Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ...

FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುವುದು ನಿಜಾನಾ?

- Advertisement -
- Advertisement -

“ವಿಮಾನದಲ್ಲಿ ಟಾಯ್ಲೆಟ್‌ಗೆ ಹೋಗುವ ದಾರಿ ಬಂದ್ ಮಾಡಿ ನಮಾಜ್ ಮಾಡಲು ಶುರು ಮಾಡಿದ್ದರಿಂದ, ಸನಾತನಿ ಮಹಿಳೆಯೊಬ್ಬರು ಶಿವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ.. ಜೈ ಶ್ರೀ ರಾಮ್” ಎಂಬ ಹೇಳಿಕೆಯಿರುವ ಪೋಸ್ಟ್‌ವೊಂದು ಫೇಸ್‌ಬುಕ್  ಮತ್ತು ಎಕ್ಸ್‌ನಲ್ಲಿ (ಟ್ವಿಟರ್‌ನಲ್ಲಿ) ಸಖತ್‌ ವೈರಲ್ ಆಗುತ್ತಿದೆ.

ವಿಮಾನದ ಒಳಗೆ ಬಿಳಿ ಕೋಟ್ ಮತ್ತು ಗುಲಾಬಿ ಶರ್ಟ್ ಧರಿಸಿದ ಮಹಿಳೆಯೊಬ್ಬರು ಭಕ್ತಿ ಗೀತೆ ಹಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಮಾನದಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುವುದನ್ನು ನೋಡಿದ ಹಿಂದೂ ಮಹಿಳೆ ಪ್ರತಿಯಾಗಿ ಶಿವ ಸ್ತೋತ್ರ ಹಾಡಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಈ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದು, ಬಾಲಿವುಡ್‌ನ ಕೇದಾರನಾಥ್ ಸಿನಿಮಾದ ನಮೋ ನಮೋ ಶಂಕರ್ ಹಾಡನ್ನು ಮಹಿಳೆ ಹಾಡುತ್ತಿದ್ದಾರೆ.

ನಾಗೇಶ್ ಪ್ರೀತಮ್ ಎಂಬ ಎಕ್ಸ್ ಬಳಕೆದಾರರು ಸೆಪ್ಟೆಂಬರ್ 9, 2024 ರಂದು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘ವಿಮಾನದಲ್ಲಿ ನಮಾಜ್ ಮಾಡಲು ಶುರು ಮಾಡಿದರು, ನಂತರ ಸನಾತನಿ ಮಹಿಳೆಯೊಬ್ಬಳು ಮಹಾದೇವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ..! ಜೈ ಶ್ರೀ ರಾಮ್’ ಎಂದು ಬರೆದುಕೊಂಡಿದ್ದಾರೆ.

ಹಾಗೆಯೆ ಫೇಸ್​ಬುಕ್​ನಲ್ಲಿ ದ್ರೋಣ ಎಂಬವರು ‘ವಿಮಾನದಲ್ಲಿ ನಮಾಜ್ ಮಾಡುತಿದ್ದದ್ದನ್ನ ನೋಡಿ ಶಿವನ ನಾಮ ಜಪಿಸಿದ ಹಿಂದೂ ಸಹೋದರಿ. ನಿನ್ನ ಧೈರ್ಯ ಮೆಚ್ಚುಲೇಬೇಕು ಹರ್ ಹರ್ ಮಹಾದೇವ’ ಎಂದು ಬರೆದು ಇದೇ ವೀಡಿಯೊ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಇದೇ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಮಾದಲ್ಲಿ ನಮಾಜ್‌ ಮಾಡಿದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆಯೊಬ್ಬರು ಮಹಾದೇವನ ಸ್ತೋತ್ರ ಹಾಡಲು ಶುರುಮಾಡಿದರು ಎಂದು ಹೇಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಿಡಿಯೋದಲ್ಲಿ ಹಾಡುತ್ತಿರುವ ಮಹಿಳೆ ಕಲಾವಿದೆ ಮತ್ತು ಗಾಯಕಿ ನಿಶಾ ಶಿವದಾಸನಿ ಎಂಬ ಮಾಹಿತಿ ಲಭ್ಯವಾಗಿದೆ.

