Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ...

FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುವುದು ನಿಜಾನಾ?

- Advertisement -
- Advertisement -

“ವಿಮಾನದಲ್ಲಿ ಟಾಯ್ಲೆಟ್‌ಗೆ ಹೋಗುವ ದಾರಿ ಬಂದ್ ಮಾಡಿ ನಮಾಜ್ ಮಾಡಲು ಶುರು ಮಾಡಿದ್ದರಿಂದ, ಸನಾತನಿ ಮಹಿಳೆಯೊಬ್ಬರು ಶಿವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ.. ಜೈ ಶ್ರೀ ರಾಮ್” ಎಂಬ ಹೇಳಿಕೆಯಿರುವ ಪೋಸ್ಟ್‌ವೊಂದು ಫೇಸ್‌ಬುಕ್  ಮತ್ತು ಎಕ್ಸ್‌ನಲ್ಲಿ (ಟ್ವಿಟರ್‌ನಲ್ಲಿ) ಸಖತ್‌ ವೈರಲ್ ಆಗುತ್ತಿದೆ.

ವಿಮಾನದ ಒಳಗೆ ಬಿಳಿ ಕೋಟ್ ಮತ್ತು ಗುಲಾಬಿ ಶರ್ಟ್ ಧರಿಸಿದ ಮಹಿಳೆಯೊಬ್ಬರು ಭಕ್ತಿ ಗೀತೆ ಹಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಮಾನದಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುವುದನ್ನು ನೋಡಿದ ಹಿಂದೂ ಮಹಿಳೆ ಪ್ರತಿಯಾಗಿ ಶಿವ ಸ್ತೋತ್ರ ಹಾಡಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಈ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದು, ಬಾಲಿವುಡ್‌ನ ಕೇದಾರನಾಥ್ ಸಿನಿಮಾದ ನಮೋ ನಮೋ ಶಂಕರ್ ಹಾಡನ್ನು ಮಹಿಳೆ ಹಾಡುತ್ತಿದ್ದಾರೆ.

ನಾಗೇಶ್ ಪ್ರೀತಮ್ ಎಂಬ ಎಕ್ಸ್ ಬಳಕೆದಾರರು ಸೆಪ್ಟೆಂಬರ್ 9, 2024 ರಂದು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘ವಿಮಾನದಲ್ಲಿ ನಮಾಜ್ ಮಾಡಲು ಶುರು ಮಾಡಿದರು, ನಂತರ ಸನಾತನಿ ಮಹಿಳೆಯೊಬ್ಬಳು ಮಹಾದೇವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ..! ಜೈ ಶ್ರೀ ರಾಮ್’ ಎಂದು ಬರೆದುಕೊಂಡಿದ್ದಾರೆ.

ಹಾಗೆಯೆ ಫೇಸ್​ಬುಕ್​ನಲ್ಲಿ ದ್ರೋಣ ಎಂಬವರು ‘ವಿಮಾನದಲ್ಲಿ ನಮಾಜ್ ಮಾಡುತಿದ್ದದ್ದನ್ನ ನೋಡಿ ಶಿವನ ನಾಮ ಜಪಿಸಿದ ಹಿಂದೂ ಸಹೋದರಿ. ನಿನ್ನ ಧೈರ್ಯ ಮೆಚ್ಚುಲೇಬೇಕು ಹರ್ ಹರ್ ಮಹಾದೇವ’ ಎಂದು ಬರೆದು ಇದೇ ವೀಡಿಯೊ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಇದೇ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಮಾದಲ್ಲಿ ನಮಾಜ್‌ ಮಾಡಿದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆಯೊಬ್ಬರು ಮಹಾದೇವನ ಸ್ತೋತ್ರ ಹಾಡಲು ಶುರುಮಾಡಿದರು ಎಂದು ಹೇಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಿಡಿಯೋದಲ್ಲಿ ಹಾಡುತ್ತಿರುವ ಮಹಿಳೆ ಕಲಾವಿದೆ ಮತ್ತು ಗಾಯಕಿ ನಿಶಾ ಶಿವದಾಸನಿ ಎಂಬ ಮಾಹಿತಿ ಲಭ್ಯವಾಗಿದೆ.

