟ್ಟಿದ್ದು ಹಿಂದೂ ಬ್ರಾಹ್ಮಣ ಕುಟುಂಬದಲ್ಲಿ. ಆದರೆ, ಅವರು ಧರ್ಮದಲ್ಲಿ ಗುರುತಿಸಿಕೊಂಡಿರಲಿಲ್ಲ. ಅವರು ಸತ್ತಾಗ ಯಾವುದೇ ಧರ್ಮದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ಮಾಡಿಲ್ಲ. ದೇಹವನ್ನು ದೆಹಲಿಯ ಏಮ್ಸ್ ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ದಾನ ಮಾಡಲಾಗಿದೆ.

ಇದನ್ನೂ ಓದಿ | FACT CHECK : ಕರ್ನಾಟಕ ಸರ್ಕಾರದಿಂದ ಗಣೇಶ ಮೆರವಣಿಗೆಗೆ ಅಡ್ಡಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...