Homeನಿಜವೋ ಸುಳ್ಳೋFact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

- Advertisement -
- Advertisement -

ಮುಸ್ಲಿಂ ಬಾಂಧವರು ಕಟ್ಟಡಗಳ ಟೆರೇಸ್‌ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚೆಗೆ ಭಾರೀ ವೈರಲ್ ಆಗುತ್ತಿದೆ. ಚಲನಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಚಿತ್ರವನ್ನು ಟ್ವೀಟ್ ಮಾಡಿ “ಇದು ಎಲ್ಲಿ ಎಂದು ಯಾರಿಗಾದರು ತಿಳಿದಿದೆಯೆ ?” ಎಂದು ಪ್ರಶ್ನೆ ಮಾಡಿದ್ದರು. ಈ ಟ್ವೀಟ್‌ ಅನ್ನು ಈವರೆಗೆ 6,000 ಬಾರಿ ರಿಟ್ವೀಟ್ ಮಾಡಲಾಗಿದೆ.

ಫೇಸ್‌ಬುಕ್ ನ ಹುಕ್ಕಾ ಔರ್ ಕಾಟ್ ಎಂಬ ಪೇಜ್ ನಲ್ಲಿ “ಇದು ಧರ್ಮ ಶ್ರದ್ಧೆ ಆಗಿರಬಹುದು ಆದರೆ ದೇಶದ್ರೋಹವಲ್ಲವೇ?” ಎಂಬ ಸಂದೇಶದೊಂದಿಗೆ ಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಅನ್ನು ಸಹ ಈವರೆಗೆ 440 ಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದಾರೆ. ಆದರೆ, ಈ ಚಿತ್ರದ ಮೂಲದ ಬಗ್ಗೆಯೋ? ಅಥವಾ ಈ ಚಿತ್ರ ತೆಗೆಯಲಾದ ಸ್ಥಳದ ಬಗ್ಗೆಯೋ? ಎಲ್ಲೂ ಉಲ್ಲೇಖಿಸಿಲ್ಲ. ಆದರೂ, ಅದು ಭಾರತದ ಮುಸ್ಲಿಂ ಸಮುದಾಯವನ್ನು ಸೂಚಿಸುತ್ತಿದೆ ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ.

ಕನ್ನಡದ ಕೆಲವು ಫೇಸ್‌ಬುಕ್ ಪೇಜ್‌ಗಳಲ್ಲೂ ಸಹ ಈ ಫೊಟೋವನ್ನು ಕನ್ನಡ ತಲೆ ಬರಹದ ಜೊತೆಗೆ ಹಂಚಿಕೊಳ್ಳಲಾಗಿದೆ. ನಮೋ ಮತ್ತು ಮೋದಿ ಕಿಂಗ್ ಡಮ್  ಎಂಬ ಫೇಸ್ ಬುಕ್ ಪೇಜ್‌ಗಳು  “ಆರೋಗ್ಯ, ಸಮಾಜ ಹಾಗೂ ವೈಜ್ಞಾನಿಕತೆ ಬಗ್ಗೆ ಕೆಲವರಿಗೆ ಮನವರಿಕೆ ಮಾಡುವುದು, ಕತ್ತೆ ಮುಂದೆ ಕಿನ್ನರಿ ಬಾರಿಸಿದಂತೆ” ಎಂದು ಬರೆದುಕೊಂಡಿವೆ. ಈ ಫೇಸ್‌ಬುಕ್ ಪೇಜಿನ ಪೋಸ್ಟ್‌ಗಳನ್ನು ಕ್ರಮವಾಗಿ,2100 ಹಾಗೂ 2800 ಜನರು ಹಂಚಿಕೊಂಡಿದ್ದಾರೆ.

ಇದಲ್ಲದೆ ಇದೇ ಚಿತ್ರವನ್ನು ಇಟ್ಟುಕೊಂಡು ಬೇರೆ ಬೇರೆ ಸಂದೇಶಗಳೊಂದಿಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಿಯಬಿಡಲಾಗುತ್ತಿದೆ.

ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸುವಂತೆ “ಆಲ್ಟ್ ನ್ಯೂಸ್” ಗೆ ಹಲವಾರು ದೂರುಗಳು ಬಂದುದರಿಂದ ಆಲ್ಟ್ ನ್ಯೂಸ್ ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ ಅದರ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದೆ. ಆಲ್ಟ್ ನ್ಯೂಸ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟ ನಡೆಸಿ ಇದನ್ನು ಈ ಹಿಂದೆ ಸೌದಿ ಅರೇಬಿಯಾ ಮತ್ತು ಕುವೈತ್‌ನಲ್ಲಿ ಹಂಚಿಕೊಳ್ಳಲಾಗಿರುವ ಫೋಟೋ ಎಂಬುದನ್ನು ಪತ್ತೆಹಚ್ಚಲಾಗಿದೆ. ಈ ದೇಶಗಳ ಅನೇಕ ವ್ಯಕ್ತಿಗಳು ಮಾಡಿದ ಟ್ವೀಟ್‌ಗಳನ್ನು ಆಲ್ಟ್ ನ್ಯೂಸ್ ಕಂಡುಕೊಂಡಿದೆ. ಆದರೆ ಸ್ಥಳವನ್ನು ಮಾತ್ರ ಕಂಡುಹಿಡಿಯಲು ಸಾಧ್ಯವಿಲ್ಲ.

ಚಿತ್ರವನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ “ಆಲ್ಟ್ ನ್ಯೂಸ್” ಮಸೀದಿ, ನೀರಿನ ಭಾಗ (ಬಹುಶಃ ಸಮುದ್ರ), ಹಿನ್ನಲೆಯಲ್ಲಿ ಗೋಚರಿಸುವ ದೋಣಿಯನ್ನು ಗೂಗಲಿನಲ್ಲಿ ಹುಡುಕಾಡಿದ “ಆಲ್ಟ್ ನ್ಯೂಸ್” ಅದು ದುಬೈ ಇರಬಹುದು ಎಂದು ಹೇಳಿದೆ.

ದುಬೈಯ ಕೊಲ್ಲಿಯ ಬಳಿ ಚಿತ್ರದ ಹಿನ್ನೆಲೆಯಲ್ಲಿ ಎತ್ತರದ ಕಟ್ಟಡವನ್ನು ಕಾಣಬಹುದು. ಯುಎಇಯ ದುಬೈ ಆರ್ಕಿಟೆಕ್ಚರಲ್ ಹೆರಿಟೇಜ್ ಇಲಾಖೆ ವೆಬ್ಸೈಟಿನಲ್ಲಿ ಗುಮ್ಮಟ ಮತ್ತು ಮಿನಾರಗಳ ರಚನೆಗಳು ಕಾಣಬಹುದಾಗಿದೆ. ಕೆಳಗೆ ತೋರಿಸಿದ ಹೋಲಿಕೆಯಂತೆ, ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ರಚನೆ ಮತ್ತು ಗೂಗಲ್‌ನಲ್ಲಿ ಲಭ್ಯವಿರುವ ವಾಸ್ತುಶಿಲ್ಪ ಹೆರಿಟೇಜ್ ಇಲಾಖೆಯ ಚಿತ್ರವನ್ನು ಗಮನಿಸಬಹುದಾಗಿದೆ.

ಇದಲ್ಲದೆ, ಈ ಕಟ್ಟಡಗಳ ಗೂಗಲ್ ಅರ್ಥ್ ವೀಕ್ಷಣೆಯಲ್ಲಿ ವೈರಲ್ ಚಿತ್ರದಲ್ಲಿ ಕಂಡುಬರುವ ಶೆಡ್ ಅಥವಾ ಕವರ್‌ಗಳನ್ನು ಕಾಣಬಹುದಾಗಿದೆ (ಶೆಡ್‌ಗಳನ್ನು ನೇರಳೆ ಪಟ್ಟೆಗಳಿಂದ ಹೈಲೈಟ್ ಮಾಡಲಾಗಿದೆ).