ನಿಶಾ ಅವರು ಇದೇ ವೀಡಿಯೊವನ್ನು ಮತ್ತೊಂದು ಆ್ಯಂಗಲ್​ನಿಂದ ತಮ್ಮ ನಿಶಾ ಶಿವದಾಸನಿ ಯೂಟ್ಯೂಬ್ ಚಾನೆಲ್​ನಲ್ಲಿ ಮಾರ್ಚ್ 8, 2024 ರಂದು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ರ ಶುಭಾಶಯಗಳು | ನಿಶಾ ಶಿವದಾಸನಿ | ಇಂಡಿಗೋ ಏರ್‌ಲೈನ್ ಧನ್ಯವಾದಗಳು” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ನಿಶಾ ಶಿವದಾಸನಿ ಅವರು ವಿಮಾನದಲ್ಲಿರುವ ಎಲ್ಲರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ಹಾಡು ಹಾಡಿದ್ದಾರೆ. ಈ ಹಾಡಿಗೆ ವಿಮಾನದಲ್ಲಿ ಕುಳಿತಿರುವ ಇತರೆ ಪ್ರಯಾಣಿಕರು ಕೂಡ ಪ್ರೋತ್ಸಾಹ ನೀಡುತ್ತಿರುವುದನ್ನು ನೋಡಬಹುದು.

 

31 ಮಾರ್ಚ್, 2024 ರಂದು ಡ್ರಂಕ್ ಜರ್ನಲಿಸ್ಟ್‌ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿರುವುದು ಲಭ್ಯವಾಗಿದೆ.

ಇದೀಗ ಈ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ವೈರಲ್ ಆಗುತ್ತಿರುವುದನ್ನು ಗಮನಿಸಿದ ಡ್ರಂಕ್‌ ಜರ್ನಲಿಸ್ಟ್‌ ತಂಡವು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ‘ಈ ವಿಡಿಯೋಗೂ ನಮಾಜ್​ಗೂ ಯಾವುದೇ ಸಂಬಂಧವಿಲ್ಲ. ಈ ಮಹಿಳೆ ಭಜನೆಯನ್ನು ಹಾಡಿರುವ ವಿಡಿಯೋ ಇದಾಗಿದೆ ಮತ್ತು ಇದಕ್ಕೂ ಮುಸ್ಲಿಮರಿಗೂ ನಮಾಜ್‌ಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದೆ.

ಹಾಗೆಯೆ ನಾವು ಇತ್ತೀಚಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಿದ ಬಗ್ಗೆ ಸುದ್ದಿ ಪ್ರಕಟವಾಗಿದೆಯೆ ಎಂಬ ಗೂಗಲ್ ಸರ್ಚ್ ಮಾಡಿದಾಗ, ಈ ಕುರಿತು ಯಾವುದೇ ವರದಿಗಳು ಲಭ್ಯವಾಗಿಲ್. ಇನ್ನಷ್ಟು ಖಚಿತ ಮಾಹಿತಿಗಾಗಿ  ಬೆಂಗಳೂರಿನ ಇಂಡಿಗೋ ಏರ್‌ಲೈನ್ಸ್ ಅನ್ನು ನ್ಯೂಸ್‌ ಮೀಟರ್‌ ತಂಡ ಸಂಪರ್ಕಿಸಿದಾಗ, ಇತ್ತೀಚಿಗೆ ವಿಮಾನದಲ್ಲಿ ನಮಾಜ್ ಮಾಡಿರುವಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್ ಪ್ರತಿಕ್ರಿಯಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರು ವಿಮಾನದಲ್ಲಿ ಭಕ್ತಿಗೀತೆ ಹಾಡುವ ವಿಡಿಯೋವನ್ನು, ಮುಸ್ಲಿಂ ವ್ಯಕ್ತಿಯೊಬ್ಬರು ವಿಮಾನದಲ್ಲಿ ನಮಾಜ್ ಮಾಡಿದ್ದಕ್ಕೆ ಪ್ರತಿಯಾಗಿ ಮಹಿಳೆಯೊಬ್ಬರು ಶಿವ ಸ್ತೋತ್ರ ಹಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...