Homeನಿಜವೋ ಸುಳ್ಳೋFact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

Fact check: ಕಟ್ಟಡದ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವುದು ನಿಜವೇ??

- Advertisement -
- Advertisement -

ಮುಸ್ಲಿಂ ಬಾಂಧವರು ಕಟ್ಟಡಗಳ ಟೆರೇಸ್‌ ಮೇಲೆ ಒಟ್ಟಾಗಿ ನಮಾಜ್ ಮಾಡುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಇತ್ತೀಚೆಗೆ ಭಾರೀ ವೈರಲ್ ಆಗುತ್ತಿದೆ. ಚಲನಚಿತ್ರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಚಿತ್ರವನ್ನು ಟ್ವೀಟ್ ಮಾಡಿ “ಇದು ಎಲ್ಲಿ ಎಂದು ಯಾರಿಗಾದರು ತಿಳಿದಿದೆಯೆ ?” ಎಂದು ಪ್ರಶ್ನೆ ಮಾಡಿದ್ದರು. ಈ ಟ್ವೀಟ್‌ ಅನ್ನು ಈವರೆಗೆ 6,000 ಬಾರಿ ರಿಟ್ವೀಟ್ ಮಾಡಲಾಗಿದೆ.

ಫೇಸ್‌ಬುಕ್ ನ ಹುಕ್ಕಾ ಔರ್ ಕಾಟ್ ಎಂಬ ಪೇಜ್ ನಲ್ಲಿ “ಇದು ಧರ್ಮ ಶ್ರದ್ಧೆ ಆಗಿರಬಹುದು ಆದರೆ ದೇಶದ್ರೋಹವಲ್ಲವೇ?” ಎಂಬ ಸಂದೇಶದೊಂದಿಗೆ ಚಿತ್ರವನ್ನು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಅನ್ನು ಸಹ ಈವರೆಗೆ 440 ಕ್ಕೂ ಹೆಚ್ಚು ಜನ ಹಂಚಿಕೊಂಡಿದ್ದಾರೆ. ಆದರೆ, ಈ ಚಿತ್ರದ ಮೂಲದ ಬಗ್ಗೆಯೋ? ಅಥವಾ ಈ ಚಿತ್ರ ತೆಗೆಯಲಾದ ಸ್ಥಳದ ಬಗ್ಗೆಯೋ? ಎಲ್ಲೂ ಉಲ್ಲೇಖಿಸಿಲ್ಲ. ಆದರೂ, ಅದು ಭಾರತದ ಮುಸ್ಲಿಂ ಸಮುದಾಯವನ್ನು ಸೂಚಿಸುತ್ತಿದೆ ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ.

ಕನ್ನಡದ ಕೆಲವು ಫೇಸ್‌ಬುಕ್ ಪೇಜ್‌ಗಳಲ್ಲೂ ಸಹ ಈ ಫೊಟೋವನ್ನು ಕನ್ನಡ ತಲೆ ಬರಹದ ಜೊತೆಗೆ ಹಂಚಿಕೊಳ್ಳಲಾಗಿದೆ. ನಮೋ ಮತ್ತು ಮೋದಿ ಕಿಂಗ್ ಡಮ್  ಎಂಬ ಫೇಸ್ ಬುಕ್ ಪೇಜ್‌ಗಳು  “ಆರೋಗ್ಯ, ಸಮಾಜ ಹಾಗೂ ವೈಜ್ಞಾನಿಕತೆ ಬಗ್ಗೆ ಕೆಲವರಿಗೆ ಮನವರಿಕೆ ಮಾಡುವುದು, ಕತ್ತೆ ಮುಂದೆ ಕಿನ್ನರಿ ಬಾರಿಸಿದಂತೆ” ಎಂದು ಬರೆದುಕೊಂಡಿವೆ. ಈ ಫೇಸ್‌ಬುಕ್ ಪೇಜಿನ ಪೋಸ್ಟ್‌ಗಳನ್ನು ಕ್ರಮವಾಗಿ,2100 ಹಾಗೂ 2800 ಜನರು ಹಂಚಿಕೊಂಡಿದ್ದಾರೆ.

