Homeನಿಜವೋ ಸುಳ್ಳೋFact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

- Advertisement -
- Advertisement -

ಮುಸ್ಲಿಂ ಬಾಂಧವರು ಕಟ್ಟಡಗಳ ಟೆರೇಸ್‌ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚೆಗೆ ಭಾರೀ ವೈರಲ್ ಆಗುತ್ತಿದೆ. ಚಲನಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಚಿತ್ರವನ್ನು ಟ್ವೀಟ್ ಮಾಡಿ “ಇದು ಎಲ್ಲಿ ಎಂದು ಯಾರಿಗಾದರು ತಿಳಿದಿದೆಯೆ ?” ಎಂದು ಪ್ರಶ್ನೆ ಮಾಡಿದ್ದರು. ಈ ಟ್ವೀಟ್‌ ಅನ್ನು ಈವರೆಗೆ 6,000 ಬಾರಿ ರಿಟ್ವೀಟ್ ಮಾಡಲಾಗಿದೆ.

ಫೇಸ್‌ಬುಕ್ ನ ಹುಕ್ಕಾ ಔರ್ ಕಾಟ್ ಎಂಬ ಪೇಜ್ ನಲ್ಲಿ “ಇದು ಧರ್ಮ ಶ್ರದ್ಧೆ ಆಗಿರಬಹುದು ಆದರೆ ದೇಶದ್ರೋಹವಲ್ಲವೇ?” ಎಂಬ ಸಂದೇಶದೊಂದಿಗೆ ಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಅನ್ನು ಸಹ ಈವರೆಗೆ 440 ಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದಾರೆ. ಆದರೆ, ಈ ಚಿತ್ರದ ಮೂಲದ ಬಗ್ಗೆಯೋ? ಅಥವಾ ಈ ಚಿತ್ರ ತೆಗೆಯಲಾದ ಸ್ಥಳದ ಬಗ್ಗೆಯೋ? ಎಲ್ಲೂ ಉಲ್ಲೇಖಿಸಿಲ್ಲ. ಆದರೂ, ಅದು ಭಾರತದ ಮುಸ್ಲಿಂ ಸಮುದಾಯವನ್ನು ಸೂಚಿಸುತ್ತಿದೆ ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ.

ಕನ್ನಡದ ಕೆಲವು ಫೇಸ್‌ಬುಕ್ ಪೇಜ್‌ಗಳಲ್ಲೂ ಸಹ ಈ ಫೊಟೋವನ್ನು ಕನ್ನಡ ತಲೆ ಬರಹದ ಜೊತೆಗೆ ಹಂಚಿಕೊಳ್ಳಲಾಗಿದೆ. ನಮೋ ಮತ್ತು ಮೋದಿ ಕಿಂಗ್ ಡಮ್  ಎಂಬ ಫೇಸ್ ಬುಕ್ ಪೇಜ್‌ಗಳು  “ಆರೋಗ್ಯ, ಸಮಾಜ ಹಾಗೂ ವೈಜ್ಞಾನಿಕತೆ ಬಗ್ಗೆ ಕೆಲವರಿಗೆ ಮನವರಿಕೆ ಮಾಡುವುದು, ಕತ್ತೆ ಮುಂದೆ ಕಿನ್ನರಿ ಬಾರಿಸಿದಂತೆ” ಎಂದು ಬರೆದುಕೊಂಡಿವೆ. ಈ ಫೇಸ್‌ಬುಕ್ ಪೇಜಿನ ಪೋಸ್ಟ್‌ಗಳನ್ನು ಕ್ರಮವಾಗಿ,2100 ಹಾಗೂ 2800 ಜನರು ಹಂಚಿಕೊಂಡಿದ್ದಾರೆ.

ಇದಲ್ಲದೆ ಇದೇ ಚಿತ್ರವನ್ನು ಇಟ್ಟುಕೊಂಡು ಬೇರೆ ಬೇರೆ ಸಂದೇಶಗಳೊಂದಿಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಿಯಬಿಡಲಾಗುತ್ತಿದೆ.

ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸುವಂತೆ “ಆಲ್ಟ್ ನ್ಯೂಸ್” ಗೆ ಹಲವಾರು ದೂರುಗಳು ಬಂದುದರಿಂದ ಆಲ್ಟ್ ನ್ಯೂಸ್ ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ ಅದರ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದೆ. ಆಲ್ಟ್ ನ್ಯೂಸ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟ ನಡೆಸಿ ಇದನ್ನು ಈ ಹಿಂದೆ ಸೌದಿ ಅರೇಬಿಯಾ ಮತ್ತು ಕುವೈತ್‌ನಲ್ಲಿ ಹಂಚಿಕೊಳ್ಳಲಾಗಿರುವ ಫೋಟೋ ಎಂಬುದನ್ನು ಪತ್ತೆಹಚ್ಚಲಾಗಿದೆ. ಈ ದೇಶಗಳ ಅನೇಕ ವ್ಯಕ್ತಿಗಳು ಮಾಡಿದ ಟ್ವೀಟ್‌ಗಳನ್ನು ಆಲ್ಟ್ ನ್ಯೂಸ್ ಕಂಡುಕೊಂಡಿದೆ. ಆದರೆ ಸ್ಥಳವನ್ನು ಮಾತ್ರ ಕಂಡುಹಿಡಿಯಲು ಸಾಧ್ಯವಿಲ್ಲ.

ಚಿತ್ರವನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ “ಆಲ್ಟ್ ನ್ಯೂಸ್” ಮಸೀದಿ, ನೀರಿನ ಭಾಗ (ಬಹುಶಃ ಸಮುದ್ರ), ಹಿನ್ನಲೆಯಲ್ಲಿ ಗೋಚರಿಸುವ ದೋಣಿಯನ್ನು ಗೂಗಲಿನಲ್ಲಿ ಹುಡುಕಾಡಿದ “ಆಲ್ಟ್ ನ್ಯೂಸ್” ಅದು ದುಬೈ ಇರಬಹುದು ಎಂದು ಹೇಳಿದೆ.

ದುಬೈಯ ಕೊಲ್ಲಿಯ ಬಳಿ ಚಿತ್ರದ ಹಿನ್ನೆಲೆಯಲ್ಲಿ ಎತ್ತರದ ಕಟ್ಟಡವನ್ನು ಕಾಣಬಹುದು. ಯುಎಇಯ ದುಬೈ ಆರ್ಕಿಟೆಕ್ಚರಲ್ ಹೆರಿಟೇಜ್ ಇಲಾಖೆ ವೆಬ್ಸೈಟಿನಲ್ಲಿ ಗುಮ್ಮಟ ಮತ್ತು ಮಿನಾರಗಳ ರಚನೆಗಳು ಕಾಣಬಹುದಾಗಿದೆ. ಕೆಳಗೆ ತೋರಿಸಿದ ಹೋಲಿಕೆಯಂತೆ, ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ರಚನೆ ಮತ್ತು ಗೂಗಲ್‌ನಲ್ಲಿ ಲಭ್ಯವಿರುವ ವಾಸ್ತುಶಿಲ್ಪ ಹೆರಿಟೇಜ್ ಇಲಾಖೆಯ ಚಿತ್ರವನ್ನು ಗಮನಿಸಬಹುದಾಗಿದೆ.

ಇದಲ್ಲದೆ, ಈ ಕಟ್ಟಡಗಳ ಗೂಗಲ್ ಅರ್ಥ್ ವೀಕ್ಷಣೆಯಲ್ಲಿ ವೈರಲ್ ಚಿತ್ರದಲ್ಲಿ ಕಂಡುಬರುವ ಶೆಡ್ ಅಥವಾ ಕವರ್‌ಗಳನ್ನು ಕಾಣಬಹುದಾಗಿದೆ (ಶೆಡ್‌ಗಳನ್ನು ನೇರಳೆ ಪಟ್ಟೆಗಳಿಂದ ಹೈಲೈಟ್ ಮಾಡಲಾಗಿದೆ).

