Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ...

FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುವುದು ನಿಜಾನಾ?

- Advertisement -
- Advertisement -

“ವಿಮಾನದಲ್ಲಿ ಟಾಯ್ಲೆಟ್‌ಗೆ ಹೋಗುವ ದಾರಿ ಬಂದ್ ಮಾಡಿ ನಮಾಜ್ ಮಾಡಲು ಶುರು ಮಾಡಿದ್ದರಿಂದ, ಸನಾತನಿ ಮಹಿಳೆಯೊಬ್ಬರು ಶಿವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ.. ಜೈ ಶ್ರೀ ರಾಮ್” ಎಂಬ ಹೇಳಿಕೆಯಿರುವ ಪೋಸ್ಟ್‌ವೊಂದು ಫೇಸ್‌ಬುಕ್  ಮತ್ತು ಎಕ್ಸ್‌ನಲ್ಲಿ (ಟ್ವಿಟರ್‌ನಲ್ಲಿ) ಸಖತ್‌ ವೈರಲ್ ಆಗುತ್ತಿದೆ.

ವಿಮಾನದ ಒಳಗೆ ಬಿಳಿ ಕೋಟ್ ಮತ್ತು ಗುಲಾಬಿ ಶರ್ಟ್ ಧರಿಸಿದ ಮಹಿಳೆಯೊಬ್ಬರು ಭಕ್ತಿ ಗೀತೆ ಹಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಮಾನದಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುವುದನ್ನು ನೋಡಿದ ಹಿಂದೂ ಮಹಿಳೆ ಪ್ರತಿಯಾಗಿ ಶಿವ ಸ್ತೋತ್ರ ಹಾಡಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಈ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದು, ಬಾಲಿವುಡ್‌ನ ಕೇದಾರನಾಥ್ ಸಿನಿಮಾದ ನಮೋ ನಮೋ ಶಂಕರ್ ಹಾಡನ್ನು ಮಹಿಳೆ ಹಾಡುತ್ತಿದ್ದಾರೆ.

ನಾಗೇಶ್ ಪ್ರೀತಮ್ ಎಂಬ ಎಕ್ಸ್ ಬಳಕೆದಾರರು ಸೆಪ್ಟೆಂಬರ್ 9, 2024 ರಂದು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘ವಿಮಾನದಲ್ಲಿ ನಮಾಜ್ ಮಾಡಲು ಶುರು ಮಾಡಿದರು, ನಂತರ ಸನಾತನಿ ಮಹಿಳೆಯೊಬ್ಬಳು ಮಹಾದೇವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ..! ಜೈ ಶ್ರೀ ರಾಮ್’ ಎಂದು ಬರೆದುಕೊಂಡಿದ್ದಾರೆ.

ಹಾಗೆಯೆ ಫೇಸ್​ಬುಕ್​ನಲ್ಲಿ ದ್ರೋಣ ಎಂಬವರು ‘ವಿಮಾನದಲ್ಲಿ ನಮಾಜ್ ಮಾಡುತಿದ್ದದ್ದನ್ನ ನೋಡಿ ಶಿವನ ನಾಮ ಜಪಿಸಿದ ಹಿಂದೂ ಸಹೋದರಿ. ನಿನ್ನ ಧೈರ್ಯ ಮೆಚ್ಚುಲೇಬೇಕು ಹರ್ ಹರ್ ಮಹಾದೇವ’ ಎಂದು ಬರೆದು ಇದೇ ವೀಡಿಯೊ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಇದೇ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಮಾದಲ್ಲಿ ನಮಾಜ್‌ ಮಾಡಿದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆಯೊಬ್ಬರು ಮಹಾದೇವನ ಸ್ತೋತ್ರ ಹಾಡಲು ಶುರುಮಾಡಿದರು ಎಂದು ಹೇಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಿಡಿಯೋದಲ್ಲಿ ಹಾಡುತ್ತಿರುವ ಮಹಿಳೆ ಕಲಾವಿದೆ ಮತ್ತು ಗಾಯಕಿ ನಿಶಾ ಶಿವದಾಸನಿ ಎಂಬ ಮಾಹಿತಿ ಲಭ್ಯವಾಗಿದೆ.

