Homeನಿಜವೋ ಸುಳ್ಳೋFact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

- Advertisement -
- Advertisement -

ಮುಸ್ಲಿಂ ಬಾಂಧವರು ಕಟ್ಟಡಗಳ ಟೆರೇಸ್‌ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚೆಗೆ ಭಾರೀ ವೈರಲ್ ಆಗುತ್ತಿದೆ. ಚಲನಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಚಿತ್ರವನ್ನು ಟ್ವೀಟ್ ಮಾಡಿ “ಇದು ಎಲ್ಲಿ ಎಂದು ಯಾರಿಗಾದರು ತಿಳಿದಿದೆಯೆ ?” ಎಂದು ಪ್ರಶ್ನೆ ಮಾಡಿದ್ದರು. ಈ ಟ್ವೀಟ್‌ ಅನ್ನು ಈವರೆಗೆ 6,000 ಬಾರಿ ರಿಟ್ವೀಟ್ ಮಾಡಲಾಗಿದೆ.

ಫೇಸ್‌ಬುಕ್ ನ ಹುಕ್ಕಾ ಔರ್ ಕಾಟ್ ಎಂಬ ಪೇಜ್ ನಲ್ಲಿ “ಇದು ಧರ್ಮ ಶ್ರದ್ಧೆ ಆಗಿರಬಹುದು ಆದರೆ ದೇಶದ್ರೋಹವಲ್ಲವೇ?” ಎಂಬ ಸಂದೇಶದೊಂದಿಗೆ ಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಅನ್ನು ಸಹ ಈವರೆಗೆ 440 ಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದಾರೆ. ಆದರೆ, ಈ ಚಿತ್ರದ ಮೂಲದ ಬಗ್ಗೆಯೋ? ಅಥವಾ ಈ ಚಿತ್ರ ತೆಗೆಯಲಾದ ಸ್ಥಳದ ಬಗ್ಗೆಯೋ? ಎಲ್ಲೂ ಉಲ್ಲೇಖಿಸಿಲ್ಲ. ಆದರೂ, ಅದು ಭಾರತದ ಮುಸ್ಲಿಂ ಸಮುದಾಯವನ್ನು ಸೂಚಿಸುತ್ತಿದೆ ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ.

ಕನ್ನಡದ ಕೆಲವು ಫೇಸ್‌ಬುಕ್ ಪೇಜ್‌ಗಳಲ್ಲೂ ಸಹ ಈ ಫೊಟೋವನ್ನು ಕನ್ನಡ ತಲೆ ಬರಹದ ಜೊತೆಗೆ ಹಂಚಿಕೊಳ್ಳಲಾಗಿದೆ. ನಮೋ ಮತ್ತು ಮೋದಿ ಕಿಂಗ್ ಡಮ್  ಎಂಬ ಫೇಸ್ ಬುಕ್ ಪೇಜ್‌ಗಳು  “ಆರೋಗ್ಯ, ಸಮಾಜ ಹಾಗೂ ವೈಜ್ಞಾನಿಕತೆ ಬಗ್ಗೆ ಕೆಲವರಿಗೆ ಮನವರಿಕೆ ಮಾಡುವುದು, ಕತ್ತೆ ಮುಂದೆ ಕಿನ್ನರಿ ಬಾರಿಸಿದಂತೆ” ಎಂದು ಬರೆದುಕೊಂಡಿವೆ. ಈ ಫೇಸ್‌ಬುಕ್ ಪೇಜಿನ ಪೋಸ್ಟ್‌ಗಳನ್ನು ಕ್ರಮವಾಗಿ,2100 ಹಾಗೂ 2800 ಜನರು ಹಂಚಿಕೊಂಡಿದ್ದಾರೆ.

ಇದಲ್ಲದೆ ಇದೇ ಚಿತ್ರವನ್ನು ಇಟ್ಟುಕೊಂಡು ಬೇರೆ ಬೇರೆ ಸಂದೇಶಗಳೊಂದಿಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಿಯಬಿಡಲಾಗುತ್ತಿದೆ.

ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸುವಂತೆ “ಆಲ್ಟ್ ನ್ಯೂಸ್” ಗೆ ಹಲವಾರು ದೂರುಗಳು ಬಂದುದರಿಂದ ಆಲ್ಟ್ ನ್ಯೂಸ್ ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ ಅದರ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದೆ. ಆಲ್ಟ್ ನ್ಯೂಸ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟ ನಡೆಸಿ ಇದನ್ನು ಈ ಹಿಂದೆ ಸೌದಿ ಅರೇಬಿಯಾ ಮತ್ತು ಕುವೈತ್‌ನಲ್ಲಿ ಹಂಚಿಕೊಳ್ಳಲಾಗಿರುವ ಫೋಟೋ ಎಂಬುದನ್ನು ಪತ್ತೆಹಚ್ಚಲಾಗಿದೆ. ಈ ದೇಶಗಳ ಅನೇಕ ವ್ಯಕ್ತಿಗಳು ಮಾಡಿದ ಟ್ವೀಟ್‌ಗಳನ್ನು ಆಲ್ಟ್ ನ್ಯೂಸ್ ಕಂಡುಕೊಂಡಿದೆ. ಆದರೆ ಸ್ಥಳವನ್ನು ಮಾತ್ರ ಕಂಡುಹಿಡಿಯಲು ಸಾಧ್ಯವಿಲ್ಲ.

ಚಿತ್ರವನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ “ಆಲ್ಟ್ ನ್ಯೂಸ್” ಮಸೀದಿ, ನೀರಿನ ಭಾಗ (ಬಹುಶಃ ಸಮುದ್ರ), ಹಿನ್ನಲೆಯಲ್ಲಿ ಗೋಚರಿಸುವ ದೋಣಿಯನ್ನು ಗೂಗಲಿನಲ್ಲಿ ಹುಡುಕಾಡಿದ “ಆಲ್ಟ್ ನ್ಯೂಸ್” ಅದು ದುಬೈ ಇರಬಹುದು ಎಂದು ಹೇಳಿದೆ.

ದುಬೈಯ ಕೊಲ್ಲಿಯ ಬಳಿ ಚಿತ್ರದ ಹಿನ್ನೆಲೆಯಲ್ಲಿ ಎತ್ತರದ ಕಟ್ಟಡವನ್ನು ಕಾಣಬಹುದು. ಯುಎಇಯ ದುಬೈ ಆರ್ಕಿಟೆಕ್ಚರಲ್ ಹೆರಿಟೇಜ್ ಇಲಾಖೆ ವೆಬ್ಸೈಟಿನಲ್ಲಿ ಗುಮ್ಮಟ ಮತ್ತು ಮಿನಾರಗಳ ರಚನೆಗಳು ಕಾಣಬಹುದಾಗಿದೆ. ಕೆಳಗೆ ತೋರಿಸಿದ ಹೋಲಿಕೆಯಂತೆ, ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ರಚನೆ ಮತ್ತು ಗೂಗಲ್‌ನಲ್ಲಿ ಲಭ್ಯವಿರುವ ವಾಸ್ತುಶಿಲ್ಪ ಹೆರಿಟೇಜ್ ಇಲಾಖೆಯ ಚಿತ್ರವನ್ನು ಗಮನಿಸಬಹುದಾಗಿದೆ.

ಇದಲ್ಲದೆ, ಈ ಕಟ್ಟಡಗಳ ಗೂಗಲ್ ಅರ್ಥ್ ವೀಕ್ಷಣೆಯಲ್ಲಿ ವೈರಲ್ ಚಿತ್ರದಲ್ಲಿ ಕಂಡುಬರುವ ಶೆಡ್ ಅಥವಾ ಕವರ್‌ಗಳನ್ನು ಕಾಣಬಹುದಾಗಿದೆ (ಶೆಡ್‌ಗಳನ್ನು ನೇರಳೆ ಪಟ್ಟೆಗಳಿಂದ ಹೈಲೈಟ್ ಮಾಡಲಾಗಿದೆ).