ನಿಶಾ ಅವರು ಇದೇ ವೀಡಿಯೊವನ್ನು ಮತ್ತೊಂದು ಆ್ಯಂಗಲ್​ನಿಂದ ತಮ್ಮ ನಿಶಾ ಶಿವದಾಸನಿ ಯೂಟ್ಯೂಬ್ ಚಾನೆಲ್​ನಲ್ಲಿ ಮಾರ್ಚ್ 8, 2024 ರಂದು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ರ ಶುಭಾಶಯಗಳು | ನಿಶಾ ಶಿವದಾಸನಿ | ಇಂಡಿಗೋ ಏರ್‌ಲೈನ್ ಧನ್ಯವಾದಗಳು” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ನಿಶಾ ಶಿವದಾಸನಿ ಅವರು ವಿಮಾನದಲ್ಲಿರುವ ಎಲ್ಲರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ಹಾಡು ಹಾಡಿದ್ದಾರೆ. ಈ ಹಾಡಿಗೆ ವಿಮಾನದಲ್ಲಿ ಕುಳಿತಿರುವ ಇತರೆ ಪ್ರಯಾಣಿಕರು ಕೂಡ ಪ್ರೋತ್ಸಾಹ ನೀಡುತ್ತಿರುವುದನ್ನು ನೋಡಬಹುದು.

 

31 ಮಾರ್ಚ್, 2024 ರಂದು ಡ್ರಂಕ್ ಜರ್ನಲಿಸ್ಟ್‌ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿರುವುದು ಲಭ್ಯವಾಗಿದೆ.

ಇದೀಗ ಈ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ವೈರಲ್ ಆಗುತ್ತಿರುವುದನ್ನು ಗಮನಿಸಿದ ಡ್ರಂಕ್‌ ಜರ್ನಲಿಸ್ಟ್‌ ತಂಡವು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ‘ಈ ವಿಡಿಯೋಗೂ ನಮಾಜ್​ಗೂ ಯಾವುದೇ ಸಂಬಂಧವಿಲ್ಲ. ಈ ಮಹಿಳೆ ಭಜನೆಯನ್ನು ಹಾಡಿರುವ ವಿಡಿಯೋ ಇದಾಗಿದೆ ಮತ್ತು ಇದಕ್ಕೂ ಮುಸ್ಲಿಮರಿಗೂ ನಮಾಜ್‌ಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದೆ.

ಹಾಗೆಯೆ ನಾವು ಇತ್ತೀಚಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಿದ ಬಗ್ಗೆ ಸುದ್ದಿ ಪ್ರಕಟವಾಗಿದೆಯೆ ಎಂಬ ಗೂಗಲ್ ಸರ್ಚ್ ಮಾಡಿದಾಗ, ಈ ಕುರಿತು ಯಾವುದೇ ವರದಿಗಳು ಲಭ್ಯವಾಗಿಲ್. ಇನ್ನಷ್ಟು ಖಚಿತ ಮಾಹಿತಿಗಾಗಿ  ಬೆಂಗಳೂರಿನ ಇಂಡಿಗೋ ಏರ್‌ಲೈನ್ಸ್ ಅನ್ನು ನ್ಯೂಸ್‌ ಮೀಟರ್‌ ತಂಡ ಸಂಪರ್ಕಿಸಿದಾಗ, ಇತ್ತೀಚಿಗೆ ವಿಮಾನದಲ್ಲಿ ನಮಾಜ್ ಮಾಡಿರುವಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್ ಪ್ರತಿಕ್ರಿಯಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರು ವಿಮಾನದಲ್ಲಿ ಭಕ್ತಿಗೀತೆ ಹಾಡುವ ವಿಡಿಯೋವನ್ನು, ಮುಸ್ಲಿಂ ವ್ಯಕ್ತಿಯೊಬ್ಬರು ವಿಮಾನದಲ್ಲಿ ನಮಾಜ್ ಮಾಡಿದ್ದಕ್ಕೆ ಪ್ರತಿಯಾಗಿ ಮಹಿಳೆಯೊಬ್ಬರು ಶಿವ ಸ್ತೋತ್ರ ಹಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...