Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ...

FACT CHECK : ಮುಸ್ಲಿಂ ವ್ಯಕ್ತಿ ವಿಮಾನದಲ್ಲಿ ನಮಾಜ್‌ ಮಾಡಿದ್ದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆ ಶಿವನ ಸ್ತೋತ್ರ ಹಾಡಿದ್ದಾರೆ ಎಂಬುವುದು ನಿಜಾನಾ?

- Advertisement -
- Advertisement -

“ವಿಮಾನದಲ್ಲಿ ಟಾಯ್ಲೆಟ್‌ಗೆ ಹೋಗುವ ದಾರಿ ಬಂದ್ ಮಾಡಿ ನಮಾಜ್ ಮಾಡಲು ಶುರು ಮಾಡಿದ್ದರಿಂದ, ಸನಾತನಿ ಮಹಿಳೆಯೊಬ್ಬರು ಶಿವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ.. ಜೈ ಶ್ರೀ ರಾಮ್” ಎಂಬ ಹೇಳಿಕೆಯಿರುವ ಪೋಸ್ಟ್‌ವೊಂದು ಫೇಸ್‌ಬುಕ್  ಮತ್ತು ಎಕ್ಸ್‌ನಲ್ಲಿ (ಟ್ವಿಟರ್‌ನಲ್ಲಿ) ಸಖತ್‌ ವೈರಲ್ ಆಗುತ್ತಿದೆ.

ವಿಮಾನದ ಒಳಗೆ ಬಿಳಿ ಕೋಟ್ ಮತ್ತು ಗುಲಾಬಿ ಶರ್ಟ್ ಧರಿಸಿದ ಮಹಿಳೆಯೊಬ್ಬರು ಭಕ್ತಿ ಗೀತೆ ಹಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ವಿಮಾನದಲ್ಲಿ ವ್ಯಕ್ತಿಯೊಬ್ಬರು ನಮಾಜ್ ಮಾಡುವುದನ್ನು ನೋಡಿದ ಹಿಂದೂ ಮಹಿಳೆ ಪ್ರತಿಯಾಗಿ ಶಿವ ಸ್ತೋತ್ರ ಹಾಡಲು ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ವಿಮಾನದ ಕ್ಯಾಬಿನ್ ಸಿಬ್ಬಂದಿ ಈ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದು, ಬಾಲಿವುಡ್‌ನ ಕೇದಾರನಾಥ್ ಸಿನಿಮಾದ ನಮೋ ನಮೋ ಶಂಕರ್ ಹಾಡನ್ನು ಮಹಿಳೆ ಹಾಡುತ್ತಿದ್ದಾರೆ.

ನಾಗೇಶ್ ಪ್ರೀತಮ್ ಎಂಬ ಎಕ್ಸ್ ಬಳಕೆದಾರರು ಸೆಪ್ಟೆಂಬರ್ 9, 2024 ರಂದು ಈ ವೀಡಿಯೊವನ್ನು ಹಂಚಿಕೊಂಡಿದ್ದು, ‘ವಿಮಾನದಲ್ಲಿ ನಮಾಜ್ ಮಾಡಲು ಶುರು ಮಾಡಿದರು, ನಂತರ ಸನಾತನಿ ಮಹಿಳೆಯೊಬ್ಬಳು ಮಹಾದೇವನ ಸ್ತೋತ್ರ ಹಾಡಲು ಶುರು ಮಾಡಿದರು. ಇದು ಅದ್ಭುತವಾಗಿದೆ..! ಜೈ ಶ್ರೀ ರಾಮ್’ ಎಂದು ಬರೆದುಕೊಂಡಿದ್ದಾರೆ.

ಹಾಗೆಯೆ ಫೇಸ್​ಬುಕ್​ನಲ್ಲಿ ದ್ರೋಣ ಎಂಬವರು ‘ವಿಮಾನದಲ್ಲಿ ನಮಾಜ್ ಮಾಡುತಿದ್ದದ್ದನ್ನ ನೋಡಿ ಶಿವನ ನಾಮ ಜಪಿಸಿದ ಹಿಂದೂ ಸಹೋದರಿ. ನಿನ್ನ ಧೈರ್ಯ ಮೆಚ್ಚುಲೇಬೇಕು ಹರ್ ಹರ್ ಮಹಾದೇವ’ ಎಂದು ಬರೆದು ಇದೇ ವೀಡಿಯೊ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಇದೇ ಹೇಳಿಕೆಯೊಂದಿಗೆ ವೈರಲ್ ಆಗಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಮಾದಲ್ಲಿ ನಮಾಜ್‌ ಮಾಡಿದಕ್ಕೆ ಪ್ರತಿಯಾಗಿ ಹಿಂದೂ ಮಹಿಳೆಯೊಬ್ಬರು ಮಹಾದೇವನ ಸ್ತೋತ್ರ ಹಾಡಲು ಶುರುಮಾಡಿದರು ಎಂದು ಹೇಳಲಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವಿಡಿಯೋದಲ್ಲಿ ಹಾಡುತ್ತಿರುವ ಮಹಿಳೆ ಕಲಾವಿದೆ ಮತ್ತು ಗಾಯಕಿ ನಿಶಾ ಶಿವದಾಸನಿ ಎಂಬ ಮಾಹಿತಿ ಲಭ್ಯವಾಗಿದೆ.

