Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ...

FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುವುದು ನಿಜಾನಾ?

- Advertisement -
- Advertisement -

“ವಿಮಾನದಲ್ಲಿ ಟಾಯ್ಲೆಟ್‌ಗೆ ಹೋಗುವ ದಾರಿ ಬಂದ್ ಮಾಡಿ ನಮಾಜ್ ಮಾಡಲು ಶುರು ಮಾಡಿದ್ದರಿಂದ, ಸನಾತನಿ ಮಹಿಳೆಯೊಬ್ಬರು ಶಿವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ.. ಜೈ ಶ್ರೀ ರಾಮ್” ಎಂಬ ಹೇಳಿಕೆಯಿರುವ ಪೋಸ್ಟ್‌ವೊಂದು ಫೇಸ್‌ಬುಕ್  ಮತ್ತು ಎಕ್ಸ್‌ನಲ್ಲಿ (ಟ್ವಿಟರ್‌ನಲ್ಲಿ) ಸಖತ್‌ ವೈರಲ್ ಆಗುತ್ತಿದೆ.

ವಿಮಾನದ ಒಳಗೆ ಬಿಳಿ ಕೋಟ್ ಮತ್ತು ಗುಲಾಬಿ ಶರ್ಟ್ ಧರಿಸಿದ ಮಹಿಳೆಯೊಬ್ಬರು ಭಕ್ತಿ ಗೀತೆ ಹಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಮಾನದಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುವುದನ್ನು ನೋಡಿದ ಹಿಂದೂ ಮಹಿಳೆ ಪ್ರತಿಯಾಗಿ ಶಿವ ಸ್ತೋತ್ರ ಹಾಡಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಈ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದು, ಬಾಲಿವುಡ್‌ನ ಕೇದಾರನಾಥ್ ಸಿನಿಮಾದ ನಮೋ ನಮೋ ಶಂಕರ್ ಹಾಡನ್ನು ಮಹಿಳೆ ಹಾಡುತ್ತಿದ್ದಾರೆ.

ನಾಗೇಶ್ ಪ್ರೀತಮ್ ಎಂಬ ಎಕ್ಸ್ ಬಳಕೆದಾರರು ಸೆಪ್ಟೆಂಬರ್ 9, 2024 ರಂದು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘ವಿಮಾನದಲ್ಲಿ ನಮಾಜ್ ಮಾಡಲು ಶುರು ಮಾಡಿದರು, ನಂತರ ಸನಾತನಿ ಮಹಿಳೆಯೊಬ್ಬಳು ಮಹಾದೇವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ..! ಜೈ ಶ್ರೀ ರಾಮ್’ ಎಂದು ಬರೆದುಕೊಂಡಿದ್ದಾರೆ.

ಹಾಗೆಯೆ ಫೇಸ್​ಬುಕ್​ನಲ್ಲಿ ದ್ರೋಣ ಎಂಬವರು ‘ವಿಮಾನದಲ್ಲಿ ನಮಾಜ್ ಮಾಡುತಿದ್ದದ್ದನ್ನ ನೋಡಿ ಶಿವನ ನಾಮ ಜಪಿಸಿದ ಹಿಂದೂ ಸಹೋದರಿ. ನಿನ್ನ ಧೈರ್ಯ ಮೆಚ್ಚುಲೇಬೇಕು ಹರ್ ಹರ್ ಮಹಾದೇವ’ ಎಂದು ಬರೆದು ಇದೇ ವೀಡಿಯೊ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಇದೇ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಮಾದಲ್ಲಿ ನಮಾಜ್‌ ಮಾಡಿದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆಯೊಬ್ಬರು ಮಹಾದೇವನ ಸ್ತೋತ್ರ ಹಾಡಲು ಶುರುಮಾಡಿದರು ಎಂದು ಹೇಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಿಡಿಯೋದಲ್ಲಿ ಹಾಡುತ್ತಿರುವ ಮಹಿಳೆ ಕಲಾವಿದೆ ಮತ್ತು ಗಾಯಕಿ ನಿಶಾ ಶಿವದಾಸನಿ ಎಂಬ ಮಾಹಿತಿ ಲಭ್ಯವಾಗಿದೆ.