ನಿಶಾ ಅವರು ಇದೇ ವೀಡಿಯೊವನ್ನು ಮತ್ತೊಂದು ಆ್ಯಂಗಲ್​ನಿಂದ ತಮ್ಮ ನಿಶಾ ಶಿವದಾಸನಿ ಯೂಟ್ಯೂಬ್ ಚಾನೆಲ್​ನಲ್ಲಿ ಮಾರ್ಚ್ 8, 2024 ರಂದು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ರ ಶುಭಾಶಯಗಳು | ನಿಶಾ ಶಿವದಾಸನಿ | ಇಂಡಿಗೋ ಏರ್‌ಲೈನ್ ಧನ್ಯವಾದಗಳು” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ನಿಶಾ ಶಿವದಾಸನಿ ಅವರು ವಿಮಾನದಲ್ಲಿರುವ ಎಲ್ಲರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ಹಾಡು ಹಾಡಿದ್ದಾರೆ. ಈ ಹಾಡಿಗೆ ವಿಮಾನದಲ್ಲಿ ಕುಳಿತಿರುವ ಇತರೆ ಪ್ರಯಾಣಿಕರು ಕೂಡ ಪ್ರೋತ್ಸಾಹ ನೀಡುತ್ತಿರುವುದನ್ನು ನೋಡಬಹುದು.

 

31 ಮಾರ್ಚ್, 2024 ರಂದು ಡ್ರಂಕ್ ಜರ್ನಲಿಸ್ಟ್‌ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿರುವುದು ಲಭ್ಯವಾಗಿದೆ.

ಇದೀಗ ಈ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ವೈರಲ್ ಆಗುತ್ತಿರುವುದನ್ನು ಗಮನಿಸಿದ ಡ್ರಂಕ್‌ ಜರ್ನಲಿಸ್ಟ್‌ ತಂಡವು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ‘ಈ ವಿಡಿಯೋಗೂ ನಮಾಜ್​ಗೂ ಯಾವುದೇ ಸಂಬಂಧವಿಲ್ಲ. ಈ ಮಹಿಳೆ ಭಜನೆಯನ್ನು ಹಾಡಿರುವ ವಿಡಿಯೋ ಇದಾಗಿದೆ ಮತ್ತು ಇದಕ್ಕೂ ಮುಸ್ಲಿಮರಿಗೂ ನಮಾಜ್‌ಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದೆ.

ಹಾಗೆಯೆ ನಾವು ಇತ್ತೀಚಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಿದ ಬಗ್ಗೆ ಸುದ್ದಿ ಪ್ರಕಟವಾಗಿದೆಯೆ ಎಂಬ ಗೂಗಲ್ ಸರ್ಚ್ ಮಾಡಿದಾಗ, ಈ ಕುರಿತು ಯಾವುದೇ ವರದಿಗಳು ಲಭ್ಯವಾಗಿಲ್. ಇನ್ನಷ್ಟು ಖಚಿತ ಮಾಹಿತಿಗಾಗಿ  ಬೆಂಗಳೂರಿನ ಇಂಡಿಗೋ ಏರ್‌ಲೈನ್ಸ್ ಅನ್ನು ನ್ಯೂಸ್‌ ಮೀಟರ್‌ ತಂಡ ಸಂಪರ್ಕಿಸಿದಾಗ, ಇತ್ತೀಚಿಗೆ ವಿಮಾನದಲ್ಲಿ ನಮಾಜ್ ಮಾಡಿರುವಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್ ಪ್ರತಿಕ್ರಿಯಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರು ವಿಮಾನದಲ್ಲಿ ಭಕ್ತಿಗೀತೆ ಹಾಡುವ ವಿಡಿಯೋವನ್ನು, ಮುಸ್ಲಿಂ ವ್ಯಕ್ತಿಯೊಬ್ಬರು ವಿಮಾನದಲ್ಲಿ ನಮಾಜ್ ಮಾಡಿದ್ದಕ್ಕೆ ಪ್ರತಿಯಾಗಿ ಮಹಿಳೆಯೊಬ್ಬರು ಶಿವ ಸ್ತೋತ್ರ ಹಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...