Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ...

FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುವುದು ನಿಜಾನಾ?

- Advertisement -
- Advertisement -

“ವಿಮಾನದಲ್ಲಿ ಟಾಯ್ಲೆಟ್‌ಗೆ ಹೋಗುವ ದಾರಿ ಬಂದ್ ಮಾಡಿ ನಮಾಜ್ ಮಾಡಲು ಶುರು ಮಾಡಿದ್ದರಿಂದ, ಸನಾತನಿ ಮಹಿಳೆಯೊಬ್ಬರು ಶಿವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ.. ಜೈ ಶ್ರೀ ರಾಮ್” ಎಂಬ ಹೇಳಿಕೆಯಿರುವ ಪೋಸ್ಟ್‌ವೊಂದು ಫೇಸ್‌ಬುಕ್  ಮತ್ತು ಎಕ್ಸ್‌ನಲ್ಲಿ (ಟ್ವಿಟರ್‌ನಲ್ಲಿ) ಸಖತ್‌ ವೈರಲ್ ಆಗುತ್ತಿದೆ.

ವಿಮಾನದ ಒಳಗೆ ಬಿಳಿ ಕೋಟ್ ಮತ್ತು ಗುಲಾಬಿ ಶರ್ಟ್ ಧರಿಸಿದ ಮಹಿಳೆಯೊಬ್ಬರು ಭಕ್ತಿ ಗೀತೆ ಹಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಮಾನದಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುವುದನ್ನು ನೋಡಿದ ಹಿಂದೂ ಮಹಿಳೆ ಪ್ರತಿಯಾಗಿ ಶಿವ ಸ್ತೋತ್ರ ಹಾಡಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಈ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದು, ಬಾಲಿವುಡ್‌ನ ಕೇದಾರನಾಥ್ ಸಿನಿಮಾದ ನಮೋ ನಮೋ ಶಂಕರ್ ಹಾಡನ್ನು ಮಹಿಳೆ ಹಾಡುತ್ತಿದ್ದಾರೆ.

ನಾಗೇಶ್ ಪ್ರೀತಮ್ ಎಂಬ ಎಕ್ಸ್ ಬಳಕೆದಾರರು ಸೆಪ್ಟೆಂಬರ್ 9, 2024 ರಂದು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘ವಿಮಾನದಲ್ಲಿ ನಮಾಜ್ ಮಾಡಲು ಶುರು ಮಾಡಿದರು, ನಂತರ ಸನಾತನಿ ಮಹಿಳೆಯೊಬ್ಬಳು ಮಹಾದೇವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ..! ಜೈ ಶ್ರೀ ರಾಮ್’ ಎಂದು ಬರೆದುಕೊಂಡಿದ್ದಾರೆ.

ಹಾಗೆಯೆ ಫೇಸ್​ಬುಕ್​ನಲ್ಲಿ ದ್ರೋಣ ಎಂಬವರು ‘ವಿಮಾನದಲ್ಲಿ ನಮಾಜ್ ಮಾಡುತಿದ್ದದ್ದನ್ನ ನೋಡಿ ಶಿವನ ನಾಮ ಜಪಿಸಿದ ಹಿಂದೂ ಸಹೋದರಿ. ನಿನ್ನ ಧೈರ್ಯ ಮೆಚ್ಚುಲೇಬೇಕು ಹರ್ ಹರ್ ಮಹಾದೇವ’ ಎಂದು ಬರೆದು ಇದೇ ವೀಡಿಯೊ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಇದೇ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಮಾದಲ್ಲಿ ನಮಾಜ್‌ ಮಾಡಿದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆಯೊಬ್ಬರು ಮಹಾದೇವನ ಸ್ತೋತ್ರ ಹಾಡಲು ಶುರುಮಾಡಿದರು ಎಂದು ಹೇಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಿಡಿಯೋದಲ್ಲಿ ಹಾಡುತ್ತಿರುವ ಮಹಿಳೆ ಕಲಾವಿದೆ ಮತ್ತು ಗಾಯಕಿ ನಿಶಾ ಶಿವದಾಸನಿ ಎಂಬ ಮಾಹಿತಿ ಲಭ್ಯವಾಗಿದೆ.