ಗೂಗಲ್ ಅರ್ಥ್‌ನ ಮತ್ತೊಂದು ಚಿತ್ರವು ಈ ಕಟ್ಟಡಗಳ ಮೇಲಿನ ನೋಟ ಮತ್ತು ಚಿತ್ರವನ್ನು ಚಿತ್ರೀಕರಿಸಿದ ಕೋನವನ್ನು ತೋರಿಸುತ್ತದೆ.

ಕೆಳಗಿನ ತೋರಿಸಿರುವ ಹೋಲಿಕೆಯಲ್ಲಿ, ಈ ಕಟ್ಟಡಗಳ ಹಿನ್ನೆಲೆಯಲ್ಲಿ ಕಂಡುಬರುವ ಶಾಪಿಂಗ್ ಮಾಲ್‌ಗೆ ಹೊಂದಾಣಿಕೆ ಮಾಡಲು ಮತ್ತು ಸ್ಥಳವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಮೇಲಿನ ಎಡಭಾಗದಲ್ಲಿರುವ ಚಿತ್ರವು ಗೂಗಲ್ ಸ್ಟ್ರೀಟ್ ವ್ಯೂ ಆಗಿದ್ದರೆ ಬಲಭಾಗದಲ್ಲಿ ಶಾಪಿಂಗ್ ಮಾಲ್‌ನ ಗೂಗಲ್ ಅರ್ಥ್ ವೀಕ್ಷಣೆ ಇದೆ. ಕೆಳಭಾಗದಲ್ಲಿ ಇರುವ ಚಿತ್ರವು ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ಶಾಪಿಂಗ್ ಮಾಲ್ ಅನ್ನು ತೋರಿಸುತ್ತದೆ.

ಈ ಚಿತ್ರದ ಸ್ಥಳವನ್ನು ಸರಿಯಾಗಿ ಪರಿಶೀಲಿಸಬಹುದಾದರೂ, ಇದು ಇತ್ತೀಚಿನದೇ ಅಥವಾ ಹಳೆಯದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಆಲ್ಟ್ ನ್ಯೂಸ್ ಹೇಳಿದೆ.

ಒಟ್ಟಿನಲ್ಲಿ ದುಬೈಯ ಚಿತ್ರವನ್ನು ಮುಂದಿಟ್ಟು ಭಾರತದಲ್ಲಿ ಲಾಕ್‌ಡೌನ್ ಪ್ರೋಟೋಕಾಲ್ ಅನ್ನು ಮುಸ್ಲಿಮರು ಉಲ್ಲಂಘಿಸುತ್ತಿದ್ದಾರೆ ಎಂದು ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಮಾಡಿ ಕೋಮುದ್ವೇಷ ಹರಡುತ್ತಿರುವುದು ಆಲ್ಟ್‌ನ್ಯೂಸ್‌ ರಿಯಾಲಿಟಿ ಚೆಕ್‌ನಿಂದ ಬಯಲಾಗಿದೆ. ಆದರೆ, ಹೀಗೆ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸರ್ಕಾರ ಯಾವ ಕಾನೂನು ಕ್ರಮ ಜರುಗಿಸಲಿದೆ? ಎಂಬುದು ಮಾತ್ರ ಚಿದಂಬರ ರಹಸ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು, ಇದು ದುಬೈ ಕಟ್ಟಡಗಳೆ. ಶುಕ್ರವಾರ ಮಸೀದಿಯಲ್ಲಿ ಜಾಗ ಇಲ್ಲದೆ ಕಟ್ಟಡಗಳ ಮೇಲೆ ನಮಾಜ್ ಮಾಡುವ ದ್ರಶ್ಯಗಳು. ಎಲ್ಲ ಕಟ್ಟಡಗಳಿಗು AC ಅಳವಡಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...