Homeನಿಜವೋ ಸುಳ್ಳೋFact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

- Advertisement -
- Advertisement -

ಮುಸ್ಲಿಂ ಬಾಂಧವರು ಕಟ್ಟಡಗಳ ಟೆರೇಸ್‌ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚೆಗೆ ಭಾರೀ ವೈರಲ್ ಆಗುತ್ತಿದೆ. ಚಲನಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಚಿತ್ರವನ್ನು ಟ್ವೀಟ್ ಮಾಡಿ “ಇದು ಎಲ್ಲಿ ಎಂದು ಯಾರಿಗಾದರು ತಿಳಿದಿದೆಯೆ ?” ಎಂದು ಪ್ರಶ್ನೆ ಮಾಡಿದ್ದರು. ಈ ಟ್ವೀಟ್‌ ಅನ್ನು ಈವರೆಗೆ 6,000 ಬಾರಿ ರಿಟ್ವೀಟ್ ಮಾಡಲಾಗಿದೆ.

ಫೇಸ್‌ಬುಕ್ ನ ಹುಕ್ಕಾ ಔರ್ ಕಾಟ್ ಎಂಬ ಪೇಜ್ ನಲ್ಲಿ “ಇದು ಧರ್ಮ ಶ್ರದ್ಧೆ ಆಗಿರಬಹುದು ಆದರೆ ದೇಶದ್ರೋಹವಲ್ಲವೇ?” ಎಂಬ ಸಂದೇಶದೊಂದಿಗೆ ಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಅನ್ನು ಸಹ ಈವರೆಗೆ 440 ಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದಾರೆ. ಆದರೆ, ಈ ಚಿತ್ರದ ಮೂಲದ ಬಗ್ಗೆಯೋ? ಅಥವಾ ಈ ಚಿತ್ರ ತೆಗೆಯಲಾದ ಸ್ಥಳದ ಬಗ್ಗೆಯೋ? ಎಲ್ಲೂ ಉಲ್ಲೇಖಿಸಿಲ್ಲ. ಆದರೂ, ಅದು ಭಾರತದ ಮುಸ್ಲಿಂ ಸಮುದಾಯವನ್ನು ಸೂಚಿಸುತ್ತಿದೆ ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ.

ಕನ್ನಡದ ಕೆಲವು ಫೇಸ್‌ಬುಕ್ ಪೇಜ್‌ಗಳಲ್ಲೂ ಸಹ ಈ ಫೊಟೋವನ್ನು ಕನ್ನಡ ತಲೆ ಬರಹದ ಜೊತೆಗೆ ಹಂಚಿಕೊಳ್ಳಲಾಗಿದೆ. ನಮೋ ಮತ್ತು ಮೋದಿ ಕಿಂಗ್ ಡಮ್  ಎಂಬ ಫೇಸ್ ಬುಕ್ ಪೇಜ್‌ಗಳು  “ಆರೋಗ್ಯ, ಸಮಾಜ ಹಾಗೂ ವೈಜ್ಞಾನಿಕತೆ ಬಗ್ಗೆ ಕೆಲವರಿಗೆ ಮನವರಿಕೆ ಮಾಡುವುದು, ಕತ್ತೆ ಮುಂದೆ ಕಿನ್ನರಿ ಬಾರಿಸಿದಂತೆ” ಎಂದು ಬರೆದುಕೊಂಡಿವೆ. ಈ ಫೇಸ್‌ಬುಕ್ ಪೇಜಿನ ಪೋಸ್ಟ್‌ಗಳನ್ನು ಕ್ರಮವಾಗಿ,2100 ಹಾಗೂ 2800 ಜನರು ಹಂಚಿಕೊಂಡಿದ್ದಾರೆ.

ಇದಲ್ಲದೆ ಇದೇ ಚಿತ್ರವನ್ನು ಇಟ್ಟುಕೊಂಡು ಬೇರೆ ಬೇರೆ ಸಂದೇಶಗಳೊಂದಿಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಿಯಬಿಡಲಾಗುತ್ತಿದೆ.

ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸುವಂತೆ “ಆಲ್ಟ್ ನ್ಯೂಸ್” ಗೆ ಹಲವಾರು ದೂರುಗಳು ಬಂದುದರಿಂದ ಆಲ್ಟ್ ನ್ಯೂಸ್ ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ ಅದರ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದೆ. ಆಲ್ಟ್ ನ್ಯೂಸ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟ ನಡೆಸಿ ಇದನ್ನು ಈ ಹಿಂದೆ ಸೌದಿ ಅರೇಬಿಯಾ ಮತ್ತು ಕುವೈತ್‌ನಲ್ಲಿ ಹಂಚಿಕೊಳ್ಳಲಾಗಿರುವ ಫೋಟೋ ಎಂಬುದನ್ನು ಪತ್ತೆಹಚ್ಚಲಾಗಿದೆ. ಈ ದೇಶಗಳ ಅನೇಕ ವ್ಯಕ್ತಿಗಳು ಮಾಡಿದ ಟ್ವೀಟ್‌ಗಳನ್ನು ಆಲ್ಟ್ ನ್ಯೂಸ್ ಕಂಡುಕೊಂಡಿದೆ. ಆದರೆ ಸ್ಥಳವನ್ನು ಮಾತ್ರ ಕಂಡುಹಿಡಿಯಲು ಸಾಧ್ಯವಿಲ್ಲ.

ಚಿತ್ರವನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ “ಆಲ್ಟ್ ನ್ಯೂಸ್” ಮಸೀದಿ, ನೀರಿನ ಭಾಗ (ಬಹುಶಃ ಸಮುದ್ರ), ಹಿನ್ನಲೆಯಲ್ಲಿ ಗೋಚರಿಸುವ ದೋಣಿಯನ್ನು ಗೂಗಲಿನಲ್ಲಿ ಹುಡುಕಾಡಿದ “ಆಲ್ಟ್ ನ್ಯೂಸ್” ಅದು ದುಬೈ ಇರಬಹುದು ಎಂದು ಹೇಳಿದೆ.

ದುಬೈಯ ಕೊಲ್ಲಿಯ ಬಳಿ ಚಿತ್ರದ ಹಿನ್ನೆಲೆಯಲ್ಲಿ ಎತ್ತರದ ಕಟ್ಟಡವನ್ನು ಕಾಣಬಹುದು. ಯುಎಇಯ ದುಬೈ ಆರ್ಕಿಟೆಕ್ಚರಲ್ ಹೆರಿಟೇಜ್ ಇಲಾಖೆ ವೆಬ್ಸೈಟಿನಲ್ಲಿ ಗುಮ್ಮಟ ಮತ್ತು ಮಿನಾರಗಳ ರಚನೆಗಳು ಕಾಣಬಹುದಾಗಿದೆ. ಕೆಳಗೆ ತೋರಿಸಿದ ಹೋಲಿಕೆಯಂತೆ, ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ರಚನೆ ಮತ್ತು ಗೂಗಲ್‌ನಲ್ಲಿ ಲಭ್ಯವಿರುವ ವಾಸ್ತುಶಿಲ್ಪ ಹೆರಿಟೇಜ್ ಇಲಾಖೆಯ ಚಿತ್ರವನ್ನು ಗಮನಿಸಬಹುದಾಗಿದೆ.

ಇದಲ್ಲದೆ, ಈ ಕಟ್ಟಡಗಳ ಗೂಗಲ್ ಅರ್ಥ್ ವೀಕ್ಷಣೆಯಲ್ಲಿ ವೈರಲ್ ಚಿತ್ರದಲ್ಲಿ ಕಂಡುಬರುವ ಶೆಡ್ ಅಥವಾ ಕವರ್‌ಗಳನ್ನು ಕಾಣಬಹುದಾಗಿದೆ (ಶೆಡ್‌ಗಳನ್ನು ನೇರಳೆ ಪಟ್ಟೆಗಳಿಂದ ಹೈಲೈಟ್ ಮಾಡಲಾಗಿದೆ).