ಗೂಗಲ್ ಅರ್ಥ್‌ನ ಮತ್ತೊಂದು ಚಿತ್ರವು ಈ ಕಟ್ಟಡಗಳ ಮೇಲಿನ ನೋಟ ಮತ್ತು ಚಿತ್ರವನ್ನು ಚಿತ್ರೀಕರಿಸಿದ ಕೋನವನ್ನು ತೋರಿಸುತ್ತದೆ.

ಕೆಳಗಿನ ತೋರಿಸಿರುವ ಹೋಲಿಕೆಯಲ್ಲಿ, ಈ ಕಟ್ಟಡಗಳ ಹಿನ್ನೆಲೆಯಲ್ಲಿ ಕಂಡುಬರುವ ಶಾಪಿಂಗ್ ಮಾಲ್‌ಗೆ ಹೊಂದಾಣಿಕೆ ಮಾಡಲು ಮತ್ತು ಸ್ಥಳವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಮೇಲಿನ ಎಡಭಾಗದಲ್ಲಿರುವ ಚಿತ್ರವು ಗೂಗಲ್ ಸ್ಟ್ರೀಟ್ ವ್ಯೂ ಆಗಿದ್ದರೆ ಬಲಭಾಗದಲ್ಲಿ ಶಾಪಿಂಗ್ ಮಾಲ್‌ನ ಗೂಗಲ್ ಅರ್ಥ್ ವೀಕ್ಷಣೆ ಇದೆ. ಕೆಳಭಾಗದಲ್ಲಿ ಇರುವ ಚಿತ್ರವು ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ಶಾಪಿಂಗ್ ಮಾಲ್ ಅನ್ನು ತೋರಿಸುತ್ತದೆ.

ಈ ಚಿತ್ರದ ಸ್ಥಳವನ್ನು ಸರಿಯಾಗಿ ಪರಿಶೀಲಿಸಬಹುದಾದರೂ, ಇದು ಇತ್ತೀಚಿನದೇ ಅಥವಾ ಹಳೆಯದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಆಲ್ಟ್ ನ್ಯೂಸ್ ಹೇಳಿದೆ.

ಒಟ್ಟಿನಲ್ಲಿ ದುಬೈಯ ಚಿತ್ರವನ್ನು ಮುಂದಿಟ್ಟು ಭಾರತದಲ್ಲಿ ಲಾಕ್‌ಡೌನ್ ಪ್ರೋಟೋಕಾಲ್ ಅನ್ನು ಮುಸ್ಲಿಮರು ಉಲ್ಲಂಘಿಸುತ್ತಿದ್ದಾರೆ ಎಂದು ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಮಾಡಿ ಕೋಮುದ್ವೇಷ ಹರಡುತ್ತಿರುವುದು ಆಲ್ಟ್‌ನ್ಯೂಸ್‌ ರಿಯಾಲಿಟಿ ಚೆಕ್‌ನಿಂದ ಬಯಲಾಗಿದೆ. ಆದರೆ, ಹೀಗೆ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸರ್ಕಾರ ಯಾವ ಕಾನೂನು ಕ್ರಮ ಜರುಗಿಸಲಿದೆ? ಎಂಬುದು ಮಾತ್ರ ಚಿದಂಬರ ರಹಸ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು, ಇದು ದುಬೈ ಕಟ್ಟಡಗಳೆ. ಶುಕ್ರವಾರ ಮಸೀದಿಯಲ್ಲಿ ಜಾಗ ಇಲ್ಲದೆ ಕಟ್ಟಡಗಳ ಮೇಲೆ ನಮಾಜ್ ಮಾಡುವ ದ್ರಶ್ಯಗಳು. ಎಲ್ಲ ಕಟ್ಟಡಗಳಿಗು AC ಅಳವಡಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...