ಇದಲ್ಲದೆ ಇದೇ ಚಿತ್ರವನ್ನು ಇಟ್ಟುಕೊಂಡು ಬೇರೆ ಬೇರೆ ಸಂದೇಶಗಳೊಂದಿಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ನಿರಂತರವಾಗಿ ಹರಿಯಬಿಡಲಾಗುತ್ತಿದೆ.

ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸುವಂತೆ “ಆಲ್ಟ್ ನ್ಯೂಸ್” ಗೆ ಹಲವಾರು ದೂರುಗಳು ಬಂದುದರಿಂದ ಆಲ್ಟ್ ನ್ಯೂಸ್ ಈ ಚಿತ್ರದ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿ ಅದರ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದೆ. ಆಲ್ಟ್ ನ್ಯೂಸ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಹುಡುಕಾಟ ನಡೆಸಿ ಇದನ್ನು ಈ ಹಿಂದೆ ಸೌದಿ ಅರೇಬಿಯಾ ಮತ್ತು ಕುವೈತ್‌ನಲ್ಲಿ ಹಂಚಿಕೊಳ್ಳಲಾಗಿರುವ ಫೋಟೋ ಎಂಬುದನ್ನು ಪತ್ತೆಹಚ್ಚಲಾಗಿದೆ. ಈ ದೇಶಗಳ ಅನೇಕ ವ್ಯಕ್ತಿಗಳು ಮಾಡಿದ ಟ್ವೀಟ್‌ಗಳನ್ನು ಆಲ್ಟ್ ನ್ಯೂಸ್ ಕಂಡುಕೊಂಡಿದೆ. ಆದರೆ ಸ್ಥಳವನ್ನು ಮಾತ್ರ ಕಂಡುಹಿಡಿಯಲು ಸಾಧ್ಯವಿಲ್ಲ.

ಚಿತ್ರವನ್ನು ಸೂಕ್ಷ್ಮವಾಗಿ ವಿಶ್ಲೇಷಿಸಿದ “ಆಲ್ಟ್ ನ್ಯೂಸ್” ಮಸೀದಿ, ನೀರಿನ ಭಾಗ (ಬಹುಶಃ ಸಮುದ್ರ), ಹಿನ್ನಲೆಯಲ್ಲಿ ಗೋಚರಿಸುವ ದೋಣಿಯನ್ನು ಗೂಗಲಿನಲ್ಲಿ ಹುಡುಕಾಡಿದ “ಆಲ್ಟ್ ನ್ಯೂಸ್” ಅದು ದುಬೈ ಇರಬಹುದು ಎಂದು ಹೇಳಿದೆ.

ದುಬೈಯ ಕೊಲ್ಲಿಯ ಬಳಿ ಚಿತ್ರದ ಹಿನ್ನೆಲೆಯಲ್ಲಿ ಎತ್ತರದ ಕಟ್ಟಡವನ್ನು ಕಾಣಬಹುದು. ಯುಎಇಯ ದುಬೈ ಆರ್ಕಿಟೆಕ್ಚರಲ್ ಹೆರಿಟೇಜ್ ಇಲಾಖೆ ವೆಬ್ಸೈಟಿನಲ್ಲಿ ಗುಮ್ಮಟ ಮತ್ತು ಮಿನಾರಗಳ ರಚನೆಗಳು ಕಾಣಬಹುದಾಗಿದೆ. ಕೆಳಗೆ ತೋರಿಸಿದ ಹೋಲಿಕೆಯಂತೆ, ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ರಚನೆ ಮತ್ತು ಗೂಗಲ್‌ನಲ್ಲಿ ಲಭ್ಯವಿರುವ ವಾಸ್ತುಶಿಲ್ಪ ಹೆರಿಟೇಜ್ ಇಲಾಖೆಯ ಚಿತ್ರವನ್ನು ಗಮನಿಸಬಹುದಾಗಿದೆ.

ಇದಲ್ಲದೆ, ಈ ಕಟ್ಟಡಗಳ ಗೂಗಲ್ ಅರ್ಥ್ ವೀಕ್ಷಣೆಯಲ್ಲಿ ವೈರಲ್ ಚಿತ್ರದಲ್ಲಿ ಕಂಡುಬರುವ ಶೆಡ್ ಅಥವಾ ಕವರ್‌ಗಳನ್ನು ಕಾಣಬಹುದಾಗಿದೆ (ಶೆಡ್‌ಗಳನ್ನು ನೇರಳೆ ಪಟ್ಟೆಗಳಿಂದ ಹೈಲೈಟ್ ಮಾಡಲಾಗಿದೆ).

