Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ...

FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುವುದು ನಿಜಾನಾ?

- Advertisement -
- Advertisement -

“ವಿಮಾನದಲ್ಲಿ ಟಾಯ್ಲೆಟ್‌ಗೆ ಹೋಗುವ ದಾರಿ ಬಂದ್ ಮಾಡಿ ನಮಾಜ್ ಮಾಡಲು ಶುರು ಮಾಡಿದ್ದರಿಂದ, ಸನಾತನಿ ಮಹಿಳೆಯೊಬ್ಬರು ಶಿವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ.. ಜೈ ಶ್ರೀ ರಾಮ್” ಎಂಬ ಹೇಳಿಕೆಯಿರುವ ಪೋಸ್ಟ್‌ವೊಂದು ಫೇಸ್‌ಬುಕ್  ಮತ್ತು ಎಕ್ಸ್‌ನಲ್ಲಿ (ಟ್ವಿಟರ್‌ನಲ್ಲಿ) ಸಖತ್‌ ವೈರಲ್ ಆಗುತ್ತಿದೆ.

ವಿಮಾನದ ಒಳಗೆ ಬಿಳಿ ಕೋಟ್ ಮತ್ತು ಗುಲಾಬಿ ಶರ್ಟ್ ಧರಿಸಿದ ಮಹಿಳೆಯೊಬ್ಬರು ಭಕ್ತಿ ಗೀತೆ ಹಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಮಾನದಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುವುದನ್ನು ನೋಡಿದ ಹಿಂದೂ ಮಹಿಳೆ ಪ್ರತಿಯಾಗಿ ಶಿವ ಸ್ತೋತ್ರ ಹಾಡಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಈ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದು, ಬಾಲಿವುಡ್‌ನ ಕೇದಾರನಾಥ್ ಸಿನಿಮಾದ ನಮೋ ನಮೋ ಶಂಕರ್ ಹಾಡನ್ನು ಮಹಿಳೆ ಹಾಡುತ್ತಿದ್ದಾರೆ.

ನಾಗೇಶ್ ಪ್ರೀತಮ್ ಎಂಬ ಎಕ್ಸ್ ಬಳಕೆದಾರರು ಸೆಪ್ಟೆಂಬರ್ 9, 2024 ರಂದು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘ವಿಮಾನದಲ್ಲಿ ನಮಾಜ್ ಮಾಡಲು ಶುರು ಮಾಡಿದರು, ನಂತರ ಸನಾತನಿ ಮಹಿಳೆಯೊಬ್ಬಳು ಮಹಾದೇವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ..! ಜೈ ಶ್ರೀ ರಾಮ್’ ಎಂದು ಬರೆದುಕೊಂಡಿದ್ದಾರೆ.

ಹಾಗೆಯೆ ಫೇಸ್​ಬುಕ್​ನಲ್ಲಿ ದ್ರೋಣ ಎಂಬವರು ‘ವಿಮಾನದಲ್ಲಿ ನಮಾಜ್ ಮಾಡುತಿದ್ದದ್ದನ್ನ ನೋಡಿ ಶಿವನ ನಾಮ ಜಪಿಸಿದ ಹಿಂದೂ ಸಹೋದರಿ. ನಿನ್ನ ಧೈರ್ಯ ಮೆಚ್ಚುಲೇಬೇಕು ಹರ್ ಹರ್ ಮಹಾದೇವ’ ಎಂದು ಬರೆದು ಇದೇ ವೀಡಿಯೊ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಇದೇ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಮಾದಲ್ಲಿ ನಮಾಜ್‌ ಮಾಡಿದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆಯೊಬ್ಬರು ಮಹಾದೇವನ ಸ್ತೋತ್ರ ಹಾಡಲು ಶುರುಮಾಡಿದರು ಎಂದು ಹೇಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಿಡಿಯೋದಲ್ಲಿ ಹಾಡುತ್ತಿರುವ ಮಹಿಳೆ ಕಲಾವಿದೆ ಮತ್ತು ಗಾಯಕಿ ನಿಶಾ ಶಿವದಾಸನಿ ಎಂಬ ಮಾಹಿತಿ ಲಭ್ಯವಾಗಿದೆ.

