Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ...

FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುವುದು ನಿಜಾನಾ?

- Advertisement -
- Advertisement -

“ವಿಮಾನದಲ್ಲಿ ಟಾಯ್ಲೆಟ್‌ಗೆ ಹೋಗುವ ದಾರಿ ಬಂದ್ ಮಾಡಿ ನಮಾಜ್ ಮಾಡಲು ಶುರು ಮಾಡಿದ್ದರಿಂದ, ಸನಾತನಿ ಮಹಿಳೆಯೊಬ್ಬರು ಶಿವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ.. ಜೈ ಶ್ರೀ ರಾಮ್” ಎಂಬ ಹೇಳಿಕೆಯಿರುವ ಪೋಸ್ಟ್‌ವೊಂದು ಫೇಸ್‌ಬುಕ್  ಮತ್ತು ಎಕ್ಸ್‌ನಲ್ಲಿ (ಟ್ವಿಟರ್‌ನಲ್ಲಿ) ಸಖತ್‌ ವೈರಲ್ ಆಗುತ್ತಿದೆ.

ವಿಮಾನದ ಒಳಗೆ ಬಿಳಿ ಕೋಟ್ ಮತ್ತು ಗುಲಾಬಿ ಶರ್ಟ್ ಧರಿಸಿದ ಮಹಿಳೆಯೊಬ್ಬರು ಭಕ್ತಿ ಗೀತೆ ಹಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಮಾನದಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುವುದನ್ನು ನೋಡಿದ ಹಿಂದೂ ಮಹಿಳೆ ಪ್ರತಿಯಾಗಿ ಶಿವ ಸ್ತೋತ್ರ ಹಾಡಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಈ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದು, ಬಾಲಿವುಡ್‌ನ ಕೇದಾರನಾಥ್ ಸಿನಿಮಾದ ನಮೋ ನಮೋ ಶಂಕರ್ ಹಾಡನ್ನು ಮಹಿಳೆ ಹಾಡುತ್ತಿದ್ದಾರೆ.

ನಾಗೇಶ್ ಪ್ರೀತಮ್ ಎಂಬ ಎಕ್ಸ್ ಬಳಕೆದಾರರು ಸೆಪ್ಟೆಂಬರ್ 9, 2024 ರಂದು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘ವಿಮಾನದಲ್ಲಿ ನಮಾಜ್ ಮಾಡಲು ಶುರು ಮಾಡಿದರು, ನಂತರ ಸನಾತನಿ ಮಹಿಳೆಯೊಬ್ಬಳು ಮಹಾದೇವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ..! ಜೈ ಶ್ರೀ ರಾಮ್’ ಎಂದು ಬರೆದುಕೊಂಡಿದ್ದಾರೆ.

ಹಾಗೆಯೆ ಫೇಸ್​ಬುಕ್​ನಲ್ಲಿ ದ್ರೋಣ ಎಂಬವರು ‘ವಿಮಾನದಲ್ಲಿ ನಮಾಜ್ ಮಾಡುತಿದ್ದದ್ದನ್ನ ನೋಡಿ ಶಿವನ ನಾಮ ಜಪಿಸಿದ ಹಿಂದೂ ಸಹೋದರಿ. ನಿನ್ನ ಧೈರ್ಯ ಮೆಚ್ಚುಲೇಬೇಕು ಹರ್ ಹರ್ ಮಹಾದೇವ’ ಎಂದು ಬರೆದು ಇದೇ ವೀಡಿಯೊ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಇದೇ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಮಾದಲ್ಲಿ ನಮಾಜ್‌ ಮಾಡಿದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆಯೊಬ್ಬರು ಮಹಾದೇವನ ಸ್ತೋತ್ರ ಹಾಡಲು ಶುರುಮಾಡಿದರು ಎಂದು ಹೇಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಿಡಿಯೋದಲ್ಲಿ ಹಾಡುತ್ತಿರುವ ಮಹಿಳೆ ಕಲಾವಿದೆ ಮತ್ತು ಗಾಯಕಿ ನಿಶಾ ಶಿವದಾಸನಿ ಎಂಬ ಮಾಹಿತಿ ಲಭ್ಯವಾಗಿದೆ.