ಗೂಗಲ್ ಅರ್ಥ್‌ನ ಮತ್ತೊಂದು ಚಿತ್ರವು ಈ ಕಟ್ಟಡಗಳ ಮೇಲಿನ ನೋಟ ಮತ್ತು ಚಿತ್ರವನ್ನು ಚಿತ್ರೀಕರಿಸಿದ ಕೋನವನ್ನು ತೋರಿಸುತ್ತದೆ.

ಕೆಳಗಿನ ತೋರಿಸಿರುವ ಹೋಲಿಕೆಯಲ್ಲಿ, ಈ ಕಟ್ಟಡಗಳ ಹಿನ್ನೆಲೆಯಲ್ಲಿ ಕಂಡುಬರುವ ಶಾಪಿಂಗ್ ಮಾಲ್‌ಗೆ ಹೊಂದಾಣಿಕೆ ಮಾಡಲು ಮತ್ತು ಸ್ಥಳವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಮೇಲಿನ ಎಡಭಾಗದಲ್ಲಿರುವ ಚಿತ್ರವು ಗೂಗಲ್ ಸ್ಟ್ರೀಟ್ ವ್ಯೂ ಆಗಿದ್ದರೆ ಬಲಭಾಗದಲ್ಲಿ ಶಾಪಿಂಗ್ ಮಾಲ್‌ನ ಗೂಗಲ್ ಅರ್ಥ್ ವೀಕ್ಷಣೆ ಇದೆ. ಕೆಳಭಾಗದಲ್ಲಿ ಇರುವ ಚಿತ್ರವು ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ಶಾಪಿಂಗ್ ಮಾಲ್ ಅನ್ನು ತೋರಿಸುತ್ತದೆ.

ಈ ಚಿತ್ರದ ಸ್ಥಳವನ್ನು ಸರಿಯಾಗಿ ಪರಿಶೀಲಿಸಬಹುದಾದರೂ, ಇದು ಇತ್ತೀಚಿನದೇ ಅಥವಾ ಹಳೆಯದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಆಲ್ಟ್ ನ್ಯೂಸ್ ಹೇಳಿದೆ.

ಒಟ್ಟಿನಲ್ಲಿ ದುಬೈಯ ಚಿತ್ರವನ್ನು ಮುಂದಿಟ್ಟು ಭಾರತದಲ್ಲಿ ಲಾಕ್‌ಡೌನ್ ಪ್ರೋಟೋಕಾಲ್ ಅನ್ನು ಮುಸ್ಲಿಮರು ಉಲ್ಲಂಘಿಸುತ್ತಿದ್ದಾರೆ ಎಂದು ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಮಾಡಿ ಕೋಮುದ್ವೇಷ ಹರಡುತ್ತಿರುವುದು ಆಲ್ಟ್‌ನ್ಯೂಸ್‌ ರಿಯಾಲಿಟಿ ಚೆಕ್‌ನಿಂದ ಬಯಲಾಗಿದೆ. ಆದರೆ, ಹೀಗೆ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸರ್ಕಾರ ಯಾವ ಕಾನೂನು ಕ್ರಮ ಜರುಗಿಸಲಿದೆ? ಎಂಬುದು ಮಾತ್ರ ಚಿದಂಬರ ರಹಸ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು, ಇದು ದುಬೈ ಕಟ್ಟಡಗಳೆ. ಶುಕ್ರವಾರ ಮಸೀದಿಯಲ್ಲಿ ಜಾಗ ಇಲ್ಲದೆ ಕಟ್ಟಡಗಳ ಮೇಲೆ ನಮಾಜ್ ಮಾಡುವ ದ್ರಶ್ಯಗಳು. ಎಲ್ಲ ಕಟ್ಟಡಗಳಿಗು AC ಅಳವಡಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...