ನಿಶಾ ಅವರು ಇದೇ ವೀಡಿಯೊವನ್ನು ಮತ್ತೊಂದು ಆ್ಯಂಗಲ್​ನಿಂದ ತಮ್ಮ ನಿಶಾ ಶಿವದಾಸನಿ ಯೂಟ್ಯೂಬ್ ಚಾನೆಲ್​ನಲ್ಲಿ ಮಾರ್ಚ್ 8, 2024 ರಂದು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ರ ಶುಭಾಶಯಗಳು | ನಿಶಾ ಶಿವದಾಸನಿ | ಇಂಡಿಗೋ ಏರ್‌ಲೈನ್ ಧನ್ಯವಾದಗಳು” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ನಿಶಾ ಶಿವದಾಸನಿ ಅವರು ವಿಮಾನದಲ್ಲಿರುವ ಎಲ್ಲರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ಹಾಡು ಹಾಡಿದ್ದಾರೆ. ಈ ಹಾಡಿಗೆ ವಿಮಾನದಲ್ಲಿ ಕುಳಿತಿರುವ ಇತರೆ ಪ್ರಯಾಣಿಕರು ಕೂಡ ಪ್ರೋತ್ಸಾಹ ನೀಡುತ್ತಿರುವುದನ್ನು ನೋಡಬಹುದು.

 

31 ಮಾರ್ಚ್, 2024 ರಂದು ಡ್ರಂಕ್ ಜರ್ನಲಿಸ್ಟ್‌ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿರುವುದು ಲಭ್ಯವಾಗಿದೆ.

ಇದೀಗ ಈ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ವೈರಲ್ ಆಗುತ್ತಿರುವುದನ್ನು ಗಮನಿಸಿದ ಡ್ರಂಕ್‌ ಜರ್ನಲಿಸ್ಟ್‌ ತಂಡವು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ‘ಈ ವಿಡಿಯೋಗೂ ನಮಾಜ್​ಗೂ ಯಾವುದೇ ಸಂಬಂಧವಿಲ್ಲ. ಈ ಮಹಿಳೆ ಭಜನೆಯನ್ನು ಹಾಡಿರುವ ವಿಡಿಯೋ ಇದಾಗಿದೆ ಮತ್ತು ಇದಕ್ಕೂ ಮುಸ್ಲಿಮರಿಗೂ ನಮಾಜ್‌ಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದೆ.

ಹಾಗೆಯೆ ನಾವು ಇತ್ತೀಚಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಿದ ಬಗ್ಗೆ ಸುದ್ದಿ ಪ್ರಕಟವಾಗಿದೆಯೆ ಎಂಬ ಗೂಗಲ್ ಸರ್ಚ್ ಮಾಡಿದಾಗ, ಈ ಕುರಿತು ಯಾವುದೇ ವರದಿಗಳು ಲಭ್ಯವಾಗಿಲ್. ಇನ್ನಷ್ಟು ಖಚಿತ ಮಾಹಿತಿಗಾಗಿ  ಬೆಂಗಳೂರಿನ ಇಂಡಿಗೋ ಏರ್‌ಲೈನ್ಸ್ ಅನ್ನು ನ್ಯೂಸ್‌ ಮೀಟರ್‌ ತಂಡ ಸಂಪರ್ಕಿಸಿದಾಗ, ಇತ್ತೀಚಿಗೆ ವಿಮಾನದಲ್ಲಿ ನಮಾಜ್ ಮಾಡಿರುವಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್ ಪ್ರತಿಕ್ರಿಯಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರು ವಿಮಾನದಲ್ಲಿ ಭಕ್ತಿಗೀತೆ ಹಾಡುವ ವಿಡಿಯೋವನ್ನು, ಮುಸ್ಲಿಂ ವ್ಯಕ್ತಿಯೊಬ್ಬರು ವಿಮಾನದಲ್ಲಿ ನಮಾಜ್ ಮಾಡಿದ್ದಕ್ಕೆ ಪ್ರತಿಯಾಗಿ ಮಹಿಳೆಯೊಬ್ಬರು ಶಿವ ಸ್ತೋತ್ರ ಹಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...