ನಿಶಾ ಅವರು ಇದೇ ವೀಡಿಯೊವನ್ನು ಮತ್ತೊಂದು ಆ್ಯಂಗಲ್​ನಿಂದ ತಮ್ಮ ನಿಶಾ ಶಿವದಾಸನಿ ಯೂಟ್ಯೂಬ್ ಚಾನೆಲ್​ನಲ್ಲಿ ಮಾರ್ಚ್ 8, 2024 ರಂದು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ರ ಶುಭಾಶಯಗಳು | ನಿಶಾ ಶಿವದಾಸನಿ | ಇಂಡಿಗೋ ಏರ್‌ಲೈನ್ ಧನ್ಯವಾದಗಳು” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ನಿಶಾ ಶಿವದಾಸನಿ ಅವರು ವಿಮಾನದಲ್ಲಿರುವ ಎಲ್ಲರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ಹಾಡು ಹಾಡಿದ್ದಾರೆ. ಈ ಹಾಡಿಗೆ ವಿಮಾನದಲ್ಲಿ ಕುಳಿತಿರುವ ಇತರೆ ಪ್ರಯಾಣಿಕರು ಕೂಡ ಪ್ರೋತ್ಸಾಹ ನೀಡುತ್ತಿರುವುದನ್ನು ನೋಡಬಹುದು.

 

31 ಮಾರ್ಚ್, 2024 ರಂದು ಡ್ರಂಕ್ ಜರ್ನಲಿಸ್ಟ್‌ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿರುವುದು ಲಭ್ಯವಾಗಿದೆ.

ಇದೀಗ ಈ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ವೈರಲ್ ಆಗುತ್ತಿರುವುದನ್ನು ಗಮನಿಸಿದ ಡ್ರಂಕ್‌ ಜರ್ನಲಿಸ್ಟ್‌ ತಂಡವು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ‘ಈ ವಿಡಿಯೋಗೂ ನಮಾಜ್​ಗೂ ಯಾವುದೇ ಸಂಬಂಧವಿಲ್ಲ. ಈ ಮಹಿಳೆ ಭಜನೆಯನ್ನು ಹಾಡಿರುವ ವಿಡಿಯೋ ಇದಾಗಿದೆ ಮತ್ತು ಇದಕ್ಕೂ ಮುಸ್ಲಿಮರಿಗೂ ನಮಾಜ್‌ಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದೆ.

ಹಾಗೆಯೆ ನಾವು ಇತ್ತೀಚಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಿದ ಬಗ್ಗೆ ಸುದ್ದಿ ಪ್ರಕಟವಾಗಿದೆಯೆ ಎಂಬ ಗೂಗಲ್ ಸರ್ಚ್ ಮಾಡಿದಾಗ, ಈ ಕುರಿತು ಯಾವುದೇ ವರದಿಗಳು ಲಭ್ಯವಾಗಿಲ್. ಇನ್ನಷ್ಟು ಖಚಿತ ಮಾಹಿತಿಗಾಗಿ  ಬೆಂಗಳೂರಿನ ಇಂಡಿಗೋ ಏರ್‌ಲೈನ್ಸ್ ಅನ್ನು ನ್ಯೂಸ್‌ ಮೀಟರ್‌ ತಂಡ ಸಂಪರ್ಕಿಸಿದಾಗ, ಇತ್ತೀಚಿಗೆ ವಿಮಾನದಲ್ಲಿ ನಮಾಜ್ ಮಾಡಿರುವಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್ ಪ್ರತಿಕ್ರಿಯಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರು ವಿಮಾನದಲ್ಲಿ ಭಕ್ತಿಗೀತೆ ಹಾಡುವ ವಿಡಿಯೋವನ್ನು, ಮುಸ್ಲಿಂ ವ್ಯಕ್ತಿಯೊಬ್ಬರು ವಿಮಾನದಲ್ಲಿ ನಮಾಜ್ ಮಾಡಿದ್ದಕ್ಕೆ ಪ್ರತಿಯಾಗಿ ಮಹಿಳೆಯೊಬ್ಬರು ಶಿವ ಸ್ತೋತ್ರ ಹಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...