ನಿಶಾ ಅವರು ಇದೇ ವೀಡಿಯೊವನ್ನು ಮತ್ತೊಂದು ಆ್ಯಂಗಲ್​ನಿಂದ ತಮ್ಮ ನಿಶಾ ಶಿವದಾಸನಿ ಯೂಟ್ಯೂಬ್ ಚಾನೆಲ್​ನಲ್ಲಿ ಮಾರ್ಚ್ 8, 2024 ರಂದು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ರ ಶುಭಾಶಯಗಳು | ನಿಶಾ ಶಿವದಾಸನಿ | ಇಂಡಿಗೋ ಏರ್‌ಲೈನ್ ಧನ್ಯವಾದಗಳು” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ನಿಶಾ ಶಿವದಾಸನಿ ಅವರು ವಿಮಾನದಲ್ಲಿರುವ ಎಲ್ಲರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ಹಾಡು ಹಾಡಿದ್ದಾರೆ. ಈ ಹಾಡಿಗೆ ವಿಮಾನದಲ್ಲಿ ಕುಳಿತಿರುವ ಇತರೆ ಪ್ರಯಾಣಿಕರು ಕೂಡ ಪ್ರೋತ್ಸಾಹ ನೀಡುತ್ತಿರುವುದನ್ನು ನೋಡಬಹುದು.

 

31 ಮಾರ್ಚ್, 2024 ರಂದು ಡ್ರಂಕ್ ಜರ್ನಲಿಸ್ಟ್‌ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿರುವುದು ಲಭ್ಯವಾಗಿದೆ.

ಇದೀಗ ಈ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ವೈರಲ್ ಆಗುತ್ತಿರುವುದನ್ನು ಗಮನಿಸಿದ ಡ್ರಂಕ್‌ ಜರ್ನಲಿಸ್ಟ್‌ ತಂಡವು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ‘ಈ ವಿಡಿಯೋಗೂ ನಮಾಜ್​ಗೂ ಯಾವುದೇ ಸಂಬಂಧವಿಲ್ಲ. ಈ ಮಹಿಳೆ ಭಜನೆಯನ್ನು ಹಾಡಿರುವ ವಿಡಿಯೋ ಇದಾಗಿದೆ ಮತ್ತು ಇದಕ್ಕೂ ಮುಸ್ಲಿಮರಿಗೂ ನಮಾಜ್‌ಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದೆ.

ಹಾಗೆಯೆ ನಾವು ಇತ್ತೀಚಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಿದ ಬಗ್ಗೆ ಸುದ್ದಿ ಪ್ರಕಟವಾಗಿದೆಯೆ ಎಂಬ ಗೂಗಲ್ ಸರ್ಚ್ ಮಾಡಿದಾಗ, ಈ ಕುರಿತು ಯಾವುದೇ ವರದಿಗಳು ಲಭ್ಯವಾಗಿಲ್. ಇನ್ನಷ್ಟು ಖಚಿತ ಮಾಹಿತಿಗಾಗಿ  ಬೆಂಗಳೂರಿನ ಇಂಡಿಗೋ ಏರ್‌ಲೈನ್ಸ್ ಅನ್ನು ನ್ಯೂಸ್‌ ಮೀಟರ್‌ ತಂಡ ಸಂಪರ್ಕಿಸಿದಾಗ, ಇತ್ತೀಚಿಗೆ ವಿಮಾನದಲ್ಲಿ ನಮಾಜ್ ಮಾಡಿರುವಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್ ಪ್ರತಿಕ್ರಿಯಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರು ವಿಮಾನದಲ್ಲಿ ಭಕ್ತಿಗೀತೆ ಹಾಡುವ ವಿಡಿಯೋವನ್ನು, ಮುಸ್ಲಿಂ ವ್ಯಕ್ತಿಯೊಬ್ಬರು ವಿಮಾನದಲ್ಲಿ ನಮಾಜ್ ಮಾಡಿದ್ದಕ್ಕೆ ಪ್ರತಿಯಾಗಿ ಮಹಿಳೆಯೊಬ್ಬರು ಶಿವ ಸ್ತೋತ್ರ ಹಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...