ನಿಶಾ ಅವರು ಇದೇ ವೀಡಿಯೊವನ್ನು ಮತ್ತೊಂದು ಆ್ಯಂಗಲ್​ನಿಂದ ತಮ್ಮ ನಿಶಾ ಶಿವದಾಸನಿ ಯೂಟ್ಯೂಬ್ ಚಾನೆಲ್​ನಲ್ಲಿ ಮಾರ್ಚ್ 8, 2024 ರಂದು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ರ ಶುಭಾಶಯಗಳು | ನಿಶಾ ಶಿವದಾಸನಿ | ಇಂಡಿಗೋ ಏರ್‌ಲೈನ್ ಧನ್ಯವಾದಗಳು” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ನಿಶಾ ಶಿವದಾಸನಿ ಅವರು ವಿಮಾನದಲ್ಲಿರುವ ಎಲ್ಲರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ಹಾಡು ಹಾಡಿದ್ದಾರೆ. ಈ ಹಾಡಿಗೆ ವಿಮಾನದಲ್ಲಿ ಕುಳಿತಿರುವ ಇತರೆ ಪ್ರಯಾಣಿಕರು ಕೂಡ ಪ್ರೋತ್ಸಾಹ ನೀಡುತ್ತಿರುವುದನ್ನು ನೋಡಬಹುದು.

 

31 ಮಾರ್ಚ್, 2024 ರಂದು ಡ್ರಂಕ್ ಜರ್ನಲಿಸ್ಟ್‌ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿರುವುದು ಲಭ್ಯವಾಗಿದೆ.

ಇದೀಗ ಈ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ವೈರಲ್ ಆಗುತ್ತಿರುವುದನ್ನು ಗಮನಿಸಿದ ಡ್ರಂಕ್‌ ಜರ್ನಲಿಸ್ಟ್‌ ತಂಡವು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ‘ಈ ವಿಡಿಯೋಗೂ ನಮಾಜ್​ಗೂ ಯಾವುದೇ ಸಂಬಂಧವಿಲ್ಲ. ಈ ಮಹಿಳೆ ಭಜನೆಯನ್ನು ಹಾಡಿರುವ ವಿಡಿಯೋ ಇದಾಗಿದೆ ಮತ್ತು ಇದಕ್ಕೂ ಮುಸ್ಲಿಮರಿಗೂ ನಮಾಜ್‌ಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದೆ.

ಹಾಗೆಯೆ ನಾವು ಇತ್ತೀಚಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಿದ ಬಗ್ಗೆ ಸುದ್ದಿ ಪ್ರಕಟವಾಗಿದೆಯೆ ಎಂಬ ಗೂಗಲ್ ಸರ್ಚ್ ಮಾಡಿದಾಗ, ಈ ಕುರಿತು ಯಾವುದೇ ವರದಿಗಳು ಲಭ್ಯವಾಗಿಲ್. ಇನ್ನಷ್ಟು ಖಚಿತ ಮಾಹಿತಿಗಾಗಿ  ಬೆಂಗಳೂರಿನ ಇಂಡಿಗೋ ಏರ್‌ಲೈನ್ಸ್ ಅನ್ನು ನ್ಯೂಸ್‌ ಮೀಟರ್‌ ತಂಡ ಸಂಪರ್ಕಿಸಿದಾಗ, ಇತ್ತೀಚಿಗೆ ವಿಮಾನದಲ್ಲಿ ನಮಾಜ್ ಮಾಡಿರುವಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್ ಪ್ರತಿಕ್ರಿಯಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರು ವಿಮಾನದಲ್ಲಿ ಭಕ್ತಿಗೀತೆ ಹಾಡುವ ವಿಡಿಯೋವನ್ನು, ಮುಸ್ಲಿಂ ವ್ಯಕ್ತಿಯೊಬ್ಬರು ವಿಮಾನದಲ್ಲಿ ನಮಾಜ್ ಮಾಡಿದ್ದಕ್ಕೆ ಪ್ರತಿಯಾಗಿ ಮಹಿಳೆಯೊಬ್ಬರು ಶಿವ ಸ್ತೋತ್ರ ಹಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...