ಗೂಗಲ್ ಅರ್ಥ್‌ನ ಮತ್ತೊಂದು ಚಿತ್ರವು ಈ ಕಟ್ಟಡಗಳ ಮೇಲಿನ ನೋಟ ಮತ್ತು ಚಿತ್ರವನ್ನು ಚಿತ್ರೀಕರಿಸಿದ ಕೋನವನ್ನು ತೋರಿಸುತ್ತದೆ.

ಕೆಳಗಿನ ತೋರಿಸಿರುವ ಹೋಲಿಕೆಯಲ್ಲಿ, ಈ ಕಟ್ಟಡಗಳ ಹಿನ್ನೆಲೆಯಲ್ಲಿ ಕಂಡುಬರುವ ಶಾಪಿಂಗ್ ಮಾಲ್‌ಗೆ ಹೊಂದಾಣಿಕೆ ಮಾಡಲು ಮತ್ತು ಸ್ಥಳವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಮೇಲಿನ ಎಡಭಾಗದಲ್ಲಿರುವ ಚಿತ್ರವು ಗೂಗಲ್ ಸ್ಟ್ರೀಟ್ ವ್ಯೂ ಆಗಿದ್ದರೆ ಬಲಭಾಗದಲ್ಲಿ ಶಾಪಿಂಗ್ ಮಾಲ್‌ನ ಗೂಗಲ್ ಅರ್ಥ್ ವೀಕ್ಷಣೆ ಇದೆ. ಕೆಳಭಾಗದಲ್ಲಿ ಇರುವ ಚಿತ್ರವು ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ಶಾಪಿಂಗ್ ಮಾಲ್ ಅನ್ನು ತೋರಿಸುತ್ತದೆ.

ಈ ಚಿತ್ರದ ಸ್ಥಳವನ್ನು ಸರಿಯಾಗಿ ಪರಿಶೀಲಿಸಬಹುದಾದರೂ, ಇದು ಇತ್ತೀಚಿನದೇ ಅಥವಾ ಹಳೆಯದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಆಲ್ಟ್ ನ್ಯೂಸ್ ಹೇಳಿದೆ.

ಒಟ್ಟಿನಲ್ಲಿ ದುಬೈಯ ಚಿತ್ರವನ್ನು ಮುಂದಿಟ್ಟು ಭಾರತದಲ್ಲಿ ಲಾಕ್‌ಡೌನ್ ಪ್ರೋಟೋಕಾಲ್ ಅನ್ನು ಮುಸ್ಲಿಮರು ಉಲ್ಲಂಘಿಸುತ್ತಿದ್ದಾರೆ ಎಂದು ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಮಾಡಿ ಕೋಮುದ್ವೇಷ ಹರಡುತ್ತಿರುವುದು ಆಲ್ಟ್‌ನ್ಯೂಸ್‌ ರಿಯಾಲಿಟಿ ಚೆಕ್‌ನಿಂದ ಬಯಲಾಗಿದೆ. ಆದರೆ, ಹೀಗೆ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸರ್ಕಾರ ಯಾವ ಕಾನೂನು ಕ್ರಮ ಜರುಗಿಸಲಿದೆ? ಎಂಬುದು ಮಾತ್ರ ಚಿದಂಬರ ರಹಸ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು, ಇದು ದುಬೈ ಕಟ್ಟಡಗಳೆ. ಶುಕ್ರವಾರ ಮಸೀದಿಯಲ್ಲಿ ಜಾಗ ಇಲ್ಲದೆ ಕಟ್ಟಡಗಳ ಮೇಲೆ ನಮಾಜ್ ಮಾಡುವ ದ್ರಶ್ಯಗಳು. ಎಲ್ಲ ಕಟ್ಟಡಗಳಿಗು AC ಅಳವಡಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...