ನಿಶಾ ಅವರು ಇದೇ ವೀಡಿಯೊವನ್ನು ಮತ್ತೊಂದು ಆ್ಯಂಗಲ್​ನಿಂದ ತಮ್ಮ ನಿಶಾ ಶಿವದಾಸನಿ ಯೂಟ್ಯೂಬ್ ಚಾನೆಲ್​ನಲ್ಲಿ ಮಾರ್ಚ್ 8, 2024 ರಂದು ಅಪ್‌ಲೋಡ್ ಮಾಡಿದ್ದಾರೆ. ಜೊತೆಗೆ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ರ ಶುಭಾಶಯಗಳು | ನಿಶಾ ಶಿವದಾಸನಿ | ಇಂಡಿಗೋ ಏರ್‌ಲೈನ್ ಧನ್ಯವಾದಗಳು” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ.

ನಿಶಾ ಶಿವದಾಸನಿ ಅವರು ವಿಮಾನದಲ್ಲಿರುವ ಎಲ್ಲರ ಸಮ್ಮುಖದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಈ ಹಾಡು ಹಾಡಿದ್ದಾರೆ. ಈ ಹಾಡಿಗೆ ವಿಮಾನದಲ್ಲಿ ಕುಳಿತಿರುವ ಇತರೆ ಪ್ರಯಾಣಿಕರು ಕೂಡ ಪ್ರೋತ್ಸಾಹ ನೀಡುತ್ತಿರುವುದನ್ನು ನೋಡಬಹುದು.

 

31 ಮಾರ್ಚ್, 2024 ರಂದು ಡ್ರಂಕ್ ಜರ್ನಲಿಸ್ಟ್‌ ಎಂಬ ಎಕ್ಸ್ ಖಾತೆಯಲ್ಲಿ ಇದೇ ವೈರಲ್ ವಿಡಿಯೋವನ್ನು ಪೋಸ್ಟ್ ಮಾಡಿರುವುದು ಲಭ್ಯವಾಗಿದೆ.

ಇದೀಗ ಈ ವಿಡಿಯೋ ಸುಳ್ಳು ಮಾಹಿತಿಯೊಂದಿಗೆ ವೈರಲ್ ಆಗುತ್ತಿರುವುದನ್ನು ಗಮನಿಸಿದ ಡ್ರಂಕ್‌ ಜರ್ನಲಿಸ್ಟ್‌ ತಂಡವು ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದೆ. ‘ಈ ವಿಡಿಯೋಗೂ ನಮಾಜ್​ಗೂ ಯಾವುದೇ ಸಂಬಂಧವಿಲ್ಲ. ಈ ಮಹಿಳೆ ಭಜನೆಯನ್ನು ಹಾಡಿರುವ ವಿಡಿಯೋ ಇದಾಗಿದೆ ಮತ್ತು ಇದಕ್ಕೂ ಮುಸ್ಲಿಮರಿಗೂ ನಮಾಜ್‌ಗೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದೆ.

ಹಾಗೆಯೆ ನಾವು ಇತ್ತೀಚಿಗೆ ಇಂಡಿಗೋ ಏರ್‌ಲೈನ್ಸ್ ವಿಮಾನದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ನಮಾಜ್ ಮಾಡಿದ ಬಗ್ಗೆ ಸುದ್ದಿ ಪ್ರಕಟವಾಗಿದೆಯೆ ಎಂಬ ಗೂಗಲ್ ಸರ್ಚ್ ಮಾಡಿದಾಗ, ಈ ಕುರಿತು ಯಾವುದೇ ವರದಿಗಳು ಲಭ್ಯವಾಗಿಲ್. ಇನ್ನಷ್ಟು ಖಚಿತ ಮಾಹಿತಿಗಾಗಿ  ಬೆಂಗಳೂರಿನ ಇಂಡಿಗೋ ಏರ್‌ಲೈನ್ಸ್ ಅನ್ನು ನ್ಯೂಸ್‌ ಮೀಟರ್‌ ತಂಡ ಸಂಪರ್ಕಿಸಿದಾಗ, ಇತ್ತೀಚಿಗೆ ವಿಮಾನದಲ್ಲಿ ನಮಾಜ್ ಮಾಡಿರುವಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಇಂಡಿಗೋ ಏರ್‌ಲೈನ್ಸ್ ಪ್ರತಿಕ್ರಿಯಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2024 ರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳೆಯರು ವಿಮಾನದಲ್ಲಿ ಭಕ್ತಿಗೀತೆ ಹಾಡುವ ವಿಡಿಯೋವನ್ನು, ಮುಸ್ಲಿಂ ವ್ಯಕ್ತಿಯೊಬ್ಬರು ವಿಮಾನದಲ್ಲಿ ನಮಾಜ್ ಮಾಡಿದ್ದಕ್ಕೆ ಪ್ರತಿಯಾಗಿ ಮಹಿಳೆಯೊಬ್ಬರು ಶಿವ ಸ್ತೋತ್ರ ಹಾಡುತ್ತಿದ್ದಾರೆ ಎಂದು ಸುಳ್ಳು ಮತ್ತು ಕೋಮು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...