ಗೂಗಲ್ ಅರ್ಥ್‌ನ ಮತ್ತೊಂದು ಚಿತ್ರವು ಈ ಕಟ್ಟಡಗಳ ಮೇಲಿನ ನೋಟ ಮತ್ತು ಚಿತ್ರವನ್ನು ಚಿತ್ರೀಕರಿಸಿದ ಕೋನವನ್ನು ತೋರಿಸುತ್ತದೆ.

ಕೆಳಗಿನ ತೋರಿಸಿರುವ ಹೋಲಿಕೆಯಲ್ಲಿ, ಈ ಕಟ್ಟಡಗಳ ಹಿನ್ನೆಲೆಯಲ್ಲಿ ಕಂಡುಬರುವ ಶಾಪಿಂಗ್ ಮಾಲ್‌ಗೆ ಹೊಂದಾಣಿಕೆ ಮಾಡಲು ಮತ್ತು ಸ್ಥಳವನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಮೇಲಿನ ಎಡಭಾಗದಲ್ಲಿರುವ ಚಿತ್ರವು ಗೂಗಲ್ ಸ್ಟ್ರೀಟ್ ವ್ಯೂ ಆಗಿದ್ದರೆ ಬಲಭಾಗದಲ್ಲಿ ಶಾಪಿಂಗ್ ಮಾಲ್‌ನ ಗೂಗಲ್ ಅರ್ಥ್ ವೀಕ್ಷಣೆ ಇದೆ. ಕೆಳಭಾಗದಲ್ಲಿ ಇರುವ ಚಿತ್ರವು ವೈರಲ್ ಚಿತ್ರದಲ್ಲಿ ಕಂಡುಬರುವ ಅದೇ ಶಾಪಿಂಗ್ ಮಾಲ್ ಅನ್ನು ತೋರಿಸುತ್ತದೆ.

ಈ ಚಿತ್ರದ ಸ್ಥಳವನ್ನು ಸರಿಯಾಗಿ ಪರಿಶೀಲಿಸಬಹುದಾದರೂ, ಇದು ಇತ್ತೀಚಿನದೇ ಅಥವಾ ಹಳೆಯದೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಆಲ್ಟ್ ನ್ಯೂಸ್ ಹೇಳಿದೆ.

ಒಟ್ಟಿನಲ್ಲಿ ದುಬೈಯ ಚಿತ್ರವನ್ನು ಮುಂದಿಟ್ಟು ಭಾರತದಲ್ಲಿ ಲಾಕ್‌ಡೌನ್ ಪ್ರೋಟೋಕಾಲ್ ಅನ್ನು ಮುಸ್ಲಿಮರು ಉಲ್ಲಂಘಿಸುತ್ತಿದ್ದಾರೆ ಎಂದು ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಮಾಡಿ ಕೋಮುದ್ವೇಷ ಹರಡುತ್ತಿರುವುದು ಆಲ್ಟ್‌ನ್ಯೂಸ್‌ ರಿಯಾಲಿಟಿ ಚೆಕ್‌ನಿಂದ ಬಯಲಾಗಿದೆ. ಆದರೆ, ಹೀಗೆ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಸರ್ಕಾರ ಯಾವ ಕಾನೂನು ಕ್ರಮ ಜರುಗಿಸಲಿದೆ? ಎಂಬುದು ಮಾತ್ರ ಚಿದಂಬರ ರಹಸ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು, ಇದು ದುಬೈ ಕಟ್ಟಡಗಳೆ. ಶುಕ್ರವಾರ ಮಸೀದಿಯಲ್ಲಿ ಜಾಗ ಇಲ್ಲದೆ ಕಟ್ಟಡಗಳ ಮೇಲೆ ನಮಾಜ್ ಮಾಡುವ ದ್ರಶ್ಯಗಳು. ಎಲ್ಲ ಕಟ್ಟಡಗಳಿಗು AC ಅಳವಡಿಸಲಾಗಿದೆ.

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...